ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ


Team Udayavani, Jul 28, 2021, 11:21 PM IST

Untitled-1

ಚಾಮರಾಜನಗರ:  ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ   ಸುದ್ದಿ ಕೇಳಿ ಮಾನಸಿಕವಾಗಿ ನೊಂದು  ಆತ್ಮಹತ್ಯೆ ಮಾಡಿಕೊಂಡ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ರಾತ್ರಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು.

ಜಿಲ್ಲೆಯ ನಿಕಟಪೂರ್ವ ಉಸ್ತುವಾರಿ ಸಚಿವರೂ ಆದ ಸುರೇಶ್ ಕುಮಾರ್,  ಬುಧವಾರ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು. ರವಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಟ್ಟಾ ಅಭಿಮಾನಿಯಾಗಿದ್ದರು. ಹಿಂದಿನ ದಿನ ರಾಜೀನಾಮೆ‌ ಸುದ್ದಿ ಕೇಳಿ ವಿಚಲಿತರಾಗಿದ್ದರೆಂದು ಅವರ ಕುಟುಂಬಸ್ಥರಿಂದ ಅರಿತಿದ್ದೇನೆ. ಯಡಿಯೂರಪ್ಪನವರ ರಾಜಿನಾಮೆಯನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ವಿಪರೀತ ಕೃತ್ಯಕ್ಕೆ  ಅವರು ಮುಂದಾಗಬಾರದಾಗಿತ್ತು. ಅವರ ಕುಟುಂಬವನ್ನು  ಅವರು ಅನಾಥರನ್ನಾಗಿಸಿ  ಪೋಷಕರು ಮತ್ತು ಕುಟಂಬದ ಸದಸ್ಯರನ್ನು ತೀವ್ರ ಸಂಕಷ್ಟಕ್ಕೆ ಈಡು ಮಾಡುವ ನಿರ್ಧಾರವನ್ನು ಅವರು ತೆಗೆದುಕೊಳ್ಳಬಾರದಿತ್ತೆಂದು ವಿಷಾದ ವ್ಯಕ್ತಪಡಿಸಿದರು.

ಸುರೇಶ್ ಕುಮಾರ್ ಅವರು ಇಂದು ನೂತನ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ರಾಜಭವನದಿಂದ ನೇರವಾಗಿ ಬೊಮ್ಮಲಾಪುರಕ್ಕೆ ಆಗಮಿಸಿದರು.  ಮೃತ ರವಿಯವರ ಮನೆಗೆ ಭೇಟಿ ನೀಡಿ ಅವರ ತಾಯಿಯೊಂದಿಗೆ ಕುಳಿತು ಸುದೀರ್ಘವಾಗಿ ಮಾತನಾಡಿದರು.

ಯಾವುದೇ ಅಭಿಮಾನಿಗಳಾಗಿರಲಿ, ಪಕ್ಷದ ಕಾರ್ಯಕರ್ತರಾಗಿರಲಿ, ಯಾರೇ ಆಗಿರಲಿ ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈಹಾಕಬಾರದು. ಜೀವನದಲ್ಲಿ ಇಂತಹ ಹಲವಾರು ಘಟನೆಗಳು, ಕಷ್ಟನಷ್ಟಗಳು  ಬರುತ್ತವೆ. ಎಲ್ಲವನ್ನೂ ಸಮಾಧಾನದಿಂದ ಎದುರಿಸಬೇಕೆಂದು ಅವರು ಹೇಳಿದರು.

ರವಿಯವರು ತಮ್ಮ ರಾಜಿನಾಮೆ ಸುದ್ದಿ ಕೇಳಿ ಆತ್ಮಹತ್ಯೆಗೆ ಮುಂದಾಗಿದ್ದನ್ನು ತಿಳಿದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ತೀವ್ರ ನೊಂದುಕೊಂಡಿದ್ದಾರೆಂದು ಸುರೇಶ್  ಕುಮಾರ್ ಹೇಳಿದರು.

ತಮ್ಮ ಅಭಿಮಾನಿ ಆತ್ಮಹತ್ಯೆ ರವಿಯವರ ಆತ್ಮಹತ್ಯೆ ಸುದ್ದಿ ತಿಳಿದ ಬಿ.ಎಸ್. ಯಡಿಯೂರಪ್ಪನವರೂ ಸಹ ಸೋಮವಾರವೇ ಮೃತನ ಪೋಷಕರೊಂದಿಗೆ ದೂರವಾಣಿ ಮೂಲಕವೇ ಮಾತನಾಡಿ ಸಾಂತ್ವನ  ಹೇಳಿದ್ದರು. ಹಾಗೆಯೇ ಯಾವುದೇ ಕಾರ್ಯಕರ್ತ, ಅಭಿಮಾನಿಗಳು ಸಹ ಇಂತಹ ಕೃತ್ಯಕ್ಕೆ ಮುಂದಾಗಬಾರದೆಂದು ಹೇಳಿದ್ದರಲ್ಲದೇ ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಸಲಹೆ ನೀಡಿದ್ದರು.

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ಸಿ.ಎಸ್.  ನಿರಂಜನ್ ಕುಮಾರ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.