ಜಿಲ್ಲೆಯಲ್ಲಿ ಸ್ವಚ್ಛೋತ್ಸವ, ನಿತ್ಯೋತ್ಸವ ಮಾಸಾಚರಣೆ


Team Udayavani, Oct 2, 2020, 12:51 PM IST

ಜಿಲ್ಲೆಯಲ್ಲಿ ಸ್ವಚ್ಛೋತ್ಸವ, ನಿತ್ಯೋತ್ಸವ ಮಾಸಾಚರಣೆ

ಚಾಮರಾಜನಗರ: ಜಿಪಂನ ಸ್ವತ್ಛ ಭಾರತ್‌ ಮಿಷನ್‌ (ಗ್ರಾ) ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಸಮಾರೋಪದ ಗೌರವ ಸೂಚಕವಾಗಿ ಜಿಲ್ಲೆಯ ಪ್ರತಿ ಗ್ರಾಮವನ್ನು ಸ್ವಚ್ಛ, ಸುಂದರ, ಆರೋಗ್ಯಯುತ ಹಾಗೂ ತ್ಯಾಜ್ಯಮುಕ್ತವನ್ನಾಗಿಸಲು ಅಕ್ಟೋಬರ್‌ ತಿಂಗಳನ್ನು ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನಾಗಿ ಹಮ್ಮಿಕೊಳ್ಳಲಾಗಿದೆ.

ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಅ.2 ರಿಂದ 31 ರವರೆಗೆ ನಡೆಸಲಾಗುತ್ತಿದ್ದು ವಿಶೇಷವಾಗಿ ಎಲ್ಲಾ ಗ್ರಾಪಂಗಳಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ.

ಏನಿದು ಸ್ವಚ್ಛ ಸಂಕೀರ್ಣ?: ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ನಿರ್ಮಿಸಲಾಗುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಸ್ವತ್ಛ ಸಂಕೀರ್ಣ ವಿನ್ಯಾಸಗೊಳಿಸಲಾಗುವುದು. ಸ್ವಚ್ಛ ಸಂಕೀರ್ಣ ಏಕರೂಪದ ಬಣ್ಣ, ಚಿಹ್ನೆ ಸಂದೇಶ, ವಿನ್ಯಾಸವನ್ನೊಳಗೊಂಡಿರುತ್ತದೆ. ಸ್ವಚ್ಛ ಸಂಕೀರ್ಣವನ್ನು ಘನ ತ್ಯಾಜ್ಯ, ಇ-ತ್ಯಾಜ್ಯ, ಜೈವಿಕ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ ಸಂಗ್ರಹಿಸಲು, ಸಂಸ್ಕರಿಸಲು ಮೀಸಲಾದ ಪ್ರದೇಶಗಳೊಂದಿಗೆ ಸ್ವಯಂ ಸುಸ್ಥಿರ ವ್ಯವಸ್ಥೆಯನ್ನೊಳಗೊಂಡ ಪರಿಸರ-ಉದ್ಯಾನವನದ ಅನುಭವ ನೀಡುವ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಪಂನಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ.

ಜಿಲ್ಲೆಯ 130 ಗ್ರಾಪಂಗಳ ಪೈಕಿ 45 ಗ್ರಾಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ರಾಜ್ಯ ಕಚೇರಿ ವಿಸ್ತೃತ ಯೋಜನೆ ವರದಿ (ಡಿಪಿಆರ್‌) ಅನುಮೋದನೆ ನೀಡಿದೆ. ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಪಂನಲ್ಲಿ ಈಗಾಗಲೇ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಿಸಲಾಗಿದ್ದು, ಅ.3 ರಂದು ತ್ಯಾಜ್ಯ ಘಟಕಕ್ಕೆ ಚಾಲನೆ ನೀಡಲಾಗುತ್ತದೆ. ಜಿಲ್ಲಾ, ತಾಲೂಕು, ಗ್ರಾಪಂಗಳ ಸಹಯೋಗದೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಲು ಕ್ರಮಕೈಗೊಂಡಿದ್ದು, ಜಿಲ್ಲೆಯಾದ್ಯಂತ ಏಕರೂಪದಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಿಸುವ ಉದ್ದೇಶದಿಂದ ಅ.3 ರಂದು ಘನತ್ಯಾಜ್ಯ ನಿರ್ವಹಣಾ ಘಟಕಗಳ ಏಕರೂಪದ ಬ್ರ್ಯಾಡಿಂಗ್‌ ಅನ್ನು ಲೋಕಾರ್ಪಣೆ ಮಾಡಲಾಗುತ್ತದೆ.

ಪುಣಜನೂರು ಬ್ರ್ಯಾಂಡಿಂಗ್‌ ಲೋಕಾರ್ಪಣೆ: ಪುಣಜನೂರು ಗ್ರಾಪಂನಲ್ಲಿ ಆರಂಭಗೊಂಡಿರುವ ಘನತ್ಯಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್‌ನ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಗೆ ಜಿಲ್ಲಾ ಉಸ್ತುವಾರಿ ಸಚಿವರು ಅ.3 ರಂದು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯ ವಿಂಗಡಣೆ, ತ್ಯಾಜ್ಯ ಸಂಗ್ರಹಣೆ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಸಲುವಾಗಿ ಚರಂಡಿ, ಬೀದಿ, ಶಾಲೆ, ಅಂಗನವಾಡಿ ಶುಚಿಗೊಳಿಸುವ, ಪ್ರೌಢಶಾಲಾ ಮಕ್ಕಳಿಗೆಆನ್‌ಲೈನ್‌ ಮೂಲಕ ಪ್ರಬಂಧ ಸ್ಪರ್ಧೆ, ಕಿರುಚಿತ್ರ ಪ್ರದರ್ಶನ, ತ್ಯಾಜ್ಯ ಮತ್ತು ಶೌಚಾಲಯಗಳ ಬಳಕೆ ಕುರಿತು ಮನೆ ಮನೆ ಭೇಟಿ, ತಿಪ್ಪೆಗುಂಡಿ ನಿರ್ವಹಣೆ, ಹೊಲದಲ್ಲಿನ ಹಸಿಕಸವನ್ನು ಗೊಬ್ಬರವನ್ನಾಗಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರ ಸಹಭಾಗಿತ್ವದ ಅಗತ್ಯ: ಈ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯ ಎಲ್ಲಾ ಚಟುವಟಿಕೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಿದ್ದು, ಆಯಾ ಗ್ರಾಪಂನೊಂದಿಗೆ ಸಹಕಾರ ನೀಡಿ ಸ್ವಚ್ಛೋತ್ಸವನಿತ್ಯೋತ್ಸವ ಯಶಸ್ವಿಗೊಳಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್‌ ಹರ್ಷಲ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.