6 ತಿಂಗಳೊಳಗೆ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ


Team Udayavani, Sep 30, 2020, 1:23 PM IST

6 ತಿಂಗಳೊಳಗೆ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ

ಚಾಮರಾಜನಗರ: ಜಿಲ್ಲೆಯನ್ನು ಇನ್ನು 6  ತಿಂಗಳೊಳಗೆ ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಲು ಅಗತ್ಯವಿರುವ ಕಾರ್ಯಯೋಜನೆ ರೂಪಿಸಿ ಇದರ ಅನುಷ್ಠಾನಕ್ಕೆ ಕಾರ್ಯೋನ್ಮುಖ ರಾಗುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಎಷ್ಟು ಸಂಖ್ಯೆಯಲ್ಲಿ ಬಾಲ ಕಾರ್ಮಿಕರಿದ್ದಾರೆ? ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ? ಎಂದು ಪತ್ತೆಹಚ್ಚಬೇಕು, ಅಗತ್ಯ ಪೂರ್ವ ಸಿದ್ಧತೆಯೊಂದಿಗೆ ಸಮೀಕ್ಷೆ ನಡೆಸಬೇಕು. ಕಾರ್ಯಕ್ಷಮತೆಹೆಚ್ಚಿಸಲುನೆರವಾಗುವಮೊಬೈಲ್‌ ಆ್ಯಪ್‌, ಸಾಫ್ಟ್ವೇರ್‌ ಅನ್ನು ಅಭಿವೃದ್ಧಿಗೊಳಿಸಿ ಕೊಳ್ಳಬೇಕು. ನಿಗದಿತ ನಮೂನೆಯನ್ನು ಸಿದ್ಧಪಡಿಸಿ ಕೊಳ್ಳಬೇಕು. ಇತರೆ ಇಲಾಖೆಗಳ ನೆರವು ಪಡೆದು ಸಮೀಕ್ಷೆ ಪೂರ್ಣಗೊಳಿಸಬೇಕೆಂದರು.

ಸಮೀಕ್ಷೆಗೆ ಮೊದಲು ಸಾಕಷ್ಟು ಜಾಗೃತಿ ಕಾರ್ಯ ಕ್ರಮಗಳನ್ನುನಡೆಸಬೇಕಿದೆ,ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕಿದೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾತ್ರವಲ್ಲ ಇತರೆ ಸಂಬಂಧಪಟ್ಟ ಇಲಾಖೆಗಳುಜೊತೆಗೂಡಿಜಂಟಿಕಾರ್ಯಾಚರಣೆ ನಡೆಸಿ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಬೇಕಿದೆ. ಈ ಎಲ್ಲವೂ ಯಶಸ್ವಿ ಯಾಗಲು ಕಾರ್ಯಬದ್ಧ ಯೋಜನೆ ತಯಾರಿ ಮಾಡಿಕೊಳ್ಳಬೇಕೆಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ  ಯೋಜನಾ ಬದ್ಧವಾಗಿ ಸಮೀಕ್ಷೆ ಕೈಗೊಳ್ಳಲು ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯಬೇಕು, ಆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೂ ಸಮೀಕ್ಷೆ ನಡೆಸಿ ಬಾಲ ಕಾರ್ಮಿಕ ಮುಕ್ತವೆಂದು ಘೋಷಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಗುರಿ ನಿಗದಿ ಪಡಿಸಿಕೊಂಡು ಕಾಲಮಿತಿಯೊಳಗೆ ಸಮೀಕ್ಷೆ ಕೈಗೊಳ್ಳಬೇಕು. ಈ ಬಗ್ಗೆ ಪ್ರಗತಿ ಪರಿಶೀಲನೆಯಾಗಬೇಕು ಎಂದರು.

ಫ‌ಲಕ ಪ್ರದರ್ಶಿಸಿ: ಬಾಲ ಕಾರ್ಮಿಕರ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಮಕ್ಕಳ ನೆರವಿಗಾಗಿ ಸಹಾಯವಾಣಿ ಸಂಖ್ಯೆ 1098 ಲಭ್ಯವಿದೆ. ಇದರ ಸದುಪಯೋಗಕ್ಕಾಗಿ ವ್ಯಾಪಕ ಪ್ರಚಾರ ಮಾಡಬೇಕಿದೆ. ಎಲ್ಲಾ ಸರ್ಕಾರಿ ವಾಹನ, ಪೊಲೀಸ್‌ ಠಾಣೆ, ರೈಲು, ಬಸ್‌ ನಿಲ್ದಾಣ, ಆಸ ³ತ್ರೆ, ಶಾಲೆ, ಮಾರುಕಟ್ಟೆ, ಹೋಟೆಲ್‌, ಅಂಗಡಿ ಮುಂಭಾಗ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯ ನ್ನೊಳಗೊಂಡ ಫ‌ಲಕಗಳನ್ನು ಪ್ರದರ್ಶಿಸ ಬೇಕು. ರೆಡಿಯೋ ಮೂಲಕವೂ ತಲುಪುವ ಹಾಗೆ ವ್ಯವಸ್ಥೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿ ಮಹೇಶ್‌, ಡಿವೈಎಸ್‌ಪಿ ಅನ್ಸರ್‌ ಅಲಿ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.