ಸರ್ಕಾರದ ಸವಲತ್ತು ಸದುಪಯೋಗಿಸಿಕೊಳ್ಳಿ


Team Udayavani, May 2, 2019, 3:00 AM IST

sarakaada

ಕೊಳ್ಳೇಗಾಲ: ಅಸಂಘಟಿತ ಕಾರ್ಮಿಕರ ಉದ್ಧಾರಕ್ಕಾಗಿ ಸರ್ಕಾರ ಕೈಗೊಳ್ಳುವ ಸವಲತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿ ಸರ್ಕಾರದ ಸವಲತ್ತುಗಳು ಲಭಿಸುವಂತೆ ಮಾಡಬೇಕು ಎಂದು ತಾಲೂಕು ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಒತ್ತಾಯಿಸಿದರು.

ನಗರದ ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ನೀಡುವ ಕೆಲವು ಸವಲತ್ತುಗಳು ಕಾರ್ಮಿಕರಿಗೆ ತಿಳಿಯದಂತೆ ಆಗಿದ್ದು, ಕಡ್ಡಾಯವಾಗಿ ಪ್ರತಿಯೊಬ್ಬರಿಗೂ ಸವಲತ್ತುಗಳ ಅರಿವು ಮೂಡಿಸುವ ಪ್ರಯತ್ನ ಆದಾಗ ಮಾತ್ರ ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಸಾಧ್ಯ ಎಂದರು.

ಸರ್ಕಾರದಿಂದ ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ಯಾವುದೇ ಸೌಲಭ್ಯ ದೊರಯದೆ ವಂಚಿತರಾಗುತ್ತಿದ್ದು, ಅಂತಹ ಕಾರ್ಮಿಕರನ್ನು ಸರ್ಕಾರ ಗುರುತಿಸಿ ಅವರಿಗೂ ಸಹ ಸರ್ಕಾರದ ಸೌಲಭ್ಯಗಳು ದಕ್ಕುವಂತೆ ಮಾಡಿದಾಗ ಮಾತ್ರ ಕಾರ್ಮಿಕರ ದಿನಾಚರಣೆ ಸಾರ್ಥಕವಾಗಲಿದೆ ಎಂದು ತಿಳಿಸಿದರು.

ಕಾರ್ಮಿಕರ ದಿನಾಚರಣೆಯನ್ನು ಕಳೆದ 10 ವರ್ಷಗಳಿಂದ ಸಂಘದಿಂದ ಆಚರಿಸುತ್ತಾ ಬಂದಿದ್ದು, ಸಂಘದ ಸದಸ್ಯರು ನೀಡುವ ದೇಣಿಗೆಯಿಂದ ದಿನಾಚರಣೆಯನ್ನು ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಬಡಮಕ್ಕಳಿಗೆ ಉಚಿತ ಬಟ್ಟೆ, ಪುಸ್ತಕ ಮತ್ತು ಉಪಹಾರಗಳನ್ನು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಡವರಿಗೆ ಸವಲತ್ತುಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ಮೆರವಣಿಗೆ: ನಗರದ ಉಮಾಶಂಕರ್‌ ಕಲ್ಯಾಣ ಮಂಟಪದ ಬಳಿ ಇರುವ ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಹೊರಟ ಮೆರವಣಿಗೆ ಬಸ್‌ ನಿಲ್ದಾಣ, ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌, ಡಾ. ಬಿ.ಆರ್‌. ಅಂಬೇಡ್ಕರ್‌, ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ರಸ್ತೆ ಆರ್‌ಎಂಸಿ ಆವರಣದಲ್ಲಿ ಅಂತ್ಯಗೊಂಡಿತು.

ಬುದ್ಧಿಮಾಂದ್ಯ ಮಕ್ಕಳು: ಮೆರವಣಿಗೆ ಆರ್‌ಎಂಸಿಗೆ ಅಂತ್ಯಗೊಂಡ ಬಳಿಕ ಸಂಘದ ಪದಾಧಿಕಾರಿಗಳು ನಗರದ ಹೊರ ವಲಯದಲ್ಲಿರುವ ಕುರುಣಾಲಯ ಬುದ್ಧಿಮಾಂದ್ಯ ಮಕ್ಕಳಿಗೆ ಉಪಹಾರ ವಿತರಣೆ ಮಾಡಿ ಮಾನವೀಯತೆಯನ್ನು ಮೆರೆದರು.

ಸಂಘದ ಉಪಾದ್ಯಕ್ಷ ಉಮೇಶ್‌, ಕಾರ್ಯದರ್ಶಿ ರಾಜು, ಗೌರವಾದ್ಯಕ್ಷ ರಂಗಯ್ಯ, ಮುಖಂಡರಾದ ಪುಟ್ಟಸ್ವಾಮಿ, ಪಾಪಣ್ಣ, ರಮೇಶ್‌, ನಿಂಗರಾಜು, ಸಿದ್ದಪ್ಪಾಜಿ, ಚಂದ್ರಶೇಖರ್‌, ಕಾರ್ಮಿಕರ ಸಂಘದ ಯುವ ಘಟಕದ ಅಧ್ಯಕ್ಷ ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.