ಚಾ.ನಗರ: ಶಿಕ್ಷಕ ಪ್ರಶಸ್ತಿ ಹೆಸರು ಪ್ರಕಟ
Team Udayavani, Sep 5, 2020, 1:38 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾಗಿರುವ ಶಿಕ್ಷಕರಿಗೆ ಸೆ. 5ರಂದು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಶಿಕ್ಷಕ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಲಾಗುವುದು.
ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 3 ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಪ್ರಶಸ್ತಿ ಹಂಚಿಕೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ವಡ್ಡರಹಳ್ಳಿ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕ ಪಿ.ಕುಮಾರ್, ಗುಂಡ್ಲುಪೇಟೆ ತಾಲೂಕಿನ ಮೂಕಹಳ್ಳಿ ಕಾಲೋ ನಿ-2ರ ಸ.ಕಿ.ಪ್ರಾ.ಶಾಲೆಯ ಸಿ.ಗಾಯತ್ರಿ, ಕೊಳ್ಳೇಗಾಲ ತಾಲೂಕಿನ ಉಪ್ಪಾರ ಬೀದಿಯ ಸ.ಕಿ.ಪ್ರಾ.ಶಾಲೆಯ ಆರ್. ರಾಜು, ಹನೂರು ತಾಲೂಕಿನ ಕರಿಯಪ್ಪನ ದೊಡ್ಡಿಯ ಸ.ಕಿ.ಪ್ರಾ.ಶಾಲೆಯ ಡಿ. ದಿವ್ಯಾರಾಣಿ, ಯಳಂದೂರು ತಾಲೂಕಿನ ದಾಸನಹುಂಡಿಯ ಸ.ಕಿ.ಪ್ರಾ.ಶಾಲೆಯ ಎಲ್. ಸುಜಾತಾ ಅವರನ್ನು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಚಾಮರಾಜನಗರ ತಾಲೂಕಿನಲ ಸ.ಹಿ. ಪ್ರಾ. ಶಾಲೆಯ ಸಹ ಶಿಕ್ಷಕರಾದ ನಂಜುಂಡಸ್ವಾಮಿ, ಗುಂಡ್ಲುಪೇಟೆ ತಾಲೂಕಿನ ಬೇಗೂರು ಸ.ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಅನ್ನಪೂರ್ಣಮ್ಮ, ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ವಸಂತಕುಮಾರಿ, ಹನೂರು ತಾಲೂಕಿನ ಕಣ್ಣೂರು ಸ.ಹಿ.ಪ್ರಾ. ಶಾಲೆಯ ಟಿ.ಜಿ.ಟಿ ಶಿಕ್ಷಕರಾದ ಸಾವುಕರಾಜು, ಯಳಂದೂರು ತಾಲೂಕಿನ ಅಲ್ಕೆರೆ ಅಗ್ರಹಾರ ಸ.ಹಿ.ಪ್ರಾ.ಶಾಲೆಯ ಟಿ.ಜಿ.ಟಿ ಶಿಕ್ಷಕರಾದ ಎನ್. ದಿವಾಕರ್ ಹಿರಿ ಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಚಾಮರಾಜ ನಗರ ತಾಲೂಕಿನ ಕೋಳಿಪಾಳ್ಯ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎಂ.ಎಲ್. ಸುರೇಶ್ ಕುಮಾರ್, ಗುಂಡ್ಲುಪೇಟೆ ತಾಲೂಕಿನ ಪಡಗೂರು ಮದ್ದಾನೇಶ್ವರ ಪ್ರೌಢಶಾಲೆ ರಾಜೇಂದ್ರ, ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಸರ್ಕಾರಿ ಪ್ರೌಢಶಾಲೆ ಪಿ.ಎಂ. ಮಹದೇವಸ್ವಾಮಿ, ಹನೂರು ತಾಲೂಕಿನ ಚೆನ್ನಾಲಿಂಗನಹಳ್ಳಿಸರ್ಕಾರಿ ಪ್ರೌಢಶಾಲೆ ಕೃಷ್ಣಸಾ ರಾಮಚಂದ್ರಸಾ ಬಾಕಳೆ, ಯಳಂದೂರು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಎನ್.ಮಹದೇವ ಆಯ್ಕೆಯಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು