ಕಾಡು ಸಂಸ್ಕೃತಿ ನಾಶದಿಂದ ದೇಶಕ್ಕೆ ಅಪಾಯ


Team Udayavani, Feb 15, 2020, 3:00 AM IST

kaadui-sam

ಯಳಂದೂರು: ದೇಶದ ಮೂಲ ಸಂಸ್ಕೃತಿ ಹುಟ್ಟಿರುವುದು ಗಿರಿಜನರಿಂದಲೇ ಆಗಿದೆ. ಈ ಕಾಡು ಸಂಸ್ಕೃತಿ ನಾಶವಾದರೆ ದೇಶಕ್ಕೆ ಅಪಾಯವಿದೆ ಎಂದು ಶಾಸಕ ಎನ್‌. ಮಹೇಶ್‌ ತಿಳಿಸಿದರು.

ತಾಲೂಕಿನ ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಗಿರಿಜನ ಉತ್ಸವದ ಪ್ರಯುಕ್ತ ಗಂಗಾಧರೇಶ್ವರ ದೇಗುಲದ ಆವರಣದಲ್ಲಿ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದ ಅವರು ಮಾತನಾಡಿ, ನಮ್ಮ ಮೂಲ ಕಾಡಿನಿಂದಲೇ ಆರಂಭವಾಗುತ್ತದೆ. ಗಿರಿಜನರು ಸಾಂಸ್ಕೃತಿಕ ರಾಯಭಾರಿಗಳಾಗಿದ್ದಾರೆ.

ಪ್ರತಿ ಸಂಸ್ಕೃತಿಯೂ ಇಲ್ಲಿಂದಲೇ ಹುಟ್ಟಿದ್ದಾಗಿದೆ. ಇಲ್ಲಿ ಇನ್ನೂ ಹಲವು ಕಲೆಗಳಿವೆ. ಇದನ್ನು ಪೋಷಿಸುವ, ಪಾಲಿಸುವುದಕ್ಕೆ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕಿದೆ. ನಮ್ಮ ದೇಶದ ಸಂಸ್ಕೃತಿಯಲ್ಲಿ ಗಿರಿಜನರ ಪಾಲುದೊಡ್ಡದಾಗಿದೆ. ಇಂತಹ ಕಾರ್ಯಕ್ರಮಗಳು ಇದನ್ನು ಉತ್ತೇಜಿಸುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಸಂಸ್ಕೃತಿ ಹುಟ್ಟಿಗೆ ಮೂಲ ನಿವಾಸಿಗಳೇ ಕಾರಣ: ಬುಡಕಟ್ಟು ಅಭಿವೃದ್ಧಿ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ.ಸಿ.ಮಾದೇಗೌಡ ಮಾತನಾಡಿ, ನಮ್ಮ ದೇಶದಲ್ಲಿ 505 ಆದಿವಾಸಿ ಪಂಗಡಗಳಿವೆ. ರಾಜ್ಯದಲ್ಲಿ 50 ಬುಡಕಟ್ಟು ಪಂಗಗಳನ್ನು ಕಾಡಣಬಹುದು. ಇದರಲ್ಲಿ 12 ಬುಡಕಟ್ಟು ಜನಾಂಗದವರು ಮೂಲವಾಸಿಗಳಾಗಿದ್ದಾರೆ. ಎಲ್ಲಾ ಸಂಸ್ಕೃತಿಗಳ ಹುಟ್ಟು ಕಾಡಿನಲ್ಲೇ ಆಗಿದೆ. ಕಾಡಿನ ಜನರಲ್ಲಿ ಲಿಂಗಬೇಧವಿಲ್ಲ ಎಲ್ಲರೂ ನೃತ್ಯ ಮಾಡುತ್ತಾರೆ. ಪ್ರಾಣಿ-ಪಕ್ಷಿಗಳು, ಕಾಡು, ನೃತ್ಯಗಳು ಇವರ ಸಂಸ್ಕೃತಿಯಾಗಿದೆ. ಇದರೊಂದಿಗೆ ಬದುಕನ್ನು ಕಲಿಸುವ ಪರಿಪಾಠವೂ ಇದರಲ್ಲಿದೆ ಎಂದು ಹೇಳಿದರು.

ನಮ್ಮ ಮೇಲಿದೆ ಸಂಸ್ಕೃತಿ ಬೆಳೆಸುವ ಜವಾಬ್ದಾರಿ: ಸಂಸ್ಕೃತಿಯನ್ನು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಸರ್ಕಾರಗಳು ಇದನ್ನು ಉಳಿಸುವ ಕೆಲಸವನ್ನು ಮಾಡಬೇಕು. ಇವರ ಭಾಷೆ, ಕಲೆಗಳನ್ನು ಉಳಿಸುವ ಕೆಲಸ ಮಾಡಬೇಕು. ಇವರಿಗೆ ಶಿಕ್ಷಣವನ್ನು ನೀಡುವ ಜೊತೆಗೆ ಇವರ ಕಲೆಗೂ ಪ್ರೋತ್ಸಾಹ ನೀಡಬೇಕು. ಈ ಹಿನ್ನೆಲೆಯಲ್ಲಿ ಇಂತಹ ಸ್ಥಳದಲ್ಲಿ ಗಿಜನರ ಉತ್ಸವ ನಡೆಸುತ್ತಿರುವುದು ಪ್ರಶಂಸನಾರ್ಹ ಎಂದರು.

ಗೊರುಕನದ ಹಣ ಗಿರಿಜನರಿಗೆ ಮೀಸಲು: ವಿಜಿಕೆಕೆಯ ಗೌರವ ಕಾರ್ಯದರ್ಶಿ ಡಾ.ಎಚ್‌.ಸುದರ್ಶನ್‌ ಮಾತನಾಡಿ, ನಾವು ಬೆಟ್ಟದಲ್ಲಿ ಸಂಸ್ಥೆ ಕಟ್ಟಿ 40 ವರ್ಷಗಳು ಸಂದಿವೆ. ನಮ್ಮ ಗೊರುಕನ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಬಂದ ಹಣವನ್ನು ಇವರ ಕಲ್ಯಾಣಕ್ಕೆ ಬಳಸಿಕೊಳ್ಳಲಾಗುತ್ತದೆ. ಸರ್ಕಾರದಿಂದ ನಮಗೆ ಯಾವುದೇ ಅನುದಾನ ಬರುತ್ತಿಲ್ಲ. ಗೊರುಕನವನ್ನು ಕೆಲವರು ರೆಸಾರ್ಟ್‌ ಎಂದು ಬಿಂಬಿಸುತ್ತಿರುವುದು ನೋವಿನ ಸಂಗತಿಯಾಗಿದೆ.

60 ಲಕ್ಷ ರೂ.ಗಳನ್ನು ಶಾಲೆಯ ನವೀಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಬಿಳಿಗಿರಿ ರಂಗನಬೆಟ್ಟ 6000 ವರ್ಷಗಳ ಇತಿಹಾಸವನ್ನು ಹೊಂದಿದೆ. ಕ್ರಿ.ಪೂ 3000ದಿಂದ 4000 ವರ್ಷಗಳ ಹಳೆಯ ಶಿಲಾ ಸಮಾಧಿಗಳು ಇಲ್ಲಿ ಇನ್ನೂ ಇವೆ. ಈ ಸಂಸ್ಕೃತಿ ವಿಶಿಷ್ಟವಾಗಿದೆ. ಸೋಲಿಗರ ಬಡತನ, ನಿರುದ್ಯೋಗ, ಶಿಕ್ಷಣ ಕ್ರಮೇಣ ಸುಧಾರಿಸುತ್ತಿದೆ. ಈಗ ಇವರ ಸಂಸ್ಕೃತಿಯನ್ನು ಪೋಷಿಸುವ ಕೆಲಸವನ್ನು ಮಾಡಬೇಕಿದೆ ಎಂದು ಆಭಿಪ್ರಾಯಪಟ್ಟರು.

ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು: ಗಿರಿಜನಉತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಗೈರು ಎದ್ದು ಕಾಣುತ್ತಿತ್ತು. ಶಾಸಕ ಎನ್‌. ಮಹೇಶ್‌ ಕೇವಲ ಮೆರಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೊರಟು ಹೋದರು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಪಂ, ತಾಪಂ ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲೇ ಇಲ್ಲ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮತಿ ಸುರೇಶ್‌ ಹಾಗೂ ಸದಸ್ಯರಾದ ಕೃಷ್ಣವೇಣಿ, ಶ್ರೀನಿವಾಸ್‌ ಮಾತ್ರ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಅನುಪಸ್ಥಿತಿಯೂ ಎದ್ದು ಕಾಣುತ್ತಿತ್ತು. ಇಂತಹ ಉತ್ಸವದಿಂದ ಗಿರಿಜನ ಸಂಸ್ಕೃತಿ ಲೋಕಕ್ಕೆ ಪರಿಚಯಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಆದರೆ, ಇವರೇ ಗೈರಾಗಿರುವುದು ನಮಗೆ ನೋವು ತಂದಿದೆ ಎಂದು ಸೋಲಿಗರು ತಮ್ಮ ಅಳಲನ್ನು ತೋಡಿಕೊಂಡರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸುಮತಿ ಸುರೇಶ್‌, ಸದಸ್ಯರಾದ ಕೃಷ್ಣವೇಣಿ, ಶ್ರೀನಿವಾಸ್‌, ಪಿಡಿಒ ಸ್ವಾಮಿ, ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಅಧ್ಯಕ್ಷ ಸಿ. ಮಹದೇವ, ಸಂಯೋಜಕ ಸಿ.ಮಾದಪ್ಪ, ತಾಲೂಕು ಸೋಲಿಗರ ಸಂಘದ ಅಧ್ಯಕ್ಷ ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಕೆ.ಗಿರೀಶ್‌, ವಿಜಿಕೆಕೆ ಸಂಯೋಜಕ ಡಾ.ಅರುಣ್‌ಕುಮಾರ್‌, ರಂಗದೇಗುಲದ ಶಾಂತರಾಜು, ಉಮ್ಮತ್ತೂರು ಬಸವರಾಜು, ಪಿಎಸ್‌ಐ ರವಿಕುಮಾರ್‌, ನಾಗೇಂದ್ರ, ಮಂಜುಳಾ ಸೇರಿದಂತೆ ಅನೇಕರು ಹಾಜರಿದ್ದರು.

ಜನರ ಗಮನಸೆಳೆದ ಕಾಡಿನ ನೃತ್ಯ: ಯಕನಗದ್ದೆ ಕಾಲೋನಿಯ ಗುಬ್ಬಿ ಅಲೆ ನೃತ್ಯ, ಕಾಣ್‌ಮೇಳದೊಡ್ಡಯ ಪಿನಾಸಿ ನೃತ್ಯ, ವಿಜಿಕೆಕೆ ವಿದ್ಯಾರ್ಥಿಗಳ ಗೊಜಲಕ್ಕಿ ನೃತ್ಯ, ಜಡೇಸ್ವಾಮಿ ದೊಡ್ಡಿಯ ಗೊರುಕಾನ ನೃತ್ಯ, ನಾದಸ್ವರ, ಹೊಸ ಪೋಡಿನ ಅಡುಕೆ ನೃತ್ಯ, ಬೀಸು ಕಂಸಾಳೆ, ಜಾನಪದ ನೃತ್ಯ, ಜೇನುಕುರುಬರ ಪದಗಳು, ಒಲಗ ನೃತ್ಯ ಮಾರಿ ಕುಣಿತಗಳು ಸಾರ್ವಜನಿಕರ ಗಮನವನ್ನು ಸೆಳೆದವು.

ಕುಣಿದು ಕುಪ್ಪಳಿಸಿದ ವಿದೇಶಿಯರು: ಗಿರಿಜನ ಉತ್ಸವದ ಮೆರವಣಿಗೆಯಲ್ಲಿ ಆಸ್ಟ್ರೇಲಿಯಾ ದೇಶದಿಂದ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದೇಶಿಯರೂ ಭಾಗವಹಿಸಿದ್ದರು. ಗೊರುಕನ ನೃತ್ಯ, ಕಂಸಾಳೆಗಳ ಡೊಳ್ಳು, ನಾದಸ್ವರ, ತಮಟೆ ಸದ್ದಿಗೆ ವಿದೇಶಿಯರು ಹೆಜ್ಜೆ ಹಾಕುವ ಮೂಲಕ ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದ ವೇದಿಕೆಯವರೆಗೂ ಇವರು ಮೆರವಣಿಗೆಯಲ್ಲಿ ಸಾಗಿದರು. ಶಾಸಕ ಎನ್‌. ಮಹೇಶ್‌ ಕೂಡ ಕುಣಿದಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.