ಮಾದಪ್ಪನ ಬೆಟ್ಟಕ್ಕೆ ಬಸ್‌ ಇಲ್ಲದೆ ಭಕ್ತರ ಪರದಾಟ


Team Udayavani, May 6, 2019, 3:00 AM IST

madappana

ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವ ಸ್ವಾಮಿ ದರ್ಶನ ಪಡೆಯಲು ಭಕ್ತರು ಬಸ್ಸಿಗಾಗಿ ಪ್ರತಿಭಟನೆ ನಡೆಸಿ ದರ್ಶನ ಪಡೆಯುವ ಘಟನೆಗಳು ಪ್ರತಿ ತಿಂಗಳು ನಗರದ ತಾತ್ಕಾಲಿಕ ಬಸ್‌ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಜರುಗಿದೆ.

ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನವು ಅಭಿವೃದ್ಧಿ ಪ್ರಾಧಿಕಾರ ಆದ ಮೇಲೆ ಭಕ್ತರಿಗಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಟ್ಟಿದ್ದು, ಅಷ್ಟೇ ಭಕ್ತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ.

ದೇವಸ್ಥಾನದ ಅಭಿವೃದ್ಧಿಗೆ ಕಾಣಿಕೆ ನೀಡಿ ವರ್ಷದಲ್ಲಿ ಹತ್ತಾರು ಕೋಟಿ ಆದಾಯ ಬರುತ್ತಿದ್ದರೂ ಬೆಂಗಳೂರು, ಮೈಸೂರು, ಮಂಡ್ಯ, ಕನಕಪುರ, ಮಳವಳ್ಳಿ, ನಂಜನಗೂಡು, ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ರಾಜ್ಯದಾದ್ಯಂತ ಭಕ್ತರು ಕೊಳ್ಳೇಗಾಲ ಪಟ್ಟಣ ಕೇಂದ್ರ ಸ್ಥಾನವಾಗಿರುವುದರಿಂದ ಬಸ್ಸಿಗಾಗಿ ಬಂದ ಭಕ್ತರು

-ಗಂಟೆ ಗಟ್ಟಲೆ ನಿಂತೂರು ಸಹ ಬಸ್ಸಿಲ್ಲದೆ ಪ್ರತಿ ತಿಂಗಳ ಅಮಾವ್ಯಾಸೆಯ ದಿನದಂದು ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ ಜೊತೆ ಬಸ್‌ ಬಿಡಿಸುವಂತೆ ಜಗಳವಾಡಿದರೂ ಸಹ ಬಸ್‌ ನೀಡದ ಹಿನ್ನೆಲೆ ರಸ್ತೆ ಚಳವಳಿ ಮಾಡಿ ನಂತರ ಬಸ್‌ಗಳನ್ನು ಬಿಟ್ಟ ಹಲವಾರು ಉದಾಹರಣೆಗಳಿವೆ.

ಮೇ 4ರಂದು ಅಮಾವ್ಯಾಸೆ ಪ್ರಯುಕ್ತ ವಿವಿಧ ಜಿಲ್ಲೆಗಳಿಂದ ರಾತ್ರಿ ಬೆಟ್ಟಕ್ಕೆ ಆಗಮಿಸಲು ಬಂದಿದ್ದ ಭಕ್ತರಿಗೆ ಬಸ್ಸಿಲ್ಲದೆ ಗಂಟೆ ಗಟ್ಟಲೆ ನಿಂತಿದ್ದರು. ಬಸ್‌ ಬಿಡುವಂತೆ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳನ್ನು ಒತ್ತಾಯಿಸಿದರೂ ಅಧಿಕಾರಿಗಳು ಬಸ್‌ ಬರುತ್ತದೆ ಎಂದು ತಿಳಿಸಿದರು.

ಗಂಟೆಗಟ್ಟಲೆಯಾದರೂ ಬಸ್‌ ಬಾರದ ಹಿನ್ನೆಲೆ ರೊಚ್ಚಿಗೆದ್ದ ಭಕ್ತರು ರಸ್ತೆಗಿಳಿದು ಬಸ್ಸಿಗಾಗಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಕೆ.ಶ್ರೀಕಾಂತ್‌ ಅವರು ತಕ್ಷಣವೇ ರಸ್ತೆ ಸಾರಿಗೆ ಅಧಿಕಾರಿಗಳನ್ನು ಬಸ್‌ ಬಿಡುವಂತೆ ತಿಳಿಸಿದಾಗ ಬಸ್‌ ಬಿಟ್ಟ ನಂತರ ಭಕ್ತರು ಮಾದಪ್ಪನ ದರ್ಶನ ಪಡೆಯಲು ತೆರಳಿದರು.

ಪ್ರತಿ ತಿಂಗಳು ಅಮಾವ್ಯಾಸೆ ದಿನದಂದು ಹಾಗೂ ವಿಶೇಷ ಹಬ್ಬದ ದಿನಗಳಲ್ಲಿ ರಸ್ತೆ ಸಾರಿಗೆ ಬಸ್‌ಗಳು ಭಕ್ತರ ಅನುಗುಣವಾಗಿ ಬಸ್‌ ಬಿಡದೆ ಕಡಿಮೆ ಬಸ್‌ ಬಿಡುತ್ತಿರುವುದರಿಂದ ಭಕ್ತರು ಸರಿಯಾದ ಸಮಯಕ್ಕೆ ಬಸ್‌ ಸಿಗದೆ ಬಸ್‌ ನಿಲ್ದಾಣದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು,

ಇದರ ಬಗ್ಗೆ ಪ್ರತಿ ತಿಂಗಳು ಪ್ರತಿಕೆಯಲ್ಲಿ ಪ್ರಕಟಣೆಯಾದರೂ ಸಹ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಯಾರು ಸಹ ಇತ್ತ ಗಮನ ಹರಿಸದಿರುವುದರಿಂದ ಭಕ್ತರು ಮಾತ್ರ ತಮ್ಮ ಸಂಕಷ್ಟವನ್ನು ಕೇಳಲು ಯಾರು ಇಲ್ಲದಂತೆ ಆಗಿದೆ.

ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರು ತಮ್ಮ ಹರಕೆಗಳನ್ನು ತೀರಿಸಿ, ಅಷ್ಟೋ ಇಷ್ಟೋ ಗೋಲಕಕ್ಕೆ ಹಣ ಹಾಕಿ ಹರಕೆಗಳನ್ನು ತೀರಿಸಿಕೊಳ್ಳುವುದರಿಂದ ತಿಂಗಳಲ್ಲಿ ಒಂದರಿಂದ ಒಂದುವರೆ ಕೋಟಿ ರೂ. ವರೆಗೂ ಆದಾಯ ಬರುತ್ತಿದ್ದು, ಪ್ರಾಧಿಕಾರದ ಅಧಿಕಾರಿಗಳು ಸಹ ಭಕ್ತರಿಗೆ ಬಸ್ಸಿನ ಪರದಾಟದ ಬಗ್ಗೆ ಗಮನ ಹರಿಸದಿರವುದಕ್ಕೆ ಭಕ್ತರು ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರತಿ ಅಮಾವ್ಯಾಸೆ ತಿಂಗಳಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆಯುತ್ತಿದ್ದು ಬಸ್ಸಿಗಾಗಿ ಗಂಟೆ ಗಂಟಲೆ ಕಾದು ನಿಂತರೂ ಸಹ ರಸ್ತೆ ಸಾರಿಗೆ ಬಸ್‌ ಸರಿಯಾದ ಸಮಯಕ್ಕೆ ಬಸ್‌ ಬಿಡುತ್ತಿಲ್ಲ ಪ್ರತಿ ತಿಂಗಳು ಸಹ ಹೀಗೆ ಮಾಡುತ್ತಿದ್ದಾರೆ.
-ದೊರೆಭಗವಾನ್‌, ಮಾದಪ್ಪನ ಭಕ್ತ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.