ಅಂತಿಮ ಹಂತದ ರೋಡ್‌ ಶೋ


Team Udayavani, May 10, 2018, 1:29 PM IST

cham.jpg

ಗುಂಡ್ಲುಪೇಟೆ: ಬಹಿರಂಗ ಪ್ರಚಾರಕ್ಕೆ ಇನ್ನೊಂದು ದಿನ ಬಾಕಿಯಿರುವಂತೆ ಅಭ್ಯರ್ಥಿಗಳ ಪ್ರಚಾರ ಇನ್ನಷ್ಟು ಬಿರುಸುಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ, ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಂ.ಸಿ.ಮೋಹನಕುಮಾರಿ ಪಟ್ಟಣದಲ್ಲಿ ಬುಧವಾರ ರೋಡ್‌ ಶೋ ನಡೆಸಿ ಮತ ಯಾಚನೆ ಮಾಡಿದರು.

ಪಟ್ಟಣದ ಕೆ.ಆರ್‌.ಸಿ.ರಸ್ತೆ, ಅಂಬೇಡ್ಕರ್‌ ವೃತ್ತ, ಅಶ್ವಿ‌ನಿ ಬಡಾವಣೆ, ಎಚ್‌.ಎಸ್‌.ಮಹದೇವಪ್ರಸಾದ್‌ನಗರ ಸೇರಿದಂತೆ ಹಲವು ವಾರ್ಡ್‌ಗಳಲ್ಲಿ ಸಚಿವರು ಬಿರುಸಿನ ಮತ ಯಾಚನೆ ಮಾಡಿದರು. ಪುತ್ರ ಎಚ್‌.ಎಂ. ಗಣೇಶ್‌ ಪ್ರಸಾದ್‌, ಸೊಸೆ ಶ್ರೀವಿದ್ಯಾ, ಎಚ್‌ ಎಸ್‌ಎಂ ಸೋದರ ಎಚ್‌.ಎಸ್‌.ನಂಜುಂಡ ಪ್ರಸಾದ್‌ ರೋಡ್‌ ಶೋ ನಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮೋಹನಕುಮಾರಿ ಅವರು, ಪಟ್ಟಣದ ಜನತೆಯ ಕುಡಿಯುವ ನೀರಿನ ಸಮಸ್ಯೆ ಯನ್ನು ನೀಗಿಸುವ ಸಲುವಾಗಿ ನದಿಮೂಲ ದಿಂದ ನೇರವಾಗಿ ನೀರು ಪೂರೈಸುವ ಪೈಪ್‌ ಲೈನ್‌ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. 

ಪಟ್ಟಣದಲ್ಲಿನ 23 ವಾರ್ಡ್‌ಗಳಲ್ಲಿ ಕಬಿನಿ ನೀರು ಸರಬರಾಜು ಆಗುತ್ತಿದ್ದರೂ ಹಲವೆಡೆ ಕಬಿನಿ ಮುಖ್ಯ ಪೈಪ್‌ಲೈನ್‌ ಒಡೆದು ಆಗಾಗ ದುರಸ್ತಿಗೆ ಬರುತ್ತಿದೆ. ಪೈಪ್‌ ಲೈನ್‌ ಅಳವಡಿಸಿ ಸುಮಾರು ಹತ್ತಕ್ಕೂ ಹೆಚ್ಚು ವರ್ಷಗಳಾ ಗಿರುವುದರಿಂದ ಮತ್ತು ಇದೇ ಮುಖ್ಯ ಪೈಪ್‌ ಲೈನ್‌ನಿಂದ ಮಾರ್ಗದ 33 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗುತ್ತಿರುವ ಕಾರಣ ಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಅಡಚಣೆ ತಲೆದೋರುತ್ತಿದೆ. ಹೀಗಾಗಿ ಗುಂಡ್ಲುಪೇಟೆ ಪಟ್ಟಣಕ್ಕೆ ನೇರವಾಗಿ ಕಬಿನಿ ನದಿಯಿಂದ ಪ್ರತ್ಯೇಕ ಪೈಪ್‌ ಲೈನ್‌ ಹಾಕಲು ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.

ಪೈಪ್‌ಲೈನ್‌ ಮಾಡಲು 57 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿ ಪ್ರಗತಿಯಲ್ಲಿದ್ದು ಈ ಕಾಮಗಾರಿ ಪೂರ್ಣಗೊಂಡ ನಂತರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ತಿಳಿಸಿದರು.

ಮಾದರಿ ಪಟ್ಟಣ ಮಾಡುವೆ: ಪಟ್ಟಣವನ್ನು ಮಾದರಿಯನ್ನಾಗಿಸುವ ಗುರಿಯನ್ನು ನಾನು ಹೊಂದಿದ್ದು, 23 ವಾರ್ಡ್‌ಗಳಲ್ಲಿಯೂ ಉತ್ತಮವಾದ ರಸ್ತೆ, ಚರಂಡಿ ಮತ್ತು ಮೂಲ ಸೌಕರ್ಯವನ್ನು ಒದಗಿಸಲಾಗುವುದು.
 
ಪಟ್ಟಣದ ಮುಖ್ಯ ಸ್ಥಳಗಳಲ್ಲಿ ಉದ್ಯಾನವನ ನಿರ್ಮಿಸಲು ಯೋಜಿಸಲಾಗಿದೆ. ಉಪ ಚುನಾವಣೆಯ ಗೆಲುವಿನ ನಂತರ ನನಗೆ ದೊರೆತ ಅಧಿಕಾರಾವಧಿ ಕೇವಲ ಒಂದು ವರ್ಷವಾದ ಕಾರಣ, ನಾನು ಅಂದುಕೊಂಡ ಎಲ್ಲಾ ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿಲ್ಲ. ಈ ಬಾರಿ ಐದು ವರ್ಷಗಳ ಪೂರ್ಣಾವಧಿಗೆ ಆಡಳಿತ ನಡೆಸಲು ನಿಮ್ಮ ಮತಗಳನ್ನು ನೀಡಬೇಕು. ಈ ಮೂಲಕ ಪಟ್ಟಣದ ಸಮಗ್ರ ಅಭಿವೃದ್ದಿಗೆ ಸಹಕಾರ ಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ತನ್ನ ಪತಿ ಮಹದೇವಪ್ರಸಾದ್‌ ಅವರು ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಅನೇಕಾರು ಯೋಜನೆಗಳನ್ನು, ಅಭಿವೃದ್ಧಿ ಕಾರ್ಯ ಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಶಾಸಕರಾಗಿ ಸಚಿವರಾಗಿ ತಮಗೆ ದೊರೆತ ಅವಕಾಶದಲ್ಲಿ ಶಕ್ತಿಮೀರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ತಾಲೂಕು ಮಟ್ಟಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಗುಂಡ್ಲುಪೇಟೆಯಲ್ಲಿ ಕೈಗೊಂಡಿದ್ದಾರೆ. ಅವರನ್ನು ಸ್ಮರಿಸಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ
ಕಲ್ಪಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮುಖಂಡರಾದ, ಕಾಡಾ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ, ಜಿ.ಎಲ್‌. ರಾಜು, ನಾಜಿಮುದ್ದೀನ್‌ ಪುರಸಭೆ ಸದಸ್ಯರಾದ ಬಿ.ವೆಂಕಟಾಚಲ, ಚಂದ್ರಪ್ಪ, ಭಾಗ್ಯಮ್ಮ, ಸುರೇಶ್‌, ಅಂಗಡಿಶಿವಕುಮಾರ್‌, ಬಿ.ಕುಮಾರಸ್ವಾಮಿ, ಶ್ರೀಕಂಠಪ್ಪ, ಮಂಚಳ್ಳಿ ಲೋಕೇಶ್‌, ನೂರುಲ್ಲಾ, ಶಫಿ ಇದ್ದರು.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.