ಆರೋಗ್ಯ ವೃದ್ಧಿಗೆ ಹೊಸ ಲಸಿಕೆ ಪರಿಚಯ ಅಗತ್ಯ


Team Udayavani, Jul 21, 2019, 3:00 AM IST

arogya-vr

ಚಾಮರಾಜನಗರ: ಆರೋಗ್ಯ ಇಲಾಖೆಯು ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಹೊಸ ಲಸಿಕೆಗಳನ್ನು ಪರಿಚಯಿಸುತ್ತಿರುತ್ತದೆ. ಇದನ್ನು ಜನಸಾಮಾನ್ಯರಿಗೆ ಅರ್ಥ ಮಾಡಿಸಿ, ಪ್ರತಿಯೊಬ್ಬರಿಗೂ ದೊರೆಯುವಂತೆ ಮಾಡುವ ಜವಾಬ್ದಾರಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಮೇಲ್ವಿಚಾರಕದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ರೋಟಾ ವೈರಸ್‌ ಲಸಿಕೆಯ ಜಿಲ್ಲಾ ಮಟ್ಟದ ಉದ್ಘಾಟನೆ ಕಾರ್ಯಕ್ರಮ ಹಾಗೂ ವೈದ್ಯರು ಹಾಗು ಆರೋಗ್ಯ ಮೇಲ್ವಿಚಾರಕರಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದರು.

ಜಿಲ್ಲೆಯಲ್ಲಿ ಈ ರೋಟಾ ಲಸಿಕೆಯನ್ನು ಮಕ್ಕಳಿಗೆ ಹಾಕುವ ಮೂಲಕ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿರುವ ವೈದ್ಯರು ಮತ್ತು ಆರೋಗ್ಯ ಮೇಲ್ವಿಚಾರಕರು ಚೆನ್ನಾಗಿ ಆರ್ಥೈಯಿಸಿಕೊಂಡು ಲಸಿಕೆ ಹಾಕಿ, ಆರೋಗ್ಯ ಸುಧಾರಣೆಗೆ ತೊಡಗಿಸಿಕೊಳ್ಳಬೇಕು. ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ನಿಮ್ಮ ಪಾತ್ರ ಬಹಳ ಇದೆ. ರೋಟಾ ಲಸಿಕೆಯನ್ನು ಮಗು ಹುಟ್ಟಿದ ಆರು ವಾರಗಳ ನಂತರ 14ನೇ ವಾರದ ವರೆಗೆ ನಿಯಮಿತವಾಗಿ ಮಗುವಿನ ಬಾಯಿಗೆ ಹಾಕಲಾಗುವುದು ಎಂದರು.

ಜಿಲ್ಲಾ ಲಸಿಕಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಮಾತನಾಡಿ, ಹೊಸ ಲಸಿಕೆಯಾಗಿರುವ ರೋಟಾ ವೈರಸ್‌ ಲಸಿಕೆಯನ್ನು ಮಗು ಜನನವಾದ 6ನೇ ವಾರ, 10ನೇ ವಾರ ಹಾಗೂ 14ನೇ ವಾರಗಳಲ್ಲಿ ಬಾಯಿಗೆ ಹಾಕುವ ಲಸಿಕೆಯಾಗಿದೆ. ಇದನ್ನು ಮಕ್ಕಳಿಗೆ ಹಾಕುವುದರಿಂದ ತೀವ್ರತರವಾಗಿ ಕಂಡು ಬರುವ ಅತಿಸಾರ ಭೇದಿ ಹತೋಟಿಗೆ ಬರುತ್ತದೆ. ಮಗುವಿನ ಬೆಳೆವಣಿಗೆಯು ಸಹ ತೃಪ್ತಿದಾಯಕವಾಗಿರುತ್ತದೆ.

ಈ ಉಪಯುಕ್ತ ಲಸಿಕೆಯನ್ನು ಜಿಲ್ಲೆಯಲ್ಲಿ ಒಂದು ಮಗುವು ಸಹ ತಪ್ಪದಂತೆ ಗುರಿ ಸಾಧನೆ ಮಾಡಬೇಕು. ಈ ಕಾರ್ಯಾಗಾರದ ಮೂಲಕ ಲಸಿಕೆ ಹಾಕುವ ಕುರಿತು ಪ್ರಾತ್ಯಕ್ಷತೆ ಹಾಗು ಕೈಪಿಡಿಯನ್ನು ನೀಡಲಾಗಿದೆ ಎಂದರು. ಸರ್ವೇಲೈನ್ಸ್‌ ಮೆಡಿಕಲ್‌ ಅಫೀಸರ್‌ ಡಾ. ಸುಧೀರ್‌ ನಾಯಕ್‌ ಹೊಸ ಲಸಿಕೆ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡುವ ಜೊತೆಗೆ ರೋಟಾ ವೈರಸ್‌ ಲಸಿಕೆ ಸಮಗ್ರ ವಿಚಾರವನ್ನು ಒಳಗೊಂಡ ಕೈಪಿಡಿಯನ್ನು ಪರಿಚಯಿಸಿದರು.

ಡಾ. ರಾಜು, ಡಾ. ಕಾಂತರಾಜು, ಡಾ. ನಾಗರಾಜು, ಡಾ. ಅಂಕಪ್ಪ, ಡಾ. ಮಹದೇವ್‌, ಗುರುಲಿಂಗಯ್ಯ, ತಾಲೂಕು ಆರೋಗ್ಯಾಧಿಕಾರಿಗಳು, ಶಾಂತಮ್ಮ ಸುರೇಶ್‌ ಚಾರ್ಯ, ನಾರಾಯಣಸ್ವಾಮಿ, ಮಂಜು, ದುಷ್ಯಂತ್‌, ಸೇರಿದಂತೆ ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.