ರೈತರ ಕೈ ಸೇರಿಲ್ಲ ಕಿಸಾನ್‌ ಸಮ್ಮಾನ್‌ ಹಣ


Team Udayavani, Feb 2, 2020, 3:00 AM IST

raitara

ಯಳಂದೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ರೈತರು ವಾರ್ಷಿಕ ಕೇಂದ್ರ ಸರ್ಕಾರ 6 ಸಾವಿರ ರೂ. ಹಾಗೂ ರಾಜ್ಯ ಸರ್ಕಾರ 4 ಸಾವಿರ ರೂ. ನೀಡಲಾಗುತ್ತಿದೆ. ತಾಲೂಕಿನ ರೈತರಿಗೆ ಖಾತೆಗೆ ಜಮಾವಾಗಬೇಕಿದ್ದ ಹಣ ವಿಳಂಬವಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಜಾರಿಗೆ ತಂದಿದೆ. ಯೋಜನೆ ಅನುಷ್ಠಾನಕ್ಕೆ ರೈತರಿಂದ ಸಮಗ್ರ ಮಾಹಿತಿ ಸಂಗ್ರಹಿಸಿ, ಆನ್‌ಲೈನ್‌ನಲ್ಲಿ ದಾಖಲಿಸುವಂತೆ ಸೂಚಿಸಲಾಗಿದೆ.

ಕೃಷಿ, ಕಂದಾಯ, ಪಂಚಾಯತ್‌ ರಾಜ್‌, ತೋಟಗಾರಿಕೆ, ರೇಷ್ಮೆ ಇಲಾಖೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ತಾಲೂಕಿನಲ್ಲಿ 9000 ಸಾವಿರಕ್ಕೂ ಹೆಚ್ಚು ರೈತರು ಇದ್ದಾರೆ ಎಂದು ಅಂದಾಜಿಸಲಾಗಿದೆ. ಈ ಯೋಜನೆಗೆ ಈಗಾಗಲೇ 7599 ರೈತರು ಸಲ್ಲಿಸಿದ್ದಾರೆ. ಅದರಲ್ಲಿ 5300 ಮಂದಿ ರೈತರ ಖಾತೆಗಳಿಗೆ 1 ಅಥವಾ 2 ಕಂತುಗಳಲ್ಲಿ ಮಾತ್ರ ಹಣ ಸಂದಾಯವಾಗಿದೆ. ಇನ್ನೂ ಬಾಕಿ ಇರುವ 2299 ರೈತರಿಗೆ ಹಣವು ತಲುಪಿಲ್ಲ ಎಂದು ತಿಳಿದು ಬಂದಿದೆ.

ರೈತರಿಗೆ ಮಾಹಿತಿ ಕೊರತೆ: ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಕುರಿತು, ರೈತರಿಗೆ ಮಾಹಿತಿ ಕಲ್ಪಿಸುವಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ವಿಫ‌ಲವಾಗಿದೆ. ಈ ಕುರಿತು ಒಂದು ಬಾರಿಯೂ ಜಾಗೃತಿ ಕಾರ್ಯಕ್ರಮ ಆಯೋಜಿಸಿಲ್ಲ. ಸರಿಯಾಗಿ ಮಾಹಿತಿ ನೀಡಿಲ್ಲ. ಫ‌ಸಲ್‌ ಭಿಮಾ ಯೋಜನೆಯಂತೆ ಇದು ಕೂಡ ಇರಬಹುದು ಎಂದು ಭಾವಿಸಿದ ರೈತರು, ಯೋಜನೆಗೆ ಆಸಕ್ತಿ ತೋರಿಲ್ಲ ಎಂಬುದು ರೈತರಾದ ಮಹದೇಸ್ವಾಮಿ, ಕುಮಾರ್‌ ಆರೋಪವಾಗಿದೆ.

ಯೋಜನೆಗೆ ಕೆಲವು ಷರತ್ತು: ಆರಂಭದಲ್ಲಿ ಎಲ್ಲಾ ರೈತರಿಗೂ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನ್ವಯವಾಗುತ್ತದೆ ಎಂದು ಘೋಷಿಸಲಾಗಿತ್ತು. ನಂತರ ನಿಯಮಗಳನ್ನು ಬದಲಾಯಿಸಿ, ಯೋಜನೆ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಪಿಂಚಣೆ ಪಡೆಯುವ ಸರ್ಕಾರಿ ನೌಕರರಾಗಿರಬಾರದು, ಸಂವಿಧಾನಿಕ ಹುದ್ದೆಯಲ್ಲಿರಬಾರದು. ವೈದ್ಯರು, ಇಂಜಿನೀಯರ್‌, ವಕೀಲರು ಈ ಯೋಜನೆಯ ಸೌಲಭ್ಯವಿಲ್ಲ ಎಂಬಿತ್ಯಾದಿ ನಿಯಮಗಳನ್ನು ಷರತ್ತುಗಳನ್ನು ಸೇರಿಸಲಾಗಿದೆ.

ಕೆಲವು ರೈತರಿಗೆ ಹಣ ನೀಡಿಲ್ಲ: ವಾರ್ಷಿಕವಾಗಿ 6 ಸಾವಿರ ರೂ. ನೀಡುವ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆಯು ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷದಲ್ಲಿ ಮೂರು ಕಂತಿನಲ್ಲಿ ಹಣ ನೀಡಬೇಕು. ತಾಲೂಕಿನ ರೈತರಿಗೆ ಕೇಂದ್ರ ಸರ್ಕಾರದಿಂದ 1ರಿಂದ 2 ಕಂತುಗಳ ಹಣವು ಬಿಡುಗಡೆಯಾಗಿದೆ. ಕೆಲವು ರೈತರಿಗೆ ಒಂದು ಕಂತಿನ ಹಣವು ರೈತರ ಖಾತೆಗೆ ತಲುಪಿಲ್ಲ. ಜೊತೆಗೆ ರಾಜ್ಯ ಸರ್ಕಾರವು ಒಟ್ಟು ನಾಲ್ಕು ಸಾವಿರ ರೂ.ಗಳನ್ನು ಎರಡು ಕಂತುಗಳಾಗಿ ನೀಡುತ್ತದೆ. ಆದರೆ, ರಾಜ್ಯ ಸರ್ಕಾರದಿಂದ ಇದುವರಿಗೂ ಹಣ ಪಾವತಿಯಾಗಿಲ್ಲ. ಇದರಿಂದ ಸರ್ಕಾರದ ಸೌಲಭ್ಯಗಳ ಸಮಯಕ್ಕೆ ಸರಿಯಾಗಿ ರೈತರಿಗೆ ಕೈಸೇರದೇ ಇರುವುದು ದೊಡ್ಡ ವಿಪರ್ಯಾಸವಾಗಿದೆ.

ಯೋಜನೆ ಲಾಭ ಪಡೆಯಲು ರೈತರು ಆಧಾರ್‌ ಕಾರ್ಡ್‌ ನಂಬರ್‌, ಬ್ಯಾಂಕ್‌ ಖಾತೆ ನಂಬರ್‌ ಹಾಗೂ ಪಹಣಿ ಪತ್ರವನ್ನು ನೀಡಬೇಕು. ಮೂಲ ದಾಖಲೆಯಲ್ಲಿನ ಸಮಸ್ಯೆಗಳಿಂದ ಕೆಲವು ರೈತರಿಗೆ ಹಣ ಸಂದಾಯವಾಗಿಲ್ಲ. ತಾಲೂಕಿನ 5300 ರೈತರಿಗೆ ಹಣವು ಸಂದಾಯವಾಗಿದೆ. ಬಾಕಿ ಇರುವ ಫ‌ಲಾನುಭವಿಗಳ ಅರ್ಜಿ ಸಲ್ಲಿಸಿ, ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.
-ವೆಂಕಟರಂಗ ಶೆಟ್ಟಿ, ಕೃಷಿ ಅಧಿಕಾರಿ

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.