ಹೊಸ ಉಪ್ಪಾರ ಬಡಾವಣೆಗೆ 25 ವರ್ಷ ಕಳೆದರೂ ಸೌಲಭ್ಯವಿಲ್ಲ

3 ವರ್ಷ ಕಳೆದರೂ ಶಾಸಕರ ಭರವಸೆ ಈಡೇರಿಲ್ಲ: ನಿವಾಸಿಗರ ದೂರು ಅಶುಚಿತ್ವ ತಾಣವಾದ ಬಡಾವಣೆ ಅಭಿವೃದ್ಧಿಪಡಿಸಿ

Team Udayavani, Aug 25, 2021, 5:10 PM IST

ಹೊಸ ಉಪ್ಪಾರ ಬಡಾವಣೆಗೆ 25 ವರ್ಷ ಕಳೆದರೂ ಸೌಲಭ್ಯವಿಲ್ಲ

ಯಳಂದೂರು: ತಾಲೂಕಿನ ಯರಿಯೂರು ಗ್ರಾಮದ ಹೊಸ ಉಪ್ಪಾರ ಬಡಾವಣೆ ನಿರ್ಮಾಣವಾಗಿ 25 ವರ್ಷ ಕಳೆದರೂ ರಸ್ತೆಯ ಮಧ್ಯೆದಲ್ಲಿ ಹರಿಯುವ ಚರಂಡಿ ನೀರು, ಹದಗೆಟ್ಟ ರಸ್ತೆ ಬೀದಿ ಬೀಪ , ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ನಡುವೆ ನಿವಾಸಿಗಳು
ಬದುಕನ್ನು ಸಾಗಿಸಬೇಕಾದ ದುಸ್ಥಿತಿ ಇದೆ.

ಯರಿಯೂರು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿರುವ ಹೊಸ ಉಪ್ಪಾರ ಬಡಾವಣೆಯ 300ಕ್ಕೂ ಹೆಚ್ಚು ಕುಟುಂಬವನ್ನು ಒಳಗೊಂಡಿದೆ.
ಬೀದಿಗಳಲ್ಲಿ ಸಮರ್ಪಕವಾಗಿ ಚರಂಡಿ ನೀರು ವ್ಯವಸ್ಥೆ ಇಲ್ಲದ ಕಾರಣ, ನಿವಾಸಿಗಳು ತಮ್ಮ ಮನೆಯ ತ್ಯಾಜ್ಯ ನೀರನ್ನು ಬೀದಿಯಲ್ಲಿ ಹರಿಸುತ್ತಾರೆ. ಹೀಗೆ ರಸ್ತೆಗೆ ಬಿಡುವ ಕಲುಷಿತ ನೀರು ಬೀದಿಯಲ್ಲಿ ಶೇಖರಣೆಗೊಂಡು ಅಶುಚಿತ್ವ ತಾಣವಾಗಿದೆ. ಮಳೆ ನೀರು, ಕೊಳಚೆ ನೀರಿನ ಜತೆ ಸೇರಿ ಕೊಂಡು ದುರ್ವಾಸನೆ ಬೀರುತ್ತದೆ. ಇದರಿಂದ ಬೀದಿಯಲ್ಲಿ ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸೊಳ್ಳೆ ಕ್ರಿಮಿ ಕೀಟಗಳು ಆವಾಸಸ್ಥಾನ ಆಗಿದ್ದು, ಜನರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ. ಕೊಳಚೆ ನೀರು ಹೊರ ಹೋಗುವಂತಹ ವ್ಯವಸ್ಥೆ ಕಲ್ಪಿಸಿ ಎಂಬ ಬೇಡಿಕೆಗೆ ಗ್ರಾಪಂ ಪಿಡಿಒ ಗಮನಹರಿಸಿಲ್ಲ ಎಂಬುದು ಇಲ್ಲಿನ ನಿವಾಸಿಗಳ ಆರೋಪ.

ಇದನ್ನೂ ಓದಿ:ನಟಿ ಸಂಜನಾ ಗಲ್ರಾನಿಗೆ ಅನಾರೋಗ್ಯ| ಆಸ್ಪತ್ರೆಗೆ ದಾಖಲು

ಶಾಸಕರು ಅನುದಾನ ನೀಡಿಲ್ಲ: ತಾಲೂಕಿನ ಹೊಸ ಉಪ್ಪಾರ ಬಡಾವಣೆಗೆ ಹಲವು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಈ ಬಗ್ಗೆ ಹಾಲಿ ಶಾಸಕ ಎನ್‌.ಮಹೇಶ್‌ ಸಾಕಷ್ಟ ಬಾರಿ ಮನವಿ ಮಾಡಿದರು. ರಸ್ತೆ,ಚರಂಡಿ ಸೇರಿದಂತೆ ಮೂಲಭೂತ ‌ ಸೌಲಭ್ಯ ಕಲ್ಪಿಸಲು ನಯಾ ಪೈಸೆ ನೀಡಿಲ್ಲ. ಚುನಾವಣೆ ವೇಳೆ ಬಡಾವಣೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದರು. ಆದರೆ,3ವರ್ಷ ಕಳೆದರೂ ಕ್ರಮವಹಿಸಿಲ್ಲ. ಈ ಬಡವಣೆಗೂ ಭೇಟಿ ನೀಡಿಲ್ಲ ಎಂಬುದು ಬಡಾವಣೆಯ ನಿವಾಸಿ ಮಹದೇವಶೆಟ್ಟಿ ಸೇರಿದಂತೆ ಹಲವಾರ ದೂರು.

ಹೊಸ ಉಪ್ಪಾರ ಬಡಾವಣೆಗೆ ಈ ಬಾರಿ 15 ನೇಹಣಕಾಸು ಯೋಜನೆ ಮೂಲಕ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಅನುಮೋದನೆ
ಗೊಂಡ ತಕ್ಷಣ ಅಭಿವೃದ್ಧಿಯ ಕೆಲಸ ಕೈಗೊಳ್ಳಲಾಗುವುದು. ನರೇಗಾದಡಿರಸ್ತೆ, ಚರಂಡಿ ಕಾಮಗಾರಿ ಕೈಗೊಳ್ಳಬಾರದು ಎಂದು ಸರ್ಕಾರ ಆದೇಶಿಸಿದೆ.
-ಮಮತಾ, ಪಿಡಿಒ ಯರಿಯೂರು ಗ್ರಾಪಂ

ಹೊಸ ಉಪ್ಪಾರ ಬಡಾವಣೆಯಲ್ಲಿ ರಸ್ತೆ,ಚರಂಡಿ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ನರೇಗಾ ಹಾಗೂ 15ನೇ ಹಣಕಾಸು ಯೋಜನೆ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿ ಕ್ರಿಯಾಯೋಜನೆ ರೂಪಿಸಿ ಎಂದು ಪಿಡಿಒ ಅವರಿಗೆ ಸಾಕಷ್ಟ ಬಾರಿ ಮನವಿ ಮಾಡಿದರೂ ಕ್ರಮ ವಹಿಸಿಲ್ಲ.
-ನಾರಾಯಣ್‌, ಗ್ರಾ.ಪಂ.ಸದಸ್ಯ ಯರಿಯೂರು

-ಫೈರೋಜ್‌ ಖಾನ್‌

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.