ಹೊಸ ಉಪ್ಪಾರ ಬಡಾವಣೆಗೆ 25 ವರ್ಷ ಕಳೆದರೂ ಸೌಲಭ್ಯವಿಲ್ಲ

3 ವರ್ಷ ಕಳೆದರೂ ಶಾಸಕರ ಭರವಸೆ ಈಡೇರಿಲ್ಲ: ನಿವಾಸಿಗರ ದೂರು ಅಶುಚಿತ್ವ ತಾಣವಾದ ಬಡಾವಣೆ ಅಭಿವೃದ್ಧಿಪಡಿಸಿ

Team Udayavani, Aug 25, 2021, 5:10 PM IST

ಹೊಸ ಉಪ್ಪಾರ ಬಡಾವಣೆಗೆ 25 ವರ್ಷ ಕಳೆದರೂ ಸೌಲಭ್ಯವಿಲ್ಲ

ಯಳಂದೂರು: ತಾಲೂಕಿನ ಯರಿಯೂರು ಗ್ರಾಮದ ಹೊಸ ಉಪ್ಪಾರ ಬಡಾವಣೆ ನಿರ್ಮಾಣವಾಗಿ 25 ವರ್ಷ ಕಳೆದರೂ ರಸ್ತೆಯ ಮಧ್ಯೆದಲ್ಲಿ ಹರಿಯುವ ಚರಂಡಿ ನೀರು, ಹದಗೆಟ್ಟ ರಸ್ತೆ ಬೀದಿ ಬೀಪ , ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ನಡುವೆ ನಿವಾಸಿಗಳು
ಬದುಕನ್ನು ಸಾಗಿಸಬೇಕಾದ ದುಸ್ಥಿತಿ ಇದೆ.

ಯರಿಯೂರು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿರುವ ಹೊಸ ಉಪ್ಪಾರ ಬಡಾವಣೆಯ 300ಕ್ಕೂ ಹೆಚ್ಚು ಕುಟುಂಬವನ್ನು ಒಳಗೊಂಡಿದೆ.
ಬೀದಿಗಳಲ್ಲಿ ಸಮರ್ಪಕವಾಗಿ ಚರಂಡಿ ನೀರು ವ್ಯವಸ್ಥೆ ಇಲ್ಲದ ಕಾರಣ, ನಿವಾಸಿಗಳು ತಮ್ಮ ಮನೆಯ ತ್ಯಾಜ್ಯ ನೀರನ್ನು ಬೀದಿಯಲ್ಲಿ ಹರಿಸುತ್ತಾರೆ. ಹೀಗೆ ರಸ್ತೆಗೆ ಬಿಡುವ ಕಲುಷಿತ ನೀರು ಬೀದಿಯಲ್ಲಿ ಶೇಖರಣೆಗೊಂಡು ಅಶುಚಿತ್ವ ತಾಣವಾಗಿದೆ. ಮಳೆ ನೀರು, ಕೊಳಚೆ ನೀರಿನ ಜತೆ ಸೇರಿ ಕೊಂಡು ದುರ್ವಾಸನೆ ಬೀರುತ್ತದೆ. ಇದರಿಂದ ಬೀದಿಯಲ್ಲಿ ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸೊಳ್ಳೆ ಕ್ರಿಮಿ ಕೀಟಗಳು ಆವಾಸಸ್ಥಾನ ಆಗಿದ್ದು, ಜನರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ. ಕೊಳಚೆ ನೀರು ಹೊರ ಹೋಗುವಂತಹ ವ್ಯವಸ್ಥೆ ಕಲ್ಪಿಸಿ ಎಂಬ ಬೇಡಿಕೆಗೆ ಗ್ರಾಪಂ ಪಿಡಿಒ ಗಮನಹರಿಸಿಲ್ಲ ಎಂಬುದು ಇಲ್ಲಿನ ನಿವಾಸಿಗಳ ಆರೋಪ.

ಇದನ್ನೂ ಓದಿ:ನಟಿ ಸಂಜನಾ ಗಲ್ರಾನಿಗೆ ಅನಾರೋಗ್ಯ| ಆಸ್ಪತ್ರೆಗೆ ದಾಖಲು

ಶಾಸಕರು ಅನುದಾನ ನೀಡಿಲ್ಲ: ತಾಲೂಕಿನ ಹೊಸ ಉಪ್ಪಾರ ಬಡಾವಣೆಗೆ ಹಲವು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಈ ಬಗ್ಗೆ ಹಾಲಿ ಶಾಸಕ ಎನ್‌.ಮಹೇಶ್‌ ಸಾಕಷ್ಟ ಬಾರಿ ಮನವಿ ಮಾಡಿದರು. ರಸ್ತೆ,ಚರಂಡಿ ಸೇರಿದಂತೆ ಮೂಲಭೂತ ‌ ಸೌಲಭ್ಯ ಕಲ್ಪಿಸಲು ನಯಾ ಪೈಸೆ ನೀಡಿಲ್ಲ. ಚುನಾವಣೆ ವೇಳೆ ಬಡಾವಣೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದರು. ಆದರೆ,3ವರ್ಷ ಕಳೆದರೂ ಕ್ರಮವಹಿಸಿಲ್ಲ. ಈ ಬಡವಣೆಗೂ ಭೇಟಿ ನೀಡಿಲ್ಲ ಎಂಬುದು ಬಡಾವಣೆಯ ನಿವಾಸಿ ಮಹದೇವಶೆಟ್ಟಿ ಸೇರಿದಂತೆ ಹಲವಾರ ದೂರು.

ಹೊಸ ಉಪ್ಪಾರ ಬಡಾವಣೆಗೆ ಈ ಬಾರಿ 15 ನೇಹಣಕಾಸು ಯೋಜನೆ ಮೂಲಕ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಅನುಮೋದನೆ
ಗೊಂಡ ತಕ್ಷಣ ಅಭಿವೃದ್ಧಿಯ ಕೆಲಸ ಕೈಗೊಳ್ಳಲಾಗುವುದು. ನರೇಗಾದಡಿರಸ್ತೆ, ಚರಂಡಿ ಕಾಮಗಾರಿ ಕೈಗೊಳ್ಳಬಾರದು ಎಂದು ಸರ್ಕಾರ ಆದೇಶಿಸಿದೆ.
-ಮಮತಾ, ಪಿಡಿಒ ಯರಿಯೂರು ಗ್ರಾಪಂ

ಹೊಸ ಉಪ್ಪಾರ ಬಡಾವಣೆಯಲ್ಲಿ ರಸ್ತೆ,ಚರಂಡಿ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ನರೇಗಾ ಹಾಗೂ 15ನೇ ಹಣಕಾಸು ಯೋಜನೆ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿ ಕ್ರಿಯಾಯೋಜನೆ ರೂಪಿಸಿ ಎಂದು ಪಿಡಿಒ ಅವರಿಗೆ ಸಾಕಷ್ಟ ಬಾರಿ ಮನವಿ ಮಾಡಿದರೂ ಕ್ರಮ ವಹಿಸಿಲ್ಲ.
-ನಾರಾಯಣ್‌, ಗ್ರಾ.ಪಂ.ಸದಸ್ಯ ಯರಿಯೂರು

-ಫೈರೋಜ್‌ ಖಾನ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.