Hanur: ಕರಡಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ; ಆತಂಕದಲ್ಲಿ ಗ್ರಾಮಸ್ಥರು
ವಾರದಲ್ಲಿ 3ನೇ ಪ್ರಕರಣ
Team Udayavani, Dec 17, 2023, 2:28 PM IST
ಹನೂರು: ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಕರಡಿಯೊಂದು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ.
ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಮಹದೇಶ್ವರ ದೇವಸ್ಥಾನ ಮತ್ತು ಮಹದೇಶ್ವರ ಪ್ರೌಢಶಾಲಾ ಆವರಣದ ಮುಂಭಾಗದಲ್ಲಿ ಡಿ.17ರ ಭಾನುವಾರ ಮುಂಜಾನೆ ಸುಮಾರು 3.11 ಗಂಟೆಗೆ ಕರಡಿಯೊಂದು ಸಂಚರಿಸುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಶಾಲೆಯ ಆವರಣದಲ್ಲಿ ಕರಡಿ ಓಡಾಡಿರುವುದನ್ನು ಗಮನಿಸಿದ ಪೋಷಕರು ಮತ್ತು ಸಾರ್ವಜನಿಕರು ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಾರದಲ್ಲಿ 3ನೇ ಪ್ರಕರಣ: ಬಹುಪಾಲು ಗುಡ್ಡಗಾಡು ಪ್ರದೇಶ ಮತ್ತು ಕಾಡಂಚಿನ ಗ್ರಾಮಗಳಿಂದ ಆವೃತ್ತವಾಗಿರುವ ಹನೂರು ತಾಲೂಕಿನಲ್ಲಿ ಈ ಹಿಂದೆ ಆನೆ ಮತ್ತು ಚಿರತೆಯ ಹಾವಳಿ ಹೆಚ್ಚಾಗಿತ್ತು.
ಆದರೆ ಇದೀಗ ಕಳೆದ ಒಂದು ವಾರದಿಂದ ಜಾಂಬವಂತನ ಹಾವಳಿಯಿಂದಾಗಿ ಸಾರ್ವಜನಿಕರು ಭಯಭೀತರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಅಜ್ಜೀಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳಿಗೆ ಕರಡಿ ನುಗ್ಗಿ ಆಹಾರ ಪದಾರ್ಥಗಳನ್ನು ಹಾನಿ ಮಾಡಿತ್ತು. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಸೆರೆಹಿಡಿದಿದ್ದರು. ಕಳೆದ ಶುಕ್ರವಾರ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಸಂದನಪಾಳ್ಯ ಗ್ರಾಮದ ಖಾಸಗಿ ಶಾಲೆಯಲ್ಲಿ ಕರಡಿ ಪ್ರತ್ಯಕ್ಷವಾಗಿತ್ತು. ಇದೀಗ ಕೌದಳ್ಳಿ ಗ್ರಾಮದಲ್ಲಿಯೂ ಕರಡಿ ಪ್ರತ್ಯಕ್ಷವಾಗಿರುವುದರಿಂದ ತಾಲೂಕಿನ ಜನತೆ ಆತಂಕಕ್ಕೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!