ರಾಜ್ಯದ ಪ್ರಥಮ ತೆಂಗು ಸಂಸ್ಕರಣಾ ಘಟಕ ಇಂದು ಲೋಕಾರ್ಪಣೆ


Team Udayavani, Sep 18, 2020, 2:08 PM IST

The state’s first coconut processing plant

ಚಾಮರಾಜನಗರ: ತೆಂಗು ಬೆಳೆಗಾರರಿಗೆ ನೆರವಾಗಲು ಸ್ಥಾಪಿತವಾದ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ  ಸಂಸ್ಕರಣಾ ಮತ್ತು ಮಾರಾಟ ಸಹಕಾರ ಸಂಘವು 9 ಕೋಟಿ ರೂ.ವೆಚ್ಚದಲ್ಲಿ ಸಹಕಾರ ತತ್ವದಡಿ ಸ್ಥಾಪಿಸಿರುವ ರಾಜ್ಯದಮೊದಲ ತೆಂಗಿನ ಪುಡಿ ಉತ್ಪಾದನಾ ಘಟಕ (ತೆಂಗು ಸಂಸ್ಕರಣಾ ಘಟಕ) ಶುಕ್ರವಾರ ಲೋಕಾರ್ಪಣೆಗೊಳ್ಳಲಿದೆ.

ತಾಲೂಕಿನ ಪ್ರಮುಖ ಬೆಳೆಗಳಲ್ಲೊಂದಾದ ತೆಂಗಿಗೆ ಬೆಲೆಯಿಲ್ಲದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇಂಥ ಪರಿಸ್ಥಿತಿಯಲ್ಲಿ ತೆಂಗು ಬೆಳೆಗಾರರಿಗೆ ನೆರವಾಗಲು ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣಾ ಮತ್ತು ಮಾರಾಟಸಹಕಾರ ಸಂಘವನ್ನು 2002ರ ಜನವರಿಯಲ್ಲಿ ಅಸ್ತಿತ್ವಕ್ಕೆ ತರಲಾಗಿತ್ತು.

ತೆಂಗಿನಪುಡಿ: 405 ಸದಸ್ಯರಿಂದ ಆರಂಭವಾಗಿ, ಪ್ರಸ್ತುತ1,124 ಸದಸ್ಯರನ್ನು ಸಂಘ ಹೊಂದಿದೆ. ತೆಂಗಿನ ಬೆಲೆ ಪದೇ ಪದೆ ಕುಸಿತವಾಗುತ್ತಿದ್ದು, ರೈತರಿಂದ ತೆಂಗು ಸಂಗ್ರಹಿಸಿ, ತೆಂಗಿನ ಉತ್ಪನ್ನವಾದ ತೆಂಗಿನಪುಡಿಯನ್ನು ಸಂಸ್ಕರಿಸಿ ಮಾರಾಟಮಾಡಲು ಸಹಕಾರ ಸಂಘ ಯೋಜನೆ ಹಾಕಿಕೊಂಡಿತು. ತಾಲೂಕಿನ ಕಾಳನ ಹುಂಡಿ ರಸ್ತೆಯ ಮುಣಚನಹಳ್ಳಿಯಲ್ಲಿ ಪ್ರತಿದಿನ 50 ಸಾವಿರ ತೆಂಗಿನ ಕಾಯಿಯನ್ನು ಸಂಸ್ಕರಿಸುವಸಾಮರ್ಥ್ಯದ ತೆಂಗಿನಪುಡಿ ಉತ್ಪಾದನಾ ಘಟಕವನ್ನು 9 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿದೆ.

ತೆಂಗು ಪ್ರಾತ್ಯಕ್ಷಿಕ ಯೋಜನೆ: ಈ ಯೋಜನೆಯಿಂದ ಪ್ರತ್ಯಕ್ಷ- ಪರೋಕ್ಷವಾಗಿ 250 ಜನರಿಗೆ ಉದ್ಯೋಗ ದೊರಕಲಿದೆ. ಈಗಾಗಲೇ ಪ್ರಾಯೋಗಿಕ ಚಾಲನೆ ಸಹ ನೀಡಲಾಗಿದೆ. ತಾಲೂಕಿನಲ್ಲಿಇದುವರೆಗೆ 1,780 ಎಕರೆ ಪ್ರದೇಶದಲ್ಲಿ ತೆಂಗು ಪ್ರಾತ್ಯಕ್ಷಿಕ ಯೋಜನೆ ಹಮ್ಮಿಕೊಂಡು ತೆಂಗಿನ ಕಾಯಿ ಉತ್ಪಾದಕತೆ ಹೆಚ್ಚಿಸಿದೆ. ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡುವುದು, ತೆಂಗು ಬೆಳೆ ಬಗ್ಗೆ ಜಾಗೃತಿ ಶಿಬಿರ, ಮರ ಹತ್ತುವ ತರಬೇತಿ ಕಾರ್ಯಕ್ರಮಗಳನ್ನು ನಡೆಸಿದೆ. ತೆಂಗು ಬೆಳೆಯ ಅಭಿವೃದ್ಧಿಗೆ ಏನೇನು ಕಾರ್ಯಕ್ರಮಗಳನ್ನು ಕೈಗೊಳ್ಳಬಹುದೋ ಅದೆನ್ನೆಲ್ಲಾ ಜಾರಿಗೊಳಿಸಲು ಶ್ರಮಿಸುತ್ತಿದೆ.

ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎ.ಎಂ. ಮಹೇಶಪ್ರಭು ಈ ಸಹಕಾರ ಸಂಘದ ಅಧ್ಯಕ್ಷರು ಮತ್ತು ಸಂಸ್ಕರಣಾ ಘಟಕದ ರೂವಾರಿ. ಶಾಂತಮಲ್ಲಪ್ಪ ಪ್ರಧಾನ ಕಾರ್ಯದರ್ಶಿ ಮತ್ತು ಲೆಕ್ಕಾಧಿಕಾರಿಯಾಗಿದ್ದಾರೆ. ಆಡಳಿತ ಮಂಡಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರಿದ್ದಾರೆ. ಇಂದು ಘಟಕ ಉದ್ಘಾಟನೆ: ಚಾಮರಾಜನಗರದ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದಿಂದ ನಿರ್ಮಿಸಲಾಗಿರುವ ತೆಂಗು ಸಂಸ್ಕರಣ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಮಧ್ಯಾಹ್ನ 12ಕ್ಕೆ ಕಾಳನಹುಂಡಿ ರಸ್ತೆಯ ಮುಣಚನಹಳ್ಳಿ ತೆಂಗು ಸಂಸ್ಕರಣ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಕಾರ್ಯಕ್ರಮದ ಉದ್ಘಾಟಿಸುವರು. ಹಿರಿಯ ಗಾಂಧಿವಾದಿ ಪ. ಮಲ್ಲೇಶ್‌ ವಿಶ್ವ ರೈತಚೇತನ ಪೊ›.ಎಂ.ಡಿ ನಂಜುಂಡಸ್ವಾಮಿ ಅವರ ಪ್ರತಿಮೆ ಅನಾವರಣಗೊಳಿಸುವರು. ಜಿಲ್ಲಾ ಉಸ್ತುವಾರಿ ಸಚಿವ, ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತೆಂಗು ಸಂಸ್ಕರಣ ಘಟಕ ಉದ್ಘಾಟಿಸುವವರು. ಸಹಕಾರ ಸಚಿವರು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್‌.ಟಿ. ಸೋಮಶೇಖರ್‌ ತೆಂಗು ಉತ್ಪನ್ನ ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿ‌ನಿ ಅಧ್ಯಕ್ಷತೆ ವಹಿಸುವರು.

1 ಕೇಜಿ ತೆಂಗಿನ ಕಾಯಿಗೆ 34 ರೂ. :  ಸಹಕಾರ ಸಂಘವು ಸದಸ್ಯರಿಂದ ಈಗಾಗಲೇ ತೆಂಗಿನಕಾಯಿ ಗಳನ್ನು ಖರೀದಿಸುತ್ತಿದೆ. ಬೆಳೆಗಾರರು ತಮ್ಮದೇ ಸಾಗಾಣಿಕೆಯಲ್ಲಿ ತೆಂಗಿನ ಕಾಯಿ ಗಳನ್ನು ಘಟಕಕ್ಕೆ ನೀಡಬೇಕು. ಸುಲಿದಿರುವ ಒಂದು ಕೇಜಿ ತೆಂಗಿನ ಕಾಯಿಗೆ 34 ರೂ. ದರವನ್ನು ಬೆಳೆಗಾರರಿಗೆ ನೀಡಲಾಗು ತ್ತದೆ. ಮಾರನೆಯ ದಿನವೇ ಬೆಳೆಗಾರರ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಈ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ 3.5 ಕೋಟಿ ರೂ. ಮಂಜೂರು ಮಾಡಿತ್ತು. ಮತ್ತೆ ಈ ಅವಧಿಯಲ್ಲಿ ಯಂತ್ರೋಪಕರಣ ಸ್ಥಾಪನೆಗೆ 3 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದೆ. ತೆಂಗು ಅಭಿವೃದ್ಧಿ ಮಂಡಳಿ ಈ ಯೋಜನೆಗೆ 50 ಲಕ್ಷ ರೂ. ಸಹಾಯಧನ ಮಂಜೂರು ಮಾಡಿದೆ. ತೆಂಗು ಬೆಳೆಗಾರರ ಸಹಕಾರ ಸಂಘದ ಸದಸ್ಯರ ಶೇರು ಹಣ 35 ಲಕ್ಷ ರೂ. ವಿನಿಯೋಗಿಸಲಾಗಿದೆ.

 

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.