ರಾಜ್ಯದ ಪ್ರಥಮ ತೆಂಗು ಸಂಸ್ಕರಣಾ ಘಟಕ ಇಂದು ಲೋಕಾರ್ಪಣೆ


Team Udayavani, Sep 18, 2020, 2:08 PM IST

The state’s first coconut processing plant

ಚಾಮರಾಜನಗರ: ತೆಂಗು ಬೆಳೆಗಾರರಿಗೆ ನೆರವಾಗಲು ಸ್ಥಾಪಿತವಾದ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ  ಸಂಸ್ಕರಣಾ ಮತ್ತು ಮಾರಾಟ ಸಹಕಾರ ಸಂಘವು 9 ಕೋಟಿ ರೂ.ವೆಚ್ಚದಲ್ಲಿ ಸಹಕಾರ ತತ್ವದಡಿ ಸ್ಥಾಪಿಸಿರುವ ರಾಜ್ಯದಮೊದಲ ತೆಂಗಿನ ಪುಡಿ ಉತ್ಪಾದನಾ ಘಟಕ (ತೆಂಗು ಸಂಸ್ಕರಣಾ ಘಟಕ) ಶುಕ್ರವಾರ ಲೋಕಾರ್ಪಣೆಗೊಳ್ಳಲಿದೆ.

ತಾಲೂಕಿನ ಪ್ರಮುಖ ಬೆಳೆಗಳಲ್ಲೊಂದಾದ ತೆಂಗಿಗೆ ಬೆಲೆಯಿಲ್ಲದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇಂಥ ಪರಿಸ್ಥಿತಿಯಲ್ಲಿ ತೆಂಗು ಬೆಳೆಗಾರರಿಗೆ ನೆರವಾಗಲು ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣಾ ಮತ್ತು ಮಾರಾಟಸಹಕಾರ ಸಂಘವನ್ನು 2002ರ ಜನವರಿಯಲ್ಲಿ ಅಸ್ತಿತ್ವಕ್ಕೆ ತರಲಾಗಿತ್ತು.

ತೆಂಗಿನಪುಡಿ: 405 ಸದಸ್ಯರಿಂದ ಆರಂಭವಾಗಿ, ಪ್ರಸ್ತುತ1,124 ಸದಸ್ಯರನ್ನು ಸಂಘ ಹೊಂದಿದೆ. ತೆಂಗಿನ ಬೆಲೆ ಪದೇ ಪದೆ ಕುಸಿತವಾಗುತ್ತಿದ್ದು, ರೈತರಿಂದ ತೆಂಗು ಸಂಗ್ರಹಿಸಿ, ತೆಂಗಿನ ಉತ್ಪನ್ನವಾದ ತೆಂಗಿನಪುಡಿಯನ್ನು ಸಂಸ್ಕರಿಸಿ ಮಾರಾಟಮಾಡಲು ಸಹಕಾರ ಸಂಘ ಯೋಜನೆ ಹಾಕಿಕೊಂಡಿತು. ತಾಲೂಕಿನ ಕಾಳನ ಹುಂಡಿ ರಸ್ತೆಯ ಮುಣಚನಹಳ್ಳಿಯಲ್ಲಿ ಪ್ರತಿದಿನ 50 ಸಾವಿರ ತೆಂಗಿನ ಕಾಯಿಯನ್ನು ಸಂಸ್ಕರಿಸುವಸಾಮರ್ಥ್ಯದ ತೆಂಗಿನಪುಡಿ ಉತ್ಪಾದನಾ ಘಟಕವನ್ನು 9 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿದೆ.

ತೆಂಗು ಪ್ರಾತ್ಯಕ್ಷಿಕ ಯೋಜನೆ: ಈ ಯೋಜನೆಯಿಂದ ಪ್ರತ್ಯಕ್ಷ- ಪರೋಕ್ಷವಾಗಿ 250 ಜನರಿಗೆ ಉದ್ಯೋಗ ದೊರಕಲಿದೆ. ಈಗಾಗಲೇ ಪ್ರಾಯೋಗಿಕ ಚಾಲನೆ ಸಹ ನೀಡಲಾಗಿದೆ. ತಾಲೂಕಿನಲ್ಲಿಇದುವರೆಗೆ 1,780 ಎಕರೆ ಪ್ರದೇಶದಲ್ಲಿ ತೆಂಗು ಪ್ರಾತ್ಯಕ್ಷಿಕ ಯೋಜನೆ ಹಮ್ಮಿಕೊಂಡು ತೆಂಗಿನ ಕಾಯಿ ಉತ್ಪಾದಕತೆ ಹೆಚ್ಚಿಸಿದೆ. ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡುವುದು, ತೆಂಗು ಬೆಳೆ ಬಗ್ಗೆ ಜಾಗೃತಿ ಶಿಬಿರ, ಮರ ಹತ್ತುವ ತರಬೇತಿ ಕಾರ್ಯಕ್ರಮಗಳನ್ನು ನಡೆಸಿದೆ. ತೆಂಗು ಬೆಳೆಯ ಅಭಿವೃದ್ಧಿಗೆ ಏನೇನು ಕಾರ್ಯಕ್ರಮಗಳನ್ನು ಕೈಗೊಳ್ಳಬಹುದೋ ಅದೆನ್ನೆಲ್ಲಾ ಜಾರಿಗೊಳಿಸಲು ಶ್ರಮಿಸುತ್ತಿದೆ.

ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎ.ಎಂ. ಮಹೇಶಪ್ರಭು ಈ ಸಹಕಾರ ಸಂಘದ ಅಧ್ಯಕ್ಷರು ಮತ್ತು ಸಂಸ್ಕರಣಾ ಘಟಕದ ರೂವಾರಿ. ಶಾಂತಮಲ್ಲಪ್ಪ ಪ್ರಧಾನ ಕಾರ್ಯದರ್ಶಿ ಮತ್ತು ಲೆಕ್ಕಾಧಿಕಾರಿಯಾಗಿದ್ದಾರೆ. ಆಡಳಿತ ಮಂಡಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರಿದ್ದಾರೆ. ಇಂದು ಘಟಕ ಉದ್ಘಾಟನೆ: ಚಾಮರಾಜನಗರದ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದಿಂದ ನಿರ್ಮಿಸಲಾಗಿರುವ ತೆಂಗು ಸಂಸ್ಕರಣ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಮಧ್ಯಾಹ್ನ 12ಕ್ಕೆ ಕಾಳನಹುಂಡಿ ರಸ್ತೆಯ ಮುಣಚನಹಳ್ಳಿ ತೆಂಗು ಸಂಸ್ಕರಣ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಕಾರ್ಯಕ್ರಮದ ಉದ್ಘಾಟಿಸುವರು. ಹಿರಿಯ ಗಾಂಧಿವಾದಿ ಪ. ಮಲ್ಲೇಶ್‌ ವಿಶ್ವ ರೈತಚೇತನ ಪೊ›.ಎಂ.ಡಿ ನಂಜುಂಡಸ್ವಾಮಿ ಅವರ ಪ್ರತಿಮೆ ಅನಾವರಣಗೊಳಿಸುವರು. ಜಿಲ್ಲಾ ಉಸ್ತುವಾರಿ ಸಚಿವ, ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತೆಂಗು ಸಂಸ್ಕರಣ ಘಟಕ ಉದ್ಘಾಟಿಸುವವರು. ಸಹಕಾರ ಸಚಿವರು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್‌.ಟಿ. ಸೋಮಶೇಖರ್‌ ತೆಂಗು ಉತ್ಪನ್ನ ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿ‌ನಿ ಅಧ್ಯಕ್ಷತೆ ವಹಿಸುವರು.

1 ಕೇಜಿ ತೆಂಗಿನ ಕಾಯಿಗೆ 34 ರೂ. :  ಸಹಕಾರ ಸಂಘವು ಸದಸ್ಯರಿಂದ ಈಗಾಗಲೇ ತೆಂಗಿನಕಾಯಿ ಗಳನ್ನು ಖರೀದಿಸುತ್ತಿದೆ. ಬೆಳೆಗಾರರು ತಮ್ಮದೇ ಸಾಗಾಣಿಕೆಯಲ್ಲಿ ತೆಂಗಿನ ಕಾಯಿ ಗಳನ್ನು ಘಟಕಕ್ಕೆ ನೀಡಬೇಕು. ಸುಲಿದಿರುವ ಒಂದು ಕೇಜಿ ತೆಂಗಿನ ಕಾಯಿಗೆ 34 ರೂ. ದರವನ್ನು ಬೆಳೆಗಾರರಿಗೆ ನೀಡಲಾಗು ತ್ತದೆ. ಮಾರನೆಯ ದಿನವೇ ಬೆಳೆಗಾರರ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಈ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ 3.5 ಕೋಟಿ ರೂ. ಮಂಜೂರು ಮಾಡಿತ್ತು. ಮತ್ತೆ ಈ ಅವಧಿಯಲ್ಲಿ ಯಂತ್ರೋಪಕರಣ ಸ್ಥಾಪನೆಗೆ 3 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದೆ. ತೆಂಗು ಅಭಿವೃದ್ಧಿ ಮಂಡಳಿ ಈ ಯೋಜನೆಗೆ 50 ಲಕ್ಷ ರೂ. ಸಹಾಯಧನ ಮಂಜೂರು ಮಾಡಿದೆ. ತೆಂಗು ಬೆಳೆಗಾರರ ಸಹಕಾರ ಸಂಘದ ಸದಸ್ಯರ ಶೇರು ಹಣ 35 ಲಕ್ಷ ರೂ. ವಿನಿಯೋಗಿಸಲಾಗಿದೆ.

 

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.