35 ಅಡಿ ಎತ್ತರದ ಶಿವನ ಪ್ರತಿಮೆ ಲೋಕಾರ್ಪಣೆ


Team Udayavani, Jun 8, 2019, 3:00 AM IST

35adi

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಆಮೆಕೆರೆ ರಸ್ತೆಯಲ್ಲಿ ಸಮೀಪದ ಶಿವಪಾರ್ವತಿ ದೇವಾಲಯ ಆವರಣದಲ್ಲಿ 35 ಅಡಿ ಎತ್ತರ ಶಿವನ ಹಾಗೂ ನಂದಿ ಪ್ರತಿಮೆ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ತಾಲೂಕಿನ ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ ಎಲ್ಲೆ, ಮದ್ದೂರು ಗುಡ್ಡೆ, ಗೌಡಹಳ್ಳಿ ಗ್ರಾಮದ ಹತ್ತಿರದಲ್ಲಿ ಶಿವಪಾರ್ವತಿ ದೇವಸ್ಥಾನ ಗಣಪತಿ ಪೂಜೆ, ಅಗ್ರ ತೀರ್ಥಸಂಗ್ರಹ, ಯಾಗಶಾಲೆ ಪ್ರವೇಶ ಹೋಮ ಹಾಗೂ ಪೂರ್ಣಾಹುತಿ ಸರ್ವತ್ರನ್ಯಾಸ ಮಹಾಮಂಗಳಾರತಿ ಸೇರಿದಂತೆ ಕಳಸ ಪ್ರತಿಷ್ಠಾಪನೆ, ಅಭಿಷೇಕ, ಕುಂಬಾಭಿಷೇಕ, ಇತರೆ ಧಾರ್ಮಿಕ ವಿಧಿಗಳು ನೆರವೇರಿದವು.

35 ಅಡಿ ಎತ್ತರದ ಕಾಂಕ್ರೀಟ್‌ನಲ್ಲಿ ನಿರ್ಮಾಣಗೊಂಡಿರುವ ಪೂರ್ವಾಭಿಮುಖವಾಗಿ ತಪೋಭಂಗಿಯಲ್ಲಿ ಕುಳಿತಿರುವ ಶಿವನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ಇದು ಜಿಲ್ಲೆಯ ಎತ್ತರದ ಶಿವನ ಪ್ರತಿಮೆಯಾಗಿದೆ. ಇದರೊಂದಿಗೆ ನಂದಿ ವಿಗ್ರಹವೂ ಪ್ರತಿಷ್ಠಾಪನೆಯಾಗಿತು.

ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸುಂದರ ಪರಿಸರದಲ್ಲಿ ನಿರ್ಮಾಣವಾಗಿರುವ ಶಿವನ ಮೂರ್ತಿಯು ಬಹಳ ವೈಶಿಷ್ಟ್ಯತೆಯಿಂದ ಕೂಡಿದೆ. ಧಾರ್ಮಿಕ ತಾಣಗಳು ಮಾನಸಿಕ ನೆಮ್ಮದಿಯನ್ನು ನೀಡುತ್ತವೆ. ಇದು ಶ್ರದ್ಧಾ ಕೇಂದ್ರಗಳಾಗಿದೆ. ಇಂತಹ ಕೇಂದ್ರದಲ್ಲಿ ನೆರವೇರುವ ಪ್ರತಿಯೊಂದು ಪೂಜೆಯಲ್ಲೂ ವಿಶಿಷ್ಟತೆಯನ್ನು ಕಾಣಬೇಕು ಎಂದು ಸಲಹೆ ನೀಡಿದರು.

ಸಕಲ ಜಯಿಸುವ ಶಕ್ತಿ ಲಭ್ಯ: ದೈವಾನುಸರಣೆಯಿಂದಲೇ ಸಕಲ ಜಗತ್ತು ರೂಪಿತವಾಗಿದೆ. ದೇವಸ್ಥಾನಗಳಲ್ಲಿ ಕುಳಿತರೆ ಧನ್ಯತೆ ಲಭಿಸುತ್ತದೆ. ದೈವಾನುಗ್ರಹ ಇದ್ದರೆ ಸಕಲವನ್ನು ಜಯಿಸುವ ಶಕ್ತಿ ಮನುಷ್ಯನಿಗೆ ಲಭಿಸುತ್ತದೆ ಎಂದು ವಿವರಿಸಿದರು. ಬೆಳಗ್ಗೆಯಿಂದಲೇ ನವೀನ್‌ ಶಾಸ್ತ್ರಿ ನೇತೃತ್ವದ ವಿದ್ವಾಂಸರ ತಂಡ ಪೂಜಾ ಕೈಂಕರ್ಯಗಳನ್ನು ನೆರವೇರಿಸಿತು.

ವಾಟಾಳು ಮಠದ ಡಾ.ಸಿದ್ದಲಿಂಗ ಶಿವಾಚಾರ್ಯ ಶ್ರೀ, ಗುರುಕಂಬಳೇಶ್ವರ ಮಠದ ಚೆನ್ನಬಸವಸ್ವಾಮಿ, ದೇವನೂರು ಮಠ ಮಾಹಾಂತಸ್ವಾಮಿ, ಕಾರಪುರ ಮಠದ ಬಸವರಾಜುಸ್ವಾಮಿ, ಮರಿಯಾಲ ಮುರುರಾಜೇಂದ್ರಸ್ವಾಮಿ, ಗೌಡಹಳ್ಳಿ ಮಠದ ಮರಿತೋಂಟದಾರ್ಯಸ್ವಾಮಿ, ದೇವಸ್ಥಾನದ ಸಂಸ್ಥಾಪಕ ಪಿ.ರಾಮಣ್ಣ ಸಮಿತಿಯ ಸದಸ್ಯರಾದ ನಾಗೇಂದ್ರಸ್ವಾಮಿ, ನಾಗರಾಜು, ಸೋಮಶೇಖರ್‌, ಸಿದ್ದಲಿಂಗಸ್ವಾಮಿ,

ಶಿವರುದ್ರಪ್ಪ, ಶ್ರೀಕಂಠಮೂರ್ತಿ, ಸೋಮಶೇಖರ್‌, ಮಹದೇವಪ್ಪ, ನಾಗರಾಜು, ನಾಗೇಂದ್ರಮೂರ್ತಿ, ಶುಂಭುಲಿಂಗಪ್ಪ, ಗೌಡಹಳ್ಳಿ ಗ್ರಾ.ಪಂ. ಸದಸ್ಯರಾದ ರವಿ, ಸೋಮಶೇಖರ್‌, ಜಿ.ವಿ.ಮಹದೇವಸ್ವಾಮಿ, ತಾಲೂಕಿನ ಗೌಡಹಳ್ಳಿ, ಬೂದಿತಿಟ್ಟು, ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ, ಚಾಮಲಾಪುರ, ದೇವರಹಳ್ಳಿ ಸೇರಿ ಸುತ್ತಮುತ್ತಲ್ಲಿನ ಗ್ರಾಮದಿಂದ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.