ನದಿ ತೀರದ ಗ್ರಾಮಗಳು ಸಂಪೂರ್ಣ ಮುಳುಗಡೆ


Team Udayavani, Aug 14, 2019, 3:00 AM IST

nadi

ಕೊಳ್ಳೇಗಾಲ: ಕಬಿನಿ ಮತ್ತು ಕೆಆರ್‌ಎಸ್‌ನಿಂದ ಅತಿ ಹೆಚ್ಚು ನೀರನ್ನು ಹೊರ ಬಿಟ್ಟ ಪರಿಣಾಮ ಕಾವೇರಿ ನದಿ ಅಪಾಯಮಟ್ಟ ಮೀರಿದ್ದು, ನದಿ ತೀರದ ಗ್ರಾಮಗಳು ಮುಳುಗಡೆಯಾಗಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಂಗಳವಾರ ನೀರು ಇಳಿಮುಖವಾದ ಪರಿಣಾಮ ಜಿಲ್ಲಾಡಳಿತ ಕೊಂಚ ನಿಟ್ಟಿಸಿರು ಬಿಡುವಂತಾಗಿದೆ.

ಕಾವೇರಿ ನದಿಯ ತೀರದ ಗ್ರಾಮಗಳಾದ ದಾಸನಪುರ, ಹಳೇ ಅಣಗಳ್ಳಿ, ಹರಳೆ, ಮುಳ್ಳೂರು, ಹಳೇ ಹಂಪಾಪುರ, ಯಡಕುರಿಯ ಗ್ರಾಮಗಳು ನೀರಿನ ಪ್ರವಾಹದಿಂದ ಗ್ರಾಮವನ್ನು ಸುತ್ತುವರಿದ ಪರಿಣಾಮ ಸುಮಾರು 37 ಮನೆಗಳು ನೆಲಕ್ಕೆ ಉರುಳಿರುವ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ತಂಡ ಭೇಟಿ: ತಾಲೂಕಿನ ದಾಸನಪುರ 22, ಹಳೇ ಹಂಪಾಪುರ 3, ಮುಳ್ಳೂರು 5, ಹಳೇ ಅಣಗಳ್ಳಿ 7 ಸೇರಿದಂತೆ ಒಟ್ಟು 37 ಮನೆಗಳು ನೆಲಸಮಗೊಂಡಿದೆ. ಎಲ್ಲಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ ನೀಡಲು ಸೂಚನೆ: ತಾಲೂಕು ಮಟ್ಟದ ಅಧಿಕಾರಿಗಳು ಪ್ರವಾಹದಿಂದ ಬಿದ್ದು ಹೋಗಿರುವ ಮನೆಗಳು, ಶಿಥಿಲಗೊಂಡಿರುವ ಮನೆಗಳು ಮತ್ತು ಬೆಳೆ ಹಾನಿಯನ್ನು ಸಂಪೂರ್ಣ ಸಮೀಕ್ಷೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ಅಂದಾಜು ವೆಚ್ಚ ತಯಾರಿಸಿ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಲ ಸೌಕರ್ಯ ಕಲ್ಪಿಸಲಾಗಿದೆ: ಸುದ್ಧಿಗಾರರೊಂದಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಈಗಾಗಲೇ ಪುನರ್‌ ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ದಾಸನಪುರ ಗ್ರಾಮದವರಿಗೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ 398 ಜನರು, ಹಳೇ ಅಣಗಳ್ಳಿ ಗ್ರಾಮದವರಿಗೆ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 303, ಹಳೇ ಹಂಪಾಪುರ ಗ್ರಾಮದವರಿಗೆ ಮಹದೇಶ್ವರ ಕಲ್ಯಾಣ ಮಂಟಪ 154, ಮುಳ್ಳೂರು ಗ್ರಾಮದವರಿಗೆ ಮುಳ್ಳೂರಿನ ಸರ್ಕಾರಿ ಶಾಲೆಯಲ್ಲಿ 320 ಗ್ರಾಮಸ್ಥರು ತಂಗಿ ಊಟ, ಉಪಚಾರವನ್ನು ಪಡೆದುಕೊಳ್ಳುತ್ತಿದ್ಧಾರೆ. ಅವರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಸೂಕ್ತ ಪರಿಹಾರದ ಭರವಸೆ: ಹಲವಾರು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕಳೆದ ವರ್ಷ ಸರಿಯಾದ ಪರಿಹಾರ ಸಿಕ್ಕಿಲ್ಲವೆಂದು ದೂರುಗಳು ಬಂದಿದ್ದು, ಈ ಬಾರಿ ಆ ರೀತಿಯಾಗದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮನೆ ಕಳೆದುಕೊಂಡವರಿಗೆ ದುರಸ್ತಿಯಾಗಿ ದ್ದವರಿಗೆ ಹಾಗೂ ವಿವಿಧ ಫ‌ಸಲನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ, ತಹಶೀಲ್ದಾರ್‌ ಕುನಾಲ್‌, ಡಿವೈಎಸ್ಪಿ ನವೀನ್‌ಕುಮಾರ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌, ಎಸ್‌ಐಗಳಾದ ರಾಜೇಂದ್ರ, ಅಶೋಕ್‌, ಜಿಲ್ಲಾ ಆರೋಗ್ಯಾಧಿಕಾರಿ ರವಿ, ಪೌರಾಯುಕ್ತ ನಾಗಶೆಟ್ಟಿ, ಲೋಕೋಪಯೋಗಿ ಇಲಾಖೆ ಎಇಇ ಮಹದೇವಸ್ವಾಮಿ, ಪಶು ವೈದ್ಯಾಧಿಕಾರಿ ಡಾ.ವೆಂಕಟರಾಮು, ಸಮಾಜ ಕಲ್ಯಾಣ ಇಲಾಖೆಯ ಜಯಕಾಂತ ಸೇರಿದಂತೆ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಇದ್ದರು.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.