ಚಾಮರಾಜ ನಗರ ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಲಾಕ್‌ ಡೌನ್ : ಜಿಲ್ಲಾಡಳಿತ ನಿರ್ಧಾರ


Team Udayavani, Jul 13, 2020, 9:31 PM IST

ಚಾಮರಾಜ ನಗರ ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಲಾಕ್‌ ಡೌನ್ : ಜಿಲ್ಲಾಡಳಿತ ನಿರ್ಧಾರ

ಕೆ.ಎಸ್. ಬನಶಂಕರ ಆರಾಧ್ಯ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ  ಲಾಕ್‌ ಡೌನ್ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಮನಗಂಡಿದೆ.

ಹೀಗಾಗಿ ಗಡಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್‌ಡೌನ್ ಜಾರಿಗೊಳಿಸುತ್ತಿಲ್ಲ.

ಜಿಲ್ಲೆಯಲ್ಲಿ ಒಟ್ಟು 187 ಮಂದಿಗೆ ಸೋಂಕು ತಗುಲಿತ್ತು. ಇದರಲ್ಲಿ 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 92 ಸಕ್ರಿಯ ಪ್ರಕರಣಗಳಿವೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ಹರಡಿರುವುದು ತಮಿಳುನಾಡು ಮತ್ತು ಬೆಂಗಳೂರು ಪ್ರಯಾಣ ಮಾಡಿ ಬಂದವರಿಂದ. ಇದರಲ್ಲಿ ತಮಿಳುನಾಡಿನಿಂದ ಬಂದ ಪ್ರಕರಣ ಗುಂಡ್ಲುಪೇಟೆಯಲ್ಲಿ ನಡೆದಿದ್ದು, ಅದರಲ್ಲಿ ಸೋಂಕಿಗೊಳಗಾದ ವ್ಯಕ್ತಿಯಿಂದ ಅವರ ಕುಟುಂಬದವರು, ಸಂಬಂಧಿಕರು, ಸಂಪರ್ಕಿತರಿಗೆ ಸೋಂಕು ಹರಡಿದೆ. ಅದು ಒಂದು ಪ್ರದೇಶಕ್ಕೆ ಸೀಮಿತವಾಗಿದೆ.

ಬೆಂಗಳೂರಿನಿಂದ ಬಂದವರಿಗೆ ಸೋಂಕು ತಗುಲಿರುವ ಪ್ರಕರಣಗಳು ಜಿಲ್ಲೆಯ ಎಲ್ಲ ತಾಲೂಕುಗಳಿಂದ ವಿವಿಧ ಗ್ರಾಮಗಳಲ್ಲಿ ವರದಿಯಾಗಿವೆ. ಬೆಂಗಳೂರಿನಿಂದ ಬರುವ ಪ್ರಯಾಣಿಕರನ್ನು ಚೆಕ್‌ಪೋಸ್ಟ್ ಸ್ಥಾಪಿಸಿ ನಿರ್ಬಂಧಿಸುವ ಆಲೋಚನೆ ಜಿಲ್ಲಾಡಳಿತಕ್ಕೆ ಇತ್ತು. ಆದರೆ ಈಗ ಬೆಂಗಳೂರು ಲಾಕ್‌ ಡೌನ್ ಘೋಷಿಸಿರುವುದರಿಂದ ಆ ಕ್ರಮವನ್ನು ಕೈಬಿಡಲಾಗಿದೆ.

ಬೆಂಗಳೂರು ಲಾಕ್‌ ಡೌನ್ ಘೋಷಿಸಿ ಮೂರು ದಿನಗಳಾಗಿದ್ದರಿಂದ ಅಲ್ಲಿನವರು ಈಗಾಗಲೇ ಜಿಲ್ಲೆಗೆ ಬಂದಿದ್ದಾರೆ. ಹೀಗಿರುವಾಗ ಜಿಲ್ಲೆಯಲ್ಲಿ ಲಾಕ್‌ ಡೌನ್ ಘೋಷಿಸಿದರೂ ಪರಿಣಾಮವಿಲ್ಲ ಎಂದು ಜಿಲ್ಲಾಡಳಿತ ಮನಗಂಡಿದೆ.

ಲಾಕ್‌ ಡೌನ್ ಮಾಡಿದರೆ ಬೆಂಗಳೂರಿನಿಂದ ಬಂದವರ ಗಂಟಲು ದ್ರವ ಮಾದರಿ ಪರೀಕ್ಷೆಗೂ ಅಡಚಣೆಯಾಗುತ್ತದೆ. ಆದ್ದರಿಂದ ಲಾಕ್‌ ಡೌನ್ ಮಾಡುವ ಅಗತ್ಯವಿಲ್ಲ. ಅದರ ಬದಲು ಬೆಂಗಳೂರಿನಿಂದ ಬಂದವರ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಹೆಚ್ಚು ಹೆಚ್ಚು ನಡೆಸಲು ನಿರ್ಧರಿಸಲಾಗಿದೆ.

ಅಲ್ಲದೇ, ಗಾಳಿ ಮತ್ತು ತುಂತುರು ಮಳೆಯಿಂದಾಗಿ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ಶೀತದ ಪ್ರಕರಣಗಳು ವರದಿಯಾಗುತ್ತಿವೆ. ಅಂಥವರ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಹೆಚ್ಚು ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ.

ಇಷ್ಟೇ ಅಲ್ಲದೇ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಜನರು ಸ್ವಯಂಪ್ರೇರಿತರಾಗಿ ಲಾಕ್‌ ಡೌನ್ ನಡೆಸುತ್ತಿದ್ದಾರೆ. ಕೆಲವು ತಾಲೂಕಿನಲ್ಲಿ ಮಧ್ಯಾಹ್ನ 4 ಗಂಟೆಯ ನಂತರ ಲಾಕ್‌ ಡೌನ್ ಇದೆ.

ಈ ಕುರಿತು ‘ಉದಯವಾಣಿ’ಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು, ಜಿಲ್ಲೆಯಲ್ಲಿ ಲಾಕ್‌ ಡೌನ್ ವಿಧಿಸುವ ಅಗತ್ಯ ಸದ್ಯಕ್ಕೆ ಕಂಡುಬಂದಿಲ್ಲ. ಕೋವಿಡ್ 19 ಪ್ರಕರಣಗಳು ನಿಯಂತ್ರಣದಲ್ಲಿವೆ ಹಾಗಾಗಿ ಈ ಸಂದರ್ಭದಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಬೆಂಗಳೂರಿನಿಂದ ಬರಬೇಕಾದ ಜನರು ಬಂದಿದ್ದಾರೆ. ಬೆಂಗಳೂರಿನಿಂದ ಬಂದಿರುವುದರಿಂದ ಟೆಸ್ಟ್ ಗಳನ್ನು ಹೆಚ್ಚು ಮಾಡಬೇಕು. ಅಲ್ಲದೇ ಸಾರಿ, ILI ಟೆಸ್ಟ್ ಗಳನ್ನು ಹೆಚ್ಚಿಸಲಾಗುವುದು, ಮತ್ತು ಸೂಕ್ತ ವೈದ್ಯೋಪಚಾರ ನಡೆಸಲಾಗುವುದು ಎಂದು ಹೇಳಿದರು.

ಹಾಗೆಂದು, ಜನರು ನಿರ್ಲಕ್ಷ್ಯ ವಹಿಸಬಾರದು. ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಹೊರಗೆ ಹೋದಾಗ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.