ಪ್ರವಾಸಿತಾಣಗಳ ಅಭಿವೃದ್ಧಿ ಬಗ್ಗೆ ಪ್ರಸ್ತಾಪವೇ ಇಲ್ಲ  


Team Udayavani, Feb 18, 2023, 12:32 PM IST

tdy-10

ಚಾಮರಾಜನಗರ: ಯಳಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದು ಹಾಗೂ ಚಾಮರಾಜನಗರದ ಬದನಗುಪ್ಪೆ ಬಳಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಕೈಗಾರಿಕಾ ವಸಾಹತು ಸ್ಥಾಪನೆ ಎಂಬ ಎರಡು ಅಂಶ ಬಿಟ್ಟರೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇ ವಿಶೇಷ ಕೊಡುಗೆಗಳಿಲ್ಲ.

ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದು, ಇದು ಚುನಾವಣಾ ವರ್ಷವಾದ್ದರಿಂದ ಜಿಲ್ಲೆಗೆ ಹೆಚ್ಚಿನ ಕೊಡುಗೆಗಳು ದೊರಕಬಹುದೆಂದು ಜನತೆ ನಿರೀಕ್ಷಿಸಿದ್ದರು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನರ ನಿರೀಕ್ಷೆಯನ್ನ ಹುಸಿಗೊಳಿಸಿದ್ದಾರೆ. ಹೀಗಾಗಿ ಜಿಲ್ಲೆಯ ಪಾಲಿಗೆ ಈ ಬಾರಿಯ ಬಜೆಟ್‌ ನಿರಾಶಾದಾಯಕವಾಗಿದೆ.

ಎರಡು ವರ್ಷಗಳ ಹಿಂದೆ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಜಿಲ್ಲೆಗೆ ಅಗತ್ಯವಾಗಿ ಬೇಕಾದ ಕೆಲಸಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು ಐದು ತಾಲೂಕುಗಳಿದ್ದು, ಒಂದೇ ಉಪ ವಿಭಾಗ (ಕೊಳ್ಳೇಗಾಲ) ಇದೆ. ಆಡಳಿತದ ಕಾರ್ಯನಿರ್ವಹಣೆಗೆ ಅನುಕೂಲವಾಗಲು ಮತ್ತೊಂದು ಉಪವಿಭಾಗ ರಚನೆ ಮಾಡಬೇಕು. ಹನೂರು ಹೊಸ ತಾಲೂಕಿನ ಕಾರ್ಯನಿರ್ವಹಣೆಗಾಗಿ 10 ಕೋಟಿ ರೂ ವೆಚ್ಚದಲ್ಲಿ ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣ ಮಾಡಬೇಕು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766 ಮತ್ತು 948 ಸಂಪರ್ಕಿಸುವ ಸಂತೆಮರಹಳ್ಳಿ ಮೂಗೂರು ಕ್ರಾಸ್‌ ವರೆಗಿನ 7 ಕಿ.ಮೀ. ರಸ್ತೆಯನ್ನು 18 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಸ್ತಾವನೆ.

ಯಳಂದೂರಿನ 30 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ 15.3 ಕೋಟಿ ರೂ ವೆಚ್ಚದ ಪ್ರಸ್ತಾವ ಮಾಡಲಾಗಿತ್ತು. ಈ ಪೈಕಿ ಯಳಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್‌ ನಲ್ಲಿ ಪ್ರಸ್ತಾಪಿಸಲಾಗಿದೆ.

ಈಗಾಗಲೇ ಬದನಗುಪ್ಪೆಯಲ್ಲಿ , ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಎಐಡಿಬಿ) ಯಿಂದ ಕೈಗಾರಿಕಾ ವಸಾಹತು ಸ್ಥಾಪಿಸಲಾಗಿದೆ. ಆದರೆ ಅದಕ್ಕೆ ಹೆಚ್ಚಿನ ಮೂಲ ಸೌಕರ್ಯಗಳಿಲ್ಲದೇ ಕೈಗಾರಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಜನರು ಮುಂದೆ ಬಂದಿಲ್ಲ. ಈ ಬಜೆಟ್‌ನಲ್ಲಿ ಇದೇ ಜಾಗದಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಇದಕ್ಕೆ ಎಷ್ಟು ಅನುದಾನ, ಎಷ್ಟು ಹೆಕ್ಟೇರ್‌ ಪ್ರದೇಶ, ಈ ಜಾಗದ ವಿಸ್ತರಣೆಯೋ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಹೀಗಾಗಿ ಇದು ಸಹ ಮೂಗಿಗೆ ತುಪ್ಪ ಸವರುವ ಕೆಲಸ ಎಂದೇ ತಿಳಿಯಬೇಕಾಗಿದೆ.

ಈಡೇರದ ಜಿಲ್ಲೆಯ ಜನರ ನಿರೀಕ್ಷೆಗಳು :

ಪ್ರವಾಸಿತಾಣಗಳ ಅಭಿವೃದ್ಧಿಗೆ ಅನುದಾನ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫ‌ುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲು ಅನುದಾನ ನೀಡಬಹುದಿತ್ತು. ರಾಜ್ಯ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತಾಳಿದೆ.

ಕಾನೂನು ಕಾಲೇಜು: ಜಿಲ್ಲೆಯಲ್ಲಿಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ. ಅದನ್ನು ಕಾರ್ಯಾರಂಭ ಮಾಡಲು ಅನುದಾನ ನೀಡಿಲ್ಲ.

ಕಾವೇರಿ 2ನೇ ಹಂತ: ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ತಿ.ನರಸೀಪುರದಿಂದ ಕಾವೇರಿ ನೀರು ಪೂರೈಸಲಾಗುತ್ತಿದ್ದು, ಈಗಿನ ಜನಸಂಖ್ಯೆಗೆ ಈ ನೀರು ಸಾಲುತ್ತಿಲ್ಲ. ಹೀಗಾಗಿ ಪಟ್ಟಣಕ್ಕೆ ಎರಡನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ನಿರೀಕ್ಷಿಸಲಾಗಿದೆ. ಮಾಲಂಗಿಯಿಂದ ಪೈಪುಗಳ ಮೂಲಕ ನೀರು ಪೂರೈಸುವ ಈ ಯೋಜನೆಗೆ 279 ಕೋಟಿ ರೂ. ಅಂದಾಜು ತಯಾರಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಬಜೆಟ್‌ನಲ್ಲಿ ಇದರ ಬಗ್ಗೆ ಪ್ರಸ್ತಾವವಿಲ್ಲ.

ಹೊಸ ಬಸ್‌ ನಿಲ್ದಾಣ: ನಗರದಲ್ಲಿ ಈಗಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಚಿಕ್ಕದಾಗಿದ್ದು, ವಿಶಾಲವಾದ ಹೈಟೆಕ್‌ ಬಸ್‌ನಿಲ್ದಾಣವನ್ನು ಸಂತೆಮರಹಳ್ಳಿ ರಸ್ತೆಯ ರೇಷ್ಮೆ ಇಲಾಖೆ ಕಟ್ಟಡದ ಆವರಣದಲ್ಲಿ ನಿರ್ಮಿಸಲು ಅನುದಾನ ನಿರೀಕ್ಷಿಸಲಾಗಿತ್ತು. ಬಜೆಟ್‌ನಲ್ಲಿ ಇದರ ಸದ್ದಿಲ್ಲ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet Bandh: ನಾಳಿನ ಗುಂಡ್ಲುಪೇಟೆ ಬಂದ್‌ಗೆ ಸಹಕರಿಸಿ: ನಿರಂಜನಕುಮಾರ್‌

Gundlupet Bandh: ನಾಳಿನ ಗುಂಡ್ಲುಪೇಟೆ ಬಂದ್‌ಗೆ ಸಹಕರಿಸಿ: ನಿರಂಜನಕುಮಾರ್‌

1-sadsd

Hanur; ಸಾಮೂಹಿಕ ವಿವಾಹದಲ್ಲಿ ವರನ ಪೇಟ ಸರಿಪಡಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ದೂರಿ ಮದುವೆ ಮಾಡುವುದು ನಿಲ್ಲಿಸಿ: ಸಿಎಂ

CM Siddaramaiah: ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ದೂರಿ ಮದುವೆ ಮಾಡುವುದು ನಿಲ್ಲಿಸಿ: ಸಿಎಂ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.