ಜಾತಿ, ಧರ್ಮದ ಹೆಸರಿನಲ್ಲಿ ದೇಶ ಒಡೆಯುವುದು ಬೇಡ
Team Udayavani, Jan 15, 2020, 3:00 AM IST
ಯಳಂದೂರು: ಧರ್ಮ ನಿರಪೇಕ್ಷತೆ ಹಾಗೂ ಜಾತ್ಯತೀತತೆ ಭಾರತ ಸಂವಿಧಾನದ ಆತ್ಮವಾಗಿದೆ. ದೇಶದಲ್ಲಿ ಎನ್ಆರ್ಸಿ, ಸಿಎಎ ಜಾರಿಯಾದರೆ ಇದಕ್ಕೆ ಅಪಚಾರವೆಸಗಿದಂತಾಗುತ್ತದೆ. ಈ ನಿಟ್ಟಿನಲ್ಲಿ ದೇಶವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದು ತರವಲ್ಲ ಎಂದು ನಿವೃತ್ತ ಪ್ರಾಂಶುಪಾಲ ಜೀತವನದ ಮನೋರಖೀತ ಬಂತೇಜಿ ತಿಳಿಸಿದರು.
ತಾಲೂಕಿನ ಮಲಾರಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮದ ಜನರು ಸಾವಿರಾರು ವರ್ಷಗಳಿಂದಲೂ ವಾಸವಾಗಿದ್ದಾರೆ. ಇಡೀ ವಿಶ್ವಕ್ಕೆ ಐಕ್ಯತೆಯ ಸಂದೇಶ ಸಾರಿದ್ದು, ನಮ್ಮ ದೇಶವಾಗಿದೆ. ಇದನ್ನು ಮುಂದುವರಿಸಿಕೊಳ್ಳುವ ಅಗತ್ಯತೆ ಪ್ರಸ್ತುತಕ್ಕೆ ಹೆಚ್ಚಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಅಂತಃಕರಣ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳು ಅಂತಃಕರಣ ಹಾಗೂ ಆತ್ಮ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ನೈತಿಕ ನೆಲೆಗಟ್ಟಿನಲ್ಲಿ ಬದುಕು ರೂಪಿಸಿಕೊಳ್ಳಬೇಕು. ಬುದ್ಧನ ಪಂಚಶೀಲಗಳ ಪಾಲನೆ ರೂಢಿಸಿಕೊಳ್ಳಬೇಕು. ಕ್ಷಮಾಗುಣವನ್ನು ಬೆಳೆಸಿಕೊಳ್ಳಬೇಕು. ಹೆಣ್ಣು ಮಕ್ಕಳು ಮನೆಯಲ್ಲಿ ಹಿರಿಯ ಅನುಮತಿ ಪಡೆದುಕೊಂಡು ವಿವಾಹ ಮಾಡಿಕೊಳ್ಳಬೇಕು. ಇದರಿಂದ ಎರಡೂ ಸಂಬಂಧಗಳು ಬಲಗೊಳ್ಳುತ್ತವೆ. ದಾಂಪತ್ಯ ಪಾವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ಹಿರಿಯರನ್ನು ಗೌರವಿಸುವ ಮನೋಭಾವನೆ ರೂಢಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ: ಕಾಲೇಜಿನ ಪ್ರಾಂಶುಪಾಲ ಜೆ. ಸುರೇಂದ್ರ ಮಾತನಾಡಿ, ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಹಾಗೂ ಅವರಲ್ಲಿನ ಪ್ರತಿಭೆಗಳನ್ನು ಅನಾವರಣಕ್ಕೆ ಸಹಕಾರ ನೀಡುತ್ತದೆ. ಇಂತಹ ಕಾರ್ಯಕ್ರಮದ ಪ್ರಯೋಜನ ಭವಿಷ್ಯದಲ್ಲಿ ಸತಜೆಗಳಾಗಿ ರೂಪುಗೊಳ್ಳಲು ಸಹಕಾರ ನೀಡುತ್ತದೆ. ಪ್ರತಿಯೊಬ್ಬರೂ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕನ್ನಡ ಭಾಷಾ ವಿಭಾಗದ ಸಹ ಪ್ರಾಧ್ಯಪಕ ಥಿಯೋಡರ್ ಲೂಥರ್ ಮಾತನಾಡಿ, ಎನ್ಎಸ್ಎಸ್ನಲ್ಲಿ ರಾಷ್ಟ್ರ ಸೇವೆ ಸಲ್ಲಿಸುವ ಒಂದು ನೆಪವಾಗಬಾರದು. ಇದು ರೂಢಿಯಾಗಬೇಕು. ವ್ಯಕ್ತಿಗತವಾಗಿ ದೇಶಪ್ರೇಮ, ದೇಶಸೇವೆಯನ್ನು ಬೆಳೆಸಿಕೊಳ್ಳುವ ಮನೋಭಾವ ವೃದ್ಧಿಯಾಗಬೇಕು ಎಂದು ಹೇಳಿದರು. ಈ ವೇಳೆ ಶಿಬಿರಾಧಿಕಾರಿ ಗಿರಿಜಾ, ಹಾಲು ಉತ್ಪಾದಕರ ಸಂಘದ ಲಿಂಗರಾಜು, ಉಪನ್ಯಾಸಕರಾದ ಸತೀಶ್, ಮಹಾಂತೇಶ್, ಚೇತನ್, ಮಹಾದೇವ ಕುಮಾರ್, ಸಿದ್ದರಾಜೇಗೌಡ, ಸುರೇಂದ್ರ, ನಂಜೇಶ್, ಶೋಭಾ ಹಾಗೂ ಎನ್ಎಸ್ಎಸ್ ಶಿಬಿರಾರ್ಥಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್