ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಮೂವರ ಬಂಧನ: 2 ನಾಡಬಂದೂಕು, ಮುದ್ದುಗುಂಡು ವಶ
Team Udayavani, Nov 13, 2020, 2:05 PM IST
ಹನೂರು (ಚಾಮರಾಜನಗರ) : ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿ ಬೇಟೆಗೆ ಹೊಂಚು ಹಾಕುತ್ತಿದ್ದ 3 ಜನರನ್ನು ಬಂಧಿಸುವಲ್ಲಿ ಕಾವೇರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲೂಕಿನ ಗಡಿಯಂಚಿನ ಆತೂರು ಗ್ರಾಮದ ಅಯ್ಯನ್, ಮಾರೀಮುತ್ತು ಮತ್ತು ಶಿವಕುಮಾರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಈ 3 ಜನರ ತಂಡ ಅಕ್ರಮವಾಗಿ ಗೋಪಿನಾಥಂ ವಿಭಾಗದ ಮೇಟಗಲು ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದಾರೆ.
ಇದನ್ನು ಗಮನಿಸಿದ ಗುಂಡಪಟ್ಟಿ ಕಳ್ಳಬೇಟೆ ತಡೆ ಶಿಬಿರ ಮತ್ತು ಪುಂಗಂ ಗಸ್ತಿನ ಅರಣ್ಯ ರಕ್ಷಕ ಚಂದ್ರಶೇಖರ್ ಕಂಬಾರ ಗಸ್ತಿನಲ್ಲಿರುವಾಗ ಈ ತಂಡವನ್ನು ಪತ್ತೆ ಹಚ್ಚಿ ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಬಂಧಿತರಿಂದ 2 ನಾಡಬಂದೂಕು, 1 ಹೋಂಡಾ ಶೈನ್ ದ್ವಿಚಕ್ರ ವಾಹನ, 2 ಕತ್ತಿ, ತಲೆ ಬ್ಯಾಟರಿ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಳಿಕ ಇವರನ್ನು ವಿಚಾರಣೆಗೊಳಪಡಿಸಿದಾಗ ಈ ಹಿಂದೆ ಜಿಂಕೆ ಬೇಟೆಯಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅರಣ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ