ಹಳೇ ವೈಷಮ್ಯಕ್ಕೆ ಮೂವರು ಬಲಿ
Team Udayavani, May 26, 2020, 11:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಹಳೇ ವೈಷಮ್ಯದ ಕಾರಣದಿಂದ ವ್ಯಕ್ತಿಗಳ ನಡುವೆ ಜಗಳ ನಡೆದು ಅದು ಮೂರು ಜನರ ಸಾವಿನಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಪಟ್ಟಣದ ಝಾಕಿರ್ ಹುಸೇನ್ ನಗರದ ನಿವಾಸಿಗಳಾದ ಜಕಾವುಲ್ಲಾ (30), ಕೈಸರ್ (29), ಇಕ್ರಿಸ್ (30) ಕೊಲೆಗೀಡಾದವರು ಮತ್ತು ನಸ್ರುಲ್ಲಾ (30) ಎಂಬಾತ ತೀವ್ರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಳೆಯ ವೈಷಮ್ಯದಿಂದ ಪ್ರಾರಂಭವಾದ ಜಗಳ ಬಳಿಕ ಅದು ವಿಕೋಪಕ್ಕೆ ತಿರುಗಿ ಅವರೆಲ್ಲರೂ ಚಾಕು ಹಾಗೂ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ ಈ ಜಗಳ ಮೂವರ ಕೊಲೆಯಲ್ಲಿ ಪರ್ಯಾವಸನವಾಗಿದೆ.
ಘಟನಾ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ಇದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್, ಡಿವೈಎಸ್ಪಿ ಮೋಹನ್ ಸರ್ಕಲ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ, ಎಸ್ ಐ ಲತೇಶ್ ಕುಮಾರ್ ಭೇಟಿ ನೀಡಿದ್ದಾರೆ. ಗುಂಡ್ಲುಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್ ಟಿಕೆಟ್?
Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು
Lok Sabha Poll 2024: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ
Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ