Shocking: ವ್ಯಕ್ತಿಯ ದೇಹದ ಮುಕ್ಕಾಲು ಭಾಗವನ್ನೇ ತಿಂದು ಹಾಕಿದ ಹುಲಿ; ಭಯದಲ್ಲಿ ಗ್ರಾಮಸ್ಥರು
Team Udayavani, Dec 12, 2023, 2:01 PM IST
ಗುಂಡ್ಲುಪೇಟೆ(ಚಾಮರಾಜನಗರ): ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ದುರ್ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಮಂಗಳವಾರ ನಡೆದಿದೆ.
ಆಡಿನಕಣಿವೆಯ ಬಸವಯ್ಯ(54) ಮೃತ ವ್ಯಕ್ತಿ. ಈತ ಬುಡಕಟ್ಟು ಜನಾಂಗದವನಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ. ನಂತರ ಮನೆಗೆ ವಾಪಾಸ್ಸಾಗದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅಭಯಾರಣ್ಯದ ಒಳಗೆ ಮೃತದೇಹ ಪತ್ತೆಯಾಗಿದೆ. ಆತನ ಕಾಲು, ಎದೆಯ ಭಾಗವನ್ನು ಹುಲಿ ತಿಂದು ಹಾಕಿದ್ದು, ಕೇವಲ ಹೊಟ್ಟೆ ಭಾಗವನ್ನು ಮಾತ್ರ ಬಿಟ್ಟಿದೆ. ಮುಕ್ಕಾಲು ಭಾಗ ತಿಂದು ಬಿಟ್ಟ ಮೃತದೇಹ ಕಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಘಟನೆ ಕುರಿತು ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ