ವಿಷ ಪ್ರಾಶನದಿಂದಲೇ ಹುಲಿ, ಆನೆ ಸಾವು: ಲ್ಯಾಬ್‌ನಲ್ಲಿ ದೃಢ


Team Udayavani, Apr 9, 2018, 6:20 AM IST

Bandipur-Tiger-Project.jpg

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಈಚೆಗೆ ಎರಡು ಹುಲಿಗಳು ಸಾವನ್ನಪ್ಪಿದ್ದು, ಇವು ರಾಸಾಯನಿಕ ಮಿಶ್ರಿತದಿಂದ ಎಂದು ಪ್ರಯೋಗಾಲಯದ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಂಕಿತ ವ್ಯಕ್ತಿಗಳ ಬಂಧನಕ್ಕೆ ಅರಣ್ಯಾಧಿಕಾರಿಗಳ ತಂಡ ಮುಂದಾಗಿದೆ.

ಬಂಡೀಪುರ ಅಭಯಾರಣ್ಯದ ಗೋಪಾಲಸ್ವಾಮಿಬೆಟ್ಟ ಅರಣ್ಯ ವಲಯದ ಹಿರಿಕೆರೆ ಬಳಿಯಲ್ಲಿ ಜ.25ರಂದು ಸುಮಾರು ಮೂರು ವರ್ಷದ ಒಂದು ಗಂಡು ಹಾಗೂ ಒಂದು ಹೆಣ್ಣು ಹುಲಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದವು.

ಇದರ ಸಮೀಪವೇ ಸುಮಾರು 25 ವರ್ಷದ ಹೆಣ್ಣಾನೆಯ ಕಳೇಬರ ಸಹ ಕೊಳೆತ ಸ್ಥಿತಿಯಲ್ಲಿ ಬಿದ್ದಿರುವುದನ್ನು ಹುಲಿಗಣತಿಗೆ ಕ್ಯಾಮೆರಾ ಅಳವಡಿಸಲು ಹೋಗಿದ್ದ ಸಿಬ್ಬಂದಿ ಪತ್ತೆ ಹಚ್ಚಿದ್ದರು. ದೇಹದ ಕೆಲವು ಅಂಗಾಂಗಗಳನ್ನು ಬೆಂಗಳೂರು, ಮೈಸೂರು ಹಾಗೂ ಕೊಯಮತ್ತೂರಿನ ವಿಧಿವಿಜಾnನ ಪ್ರಯೋಗಾಲ ಯಗಳಿಗೆ ಕಳುಹಿಸಲಾಗಿತ್ತು. ಕೊಯಮತ್ತೂರಿನ ಪ್ರಯೋಗಾಲಯದ ವರದಿ ಬಂದಿದ್ದು, ರಾಸಾಯನಿಕ ಮಿಶ್ರಿತ ವಿಷ ಪ್ರಾಶನದಿಂದ ಪ್ರಾಣಿಗಳು ಸಾವಿಗೀಡಾಗಿದೆ ಎಂದು ವರದಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ಪ್ರಾಣಿಗಳ ನಿಗೂಢ ಸಾವಿನ ಪತ್ತೆಗೆ ಅರಣ್ಯ ಇಲಾಖೆಯು ಹೆಡಿಯಾಲ ಉಪವಿಭಾಗದ ಎಸಿಎಫ್ ಕೆ.ಪರಮೇಶ್‌ ನೇತೃತ್ವದಲ್ಲಿ ತನಿಖಾ ತಂಡ ನೇಮಿಸಿ ಮಾಹಿತಿದಾರರಿಂದ ಮಾಹಿತಿ ಸಂಗ್ರಹಿಸಿತ್ತು. ವನ್ಯಜೀವಿಗಳು ಸಾವಿಗೀಡಾದ ಸ್ಥಳದ ಪಕ್ಕದಲ್ಲಿರುವ ಕಾಡಂಚಿನ ಜಮೀನಿನಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಬೇಸತ್ತ ಕೆಲವರು ಜಮೀನಿನಲ್ಲಿರುವ ತೊಟ್ಟಿಯ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ್ದರು ಎನ್ನಲಾಗಿದೆ. ಈ ನೀರು ಕುಡಿದ ಆನೆಯು ಅರಣ್ಯ ಪ್ರದೇಶದಲ್ಲಿ ಸಾವಿಗೀಡಾಗಿದ್ದು, ಇದರ ಮಾಂಸ ತಿಂದ ಎರಡು ಹುಲಿಗಳು ಸಾವಿಗೀಡಾಗಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.