ಹುಲಿ, ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಗ್ರಾಮಸ್ಥರು


Team Udayavani, Feb 12, 2019, 7:25 AM IST

huli.jpg

ಕೊಳ್ಳೇಗಾಲ: ಕಾಡಂಚಿನ ಗ್ರಾಮಗಳಾದ ಜಕ್ಕಳ್ಳಿ, ಹಿತ್ತಲದೊಡ್ಡಿ, ಅರೇಪಾಳ್ಯ, ಸೂರಾಪುರ ಮತ್ತಿತರ ಗ್ರಾಮಗಳಲ್ಲಿ ಹುಲಿ ಹಾಗೂ ಚಿರತೆ ಪ್ರತ್ಯೇಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರ ಬರಲು ಹಾಗೂ ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿರುವ ಜನರು ತೋಟದ ಮನೆಗಳಲ್ಲಿ ಹಸು, ಕುರಿ, ಕೋಳಿಗಳನ್ನು ಸಾಕಿ ಜಮೀನುಗಳಲ್ಲಿ ವಿವಿಧ ಫ‌ಸಲುಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ. ಹುಲಿ ಮತ್ತು ಚಿರತೆ ಅಲ್ಲಲ್ಲಿ ಪ್ರತ್ಯೇಕ್ಷವಾಗಿರುವ ಸುದ್ದಿ ಹರಡುತ್ತಿದ್ದಂತೆ ಜಮೀನುಗಳಿಗೆ ತೆರಳಲು ಜೀವಭಯದಿಂದ ‌ಹಿಂದೇಟು ಹಾಕುತ್ತಿದ್ದಾರೆ.

ರಾತ್ರಿ ಸಂಚರಿಸಲು ಭಯ: ಕಾಡಂಚಿನ ಗ್ರಾಮಗಳಲ್ಲಿ ವಾಸವಾಗಿರುವ ಜನರು ಕತ್ತಲಾಗುತ್ತಿದ್ದಂತೆ ಮನೆ ಸೇರಿ ರಾತ್ರಿ ವೇಳೆ ಓಡಾಡಲು ಭಯಭೀತರಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಿಂದ ಗ್ರಾಮಗಳಿಗೆ ಬಂದಿರುವ ಹುಲಿ ಮತ್ತು ಚಿರತೆಯನ್ನು ಕೂಡಲೇ ಹಿಡಿದು ಕಾಡಿಗಟ್ಟಿ ಗ್ರಾಮಸ್ಥರ ಪ್ರಾಣ ರಕ್ಷಣೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹುಲಿ ಪ್ರತ್ಯಕ್ಷ: ತಾಲೂಕಿನ ಸೂರಾಪುರ ಗ್ರಾಮದಲ್ಲಿ ರಾತ್ರಿಯ ಹೊತ್ತುಹುಲಿಯೊಂದು ಕಾಣಿಸಿಕೊಳ್ಳುತ್ತಿದ್ದಂತೆ ತೋಟದ ಮನೆಯ ಮಾಲಿಕ ಜೋಗಿರಾಜ್‌ ಪ್ರಾಣಿಯನ್ನು ಕಂಡು ನಂತರ ಮನೆಯ ಮುಂಭಾಗ ಇರುವ ಬೊಲೆರೋ ವಾಹನದಲ್ಲಿ ಕುಳಿತು ಲೈಟನ್ನು ಪ್ರಕಾಶನಮಾನಗೊಳಿಸಿ ಹುಲಿಯ ಚಿತ್ರವನ್ನು ಸೆರೆಹಿಡಿದಿದ್ದಾರೆ.

ಹುಲಿ, ಚಿರತೆ ಹೆಜ್ಜೆ ಗುರುತು: ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕರಡಿಗುಡ್ಡದ ಮೇಲೆ ಹುಲಿ ಪ್ರತ್ಯಕ್ಷವಾಗಿರುವುದನ್ನು ಕಣ್ಣಾರೆ ಕಂಡಿದ್ದೇನೆ. ಈ ಚಿತ್ರವನ್ನು ಸೆರೆ ಹಿಡಿದಿದ್ದೇನೆ. ಅಲ್ಲದೇ ಇಲ್ಲಿ ಹುಲಿ ಹಾಗೂ ಚಿರತೆಗಳು ಓಡಾಡಿರುವ ಹೆಜ್ಜೆ ಗುರುತು ಸಹ ಇದೆ. ಇದರಿಂದ ಮನೆಯಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಪ್ರತಿ ಕ್ಷಣವೂ ಆತಂಕದಲ್ಲಿ ಬದುಕುತ್ತಿದ್ದೇವೆ ಎಂದು ಅವಲತ್ತುಕೊಂಡಿದ್ದಾರೆ.

ಗ್ರಾಮದ ಕರಡಿಗುಡ್ಡ ಬಳಿ 130 ಎಕರೆ ಜಮೀನು ಇದ್ದು, ಜಮೀನಿನಲ್ಲಿ ಎಲ್ಲಾ ತರಹದ ಬೆಳೆಗಳನ್ನು ಹಾಕಲಾಗಿದೆ. ನಿತ್ಯ ಕಳೆ ತೆಗೆಯುವ ಕೆಲಸಕ್ಕೆ ಕೂಲಿ ಆಳುಗಳು ಹುಲಿ ಹಾಗೂ ಚಿರತೆ ಭಯದಿಂದ ಬರುತ್ತಿಲ್ಲ. ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಕಾಡುಪ್ರಾಣಿಗಳು ಪ್ರತ್ಯೇಕವಾಗಿರುವ ಬಗ್ಗೆ ಹಲವಾರು ಬಾರಿ ಡಿಎಫ್ಒ ಬಳಿ ಹೇಳಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.

ಕಂದಕ ನಿರ್ಮಿಸಿ: ಕಾಡು ಪ್ರಾಣಿಗಳ ಹಾವಳಿ ತಡೆಯಲು ಕಾಡಂಚಿನಲ್ಲಿ ಕಂದಕ ಕೊರೆದು, ತಂತಿ ಬೇಲಿ ನಿರ್ಮಾಣ ಮಾಡಿಕೊಡುವಂತೆ ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದು, ಆದರೆ ಇದುವರೆಗೂ ಕಂದಕ ಕೊರೆದಿಲ್ಲ ಮತ್ತು ತಂತಿಬೇಲಿ ನಿರ್ಮಾಣ ಮಾಡದೆ ಇರುವುದರು ಜನರಿಗೆ ಮತ್ತಷ್ಟು ಭಯ ಉಂಟಾಗಿದೆ. ಕೂಡಲೇ ಕಾಡಂಚಿನ ಗ್ರಾಮಗಳಲ್ಲಿ ಕಂದಕ ನಿರ್ಮಿಸಿ, ರೈಲ್ವೆ ಹಳಿ ನಿರ್ಮಿಸಬೇಕು. ಜೊತೆಗೆ ಈ ಭಾಗದಲ್ಲಿ ಅರಣ್ಯ ಇಲಾಖೆ ಗಸ್ತು ಸಿಬ್ಬಂದಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.