ಸಕಾಲಕ್ಕೆ ಸಿಗದ ಜಾತಿ ಪ್ರಮಾಣ ಪತ್ರ
ಕೆಲವೊಮ್ಮೆ ತಾಂತ್ರಿಕ ತೊಂದರೆಗಳಿಂದ ವಿತರಣೆ ವಿಳಂಬ: ತಹಶೀಲ್ದಾರ್
Team Udayavani, Jul 12, 2019, 3:48 PM IST
ತೆರಕಣಾಂಬಿ ಗ್ರಾಮದಲ್ಲಿ ಆರ್ಟಿಸಿ ಪಡೆಯಲು ಕಾದುನಿಂತಿರುವ ರೈತರು.
ಗುಂಡ್ಲುಪೇಟೆ: ಇಂಟರ್ನೆಟ್ ಸಮಸ್ಯೆ ಹಾಗೂ ವಿದ್ಯುತ್ ಕಡಿತದಿಂದಾಗಿ ಪಟ್ಟಣದ ಪಡಸಾಲೆ ಮತ್ತು ತಾಲೂಕಿನ ತೆರಕಣಾಂಬಿಯ ನಾಡಕಚೇರಿಯಲ್ಲಿ ಆರ್ಟಿಸಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲಕ್ಕೆ ಸಿಗದೆ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಕಂದಾಯ ಇಲಾಖೆಯ ಸೇವಾ ಕೇಂದ್ರಗಳಲ್ಲಿ ಕಳೆದ ಕೆಲವು ದಿನಗಳಿಂದ ಅಂತರ್ಜಾಲ ಸಂಪರ್ಕದ ಸಮಸ್ಯೆ ಎದುರಾಗಿದ್ದರಿಂದ ವಿವಿಧ ಉದ್ದೇಶಗಳಿಗೆ ರೈತರು ಆರ್ಟಿಸಿ ಪಡೆದುಕೊಳ್ಳಲು ಸಾಧ್ಯ ವಾಗುತ್ತಿಲ್ಲ. ಅನಿವಾರ್ಯವಾಗಿ ಖಾಸಗಿ ಕಂಪ್ಯೂಟರ್ ಕೇಂದ್ರಗಳ ಮೊರೆಹೋಗಿ ದುಬಾರಿ ಬೆಲೆ ತೆತ್ತು ಆರ್ಟಿಸಿ ಪಡೆದು ಕೊಳ್ಳಬೇಕಾಗಿತ್ತು. ಆದರೆ ಇತ್ತೀಚೆಗೆ ಸರ್ವರ್ ಸಮಸ್ಯೆಯಿಂದ ಅಲ್ಲಿಯೂ ದೊರಕದೆ ಪರದಾಡುವಂತಾಗಿದೆ.
ಇಂಟರ್ನೆಟ್ ಸಂಪರ್ಕವಾಗಿ ದೊರೆತರೂ ಸಹ ಯುಪಿಎಸ್ ಕೆಟ್ಟುಹೋ ಗಿರುವ ಪರಿಣಾಮ ವಿದ್ಯುತ್ ಕಡಿತವಾದ ಸಂದರ್ಭದಲ್ಲಿಯೂ ಗಂಟೆಗಟ್ಟಲೆ ಕಾಯ ಬೇಕಾಗಿದೆ. ಬೆಳಗ್ಗೆ ಕಚೇರಿ ಬಾಗಿಲು ತೆರೆಯುವ ಮೊದಲೇ ಸರದಿಯಲ್ಲಿ ನಿಲ್ಲುವ ಸಾರ್ವಜ ನಿಕರು ಇಡೀ ದಿನ ಕಾದರೂ ತಮ್ಮ ಕೆಲಸಕಾರ್ಯ ಗಳಾಗದೆ ಹಿಂದಿರುಗ ಬೇಕಾ ಗಿದೆ. ಆದ್ದರಿಂದ ಇನ್ನಾದರೂ ಸಂಬಂಧ ಪಟ್ಟವರು ಸಕಾಲದಲ್ಲಿ ಆರ್ಟಿಸಿ, ಆದಾ ಯ ಹಾಗೂ ಜಾತಿ ಪ್ರಮಾಣ ಪತ್ರಗಳು ದೊರಕುವಂತೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ