ರಸ್ತೆಯಲ್ಲೇ ಒಕ್ಕಣೆಯಿಂದ ಸಂಚಾರಕ್ಕೆ ಅಡ್ಡಿ


Team Udayavani, Nov 6, 2019, 3:00 AM IST

rasteyalle

ಯಳಂದೂರು: ತಾಲೂಕಿನ ರೈತರ ಬೆಳೆಗಳನ್ನು ಒಕ್ಕಣೆಯನ್ನು ಮಾಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ಕಣಗಳು ಕೆಲಸಕ್ಕೆ ಬಾರದೇ ನಿರುಪಯುಕ್ತವಾಗಿದೆ. ಯಳಂದೂರು ತಾಲೂಕಿನ 5000ಕ್ಕೂ ಹೆಚ್ಚು ಹೇಕ್ಟರ್‌ ಕೃಷಿ ಜಮೀನಿನಲ್ಲಿ ಭತ್ತ, ರಾಗಿ, ಜೋಳ, ಉದ್ದು, ಹುರಳಿ, ಅಲಸಂದೆ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಆದರೆ, ಕೃಷಿ ಇಲಾಖೆಯು ಎಲ್ಲಾ ಗ್ರಾಮಗಳಲೂ ಸಾಮೂಹಿಕ ಒಕ್ಕಣೆ ಕಣ ಹಾಗೂ ವೈಯುಕ್ತಿಕ ಕಣ ಗಳ ನಿರ್ಮಿಸಲು ಹೆಚ್ಚಿನ ಯೋಜನೆ ರೂಪಿಸದ ಕಾರಣ ಒಕ್ಕಣೆ ಕಾರ್ಯಕ್ಕೆ ಅಡ್ಡಿಯಾಗಿದೆ. ತಮ್ಮ ಜಮೀನುಗಳಲ್ಲಿ ಕಣಗಳನ್ನು ನಿರ್ಮಿಸಿಕೊಳ್ಳಲು ಮುಂದಾಗದ ಬಹುತೇಕ ರೈತರು, ರಸ್ತೆಗಳಲ್ಲಿ ಒಕ್ಕಣೆ ಮಾಡಲು ಮುಂದಾಗುತ್ತಿರುವುದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.

ಅಧಿಕಾರಿಗಳು ಜಾಗೃತಿ ಮೂಡಿಸಲಿ: ಪ್ರತಿನಿತ್ಯ ಯಳಂದೂರು, ಬಿಳಿಗಿರಿರಂಗನಬೆಟ್ಟ, ಕೆಸ್ತೂರು, ಮದ್ದೂರು, ವೈ.ಕೆ.ಮೋಳೆ, ಗೌಡಹಳ್ಳಿ ಸೇರಿದಂತೆ ಈ ಮಾರ್ಗದಲ್ಲಿ ಸಂಚಾರ ಮಾಡುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳೆಗಳನ್ನು ರಸ್ತೆಗೆ ಹಾಕದಂತೆ ಅರಿವು ಮೂಡಿಸಿ, ವಾಹನ ಸವಾರರಿಗೆ ಉಂಟಾಗುತ್ತಿರುವ ಕಿರಿಕಿರಿ ತಪ್ಪಿಸಬೇಕು. ಕೃಷಿ ಇಲಾಖೆಯ ಎಲ್ಲಾ ಗ್ರಾಮಗಳಲ್ಲಿ ಸಾಮೂಹಿಕ ಒಕ್ಕಣೆ ಕಣ ಹಾಗೂ ವೈಯುಕ್ತಿಕ ಕಣ ನಿರ್ಮಿಸಲು ಹೆಚ್ಚಿನ ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜಾಗೃತಿಯನ್ನು ಮೂಡಿಸಬೇಕು ಎಂಬುದು ವಾಹನ ಸವಾರರಾದ ಸುಂದರರಾಜು, ಸಿದ್ದಪ್ಪಸ್ವಾಮಿ ಅನಿಸಿಕೆ.

ದ್ವಿಚಕ್ರ ವಾಹನ ಸವಾರರು ಬೀಳುವ ಸಂಭವ: ತಾಲೂಕಿನ ದುಗ್ಗಹಟ್ಟಿ, ಹೊನ್ನೂರು, ಗುಂಬಳ್ಳಿ, ಗೌಡಹಳ್ಳಿ, ಯರಂಗಬಳ್ಳಿ, ಅಗರ, ಯರಿಯೂರು ಸೇರಿದಂತೆ ಇತರೆ ಗ್ರಾಮಗಳಲ್ಲಿ ಸಾಮೂಹಿಕ ಒಕ್ಕಣೆ ಕಣಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ರೈತರು ಮಾತ್ರ ರಸ್ತೆಯಲ್ಲಿ ರಾಗಿ, ಮುಸುಕಿನ ಜೋಳ, ಹುರುಳಿ ಹಾಕುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ ಗಾಳಿ ಬಂದಾಗ ಕಾಳನ್ನು ರಸ್ತೆ ಬದಿಯಲ್ಲೇ ತೂರುವುದರಿಂದ ಧೂಳು ಕಣ್ಣಿಗೆ ಬೀಳುತ್ತದೆ. ಹೆಚ್ಚಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುವ ಸಂಭಾವವೇ ಹೆಚ್ಚು. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕಿದೆ.

ರಸ್ತೆ ಅಪಘಾತ ಹೆಚ್ಚಳ: ರೈತರು ರಸ್ತೆಗಳಲ್ಲಿ ಒಕ್ಕಣೆ ಮಾಡುವುದರಿಂದ ರಸ್ತೆಗಳಲ್ಲಿ ಅಪಾಘಾತಗಳು ಹೆಚ್ಚಾಗುತ್ತಿದೆ. ಇದರ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಸಾಮೂಹಿಕ ಒಕ್ಕಣೆ ಕಣ ಅಥವಾ ವೈಯುಕ್ತಿಕ ಕಣಗಳ ನಿರ್ಮಾಣಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಮಾಹಿತಿಗಳನ್ನು ನೀಡಿ, ರಸ್ತೆಗಳಲ್ಲಿ ಒಕ್ಕಣೆ ನಿರ್ಮಾಣ ಮಾಡದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಬೇಕಿದೆ.

ರೈತರು ಸಾಮೂಹಿಕ ಒಕ್ಕಣೆ ಕಣ ಉಪಯೋಗಿಸುತ್ತಿಲ್ಲ: ಕೃಷಿ ಇಲಾಖೆಯಿಂದ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ 8ಕ್ಕೂ ಹೆಚ್ಚು ಸಾಮೂಹಿಕ ಒಕ್ಕಣೆ ಕಣಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ರೈತರು ಇದನ್ನು ಉಪಯೋಗಿಸುತ್ತಿಲ್ಲ. ಇದರಿಂದ ಇವುಗಳು ನಿರುಪಯುಕ್ತವಾಗಿದೆ. ರೈತರ ಜಮೀನಿಗಳಲ್ಲಿ ವೈಯುಕ್ತಿಕ ಕಣಗಳ ನಿರ್ಮಾಣ ಮಾಡುವುದಕ್ಕೂ ರೈತರು ಆಸಕ್ತಿ ತೋರಿಸುತ್ತಿಲ್ಲ. ಈ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುವುದು ಎಂದು ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ ಮಾಹಿತಿ ನೀಡಿದರು.

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.