ಹಿರಿಯರನ್ನು ಗೌರವ, ಆದರದಿಂದ ನಡೆಸಿಕೊಳ್ಳಿ; ಎಂ.ಶ್ರೀಧರ

ಸರ್ಕಾರದ ಸೌಲಭ್ಯ, ಹಕ್ಕುಗಳು ಹಾಗೂ ಪರಿಹಾರದ ಬಗ್ಗೆ ಜಾಗೃತಿ ಹೊಂದಬೇಕು.

Team Udayavani, Jun 23, 2022, 6:25 PM IST

ಹಿರಿಯರನ್ನು ಗೌರವ, ಆದರದಿಂದ ನಡೆಸಿಕೊಳ್ಳಿ; ಎಂ.ಶ್ರೀಧರ

ಚಾಮರಾಜನಗರ: ಹಿರಿಯ ನಾಗರಿಕರನ್ನು ವೃದ್ದಾಶ್ರಮಗಳಿಗೆ ದೂಡದೆ ಗೌರವ, ಆದರದಿಂದ ನಡೆಸಿಕೊಳ್ಳುವಂತೆ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿ, ಬುಧವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ, ಗ್ರೀನ್‌ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ
ನಾಗರಿಕರ ನಿಂದನೆ ತಡೆ ಜಾಗೃತಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರನ್ನು ಮಕ್ಕಳಂತೆ ಪಾಲನೆ ಮಾಡಿ: ಸರ್ಕಾರ ಹಿರಿಯ ನಾಗರಿಕರ ಸಂರಕ್ಷಣೆಗಾಗಿ 2007ರಲ್ಲಿ ಕಾಯ್ದೆ ಜಾರಿಗೊಳಿಸಿದ್ದರು ಸಹ ಹಿರಿಯರಲ್ಲಿ ಕಾಯ್ದೆಯ ಅರಿವು ಇರುವುದಿಲ್ಲ. ಹಿರಿಯ ನಾಗರಿಕರಿಗೆ ಶಾಂತಿ, ನೆಮ್ಮದಿ, ಪ್ರೀತಿ, ಗೌರವ ನೀಡಿ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಿಂಸೆ, ದೌರ್ಜನ್ಯ, ಅತಿಕ್ರಮಣ ಮಾಡದೇ ಹಿರಿಯರಿಗೆ ವೃದ್ದಾಪ್ಯದಲ್ಲಿ ಕಾಳಜಿವಹಿಸಬೇಕು. ಅವರನ್ನು ಜಾಗೃತಗೊಳಿಸಬೇಕಾದ ಅಗತ್ಯವಿದೆ. ಹಿರಿಯರು ತಮ್ಮ ಬದುಕಿನ ಅಮೂಲ್ಯ ಸಮಯ, ಹಣವನ್ನು ವ್ಯರ್ಥ ಮಾಡದೇ ಮಕ್ಕಳ ಪಾಲನೆ ಪೋಷಣೆಗೆ ಮೀಸಲಿಟ್ಟಿರುತ್ತಾರೆ. ವೃದ್ಧಾಪ್ಯದಲ್ಲಿ ಹಿರಿಯರನ್ನು ಮಕ್ಕಳಂತೆ ಪಾಲನೆ ಪೋಷಣೆ
ಮಾಡುವುದು ಪ್ರಜ್ಞಾವಂತರಾದ ಎಲ್ಲರ ಹೊಣೆಯಾಗಿದೆ ಎಂದರು.

ವೃದ್ಧಾಶ್ರಮಗಳು ಹೆಚ್ಚಳ: ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಲ್ಲವೂ ವ್ಯವಹಾರಿಕವಾಗಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ವಿದ್ಯಾವಂತರು ಹಿರಿಯ ನಾಗರಿಕರನ್ನು ವೃದ್ಧಾಶ್ರಮಗಳಿಗೆ ಸೇರಿಸುತ್ತಿರುವುದು ದುರಂತದ ಸಂಗತಿ. ಇತ್ತೀಚಿನ ದಿನಗಳಲ್ಲಿ ಕುಟುಂಬ ವ್ಯವಸ್ಥೆಯಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸಲಾಗುತ್ತಿದೆ. ಇದರಿಂದಾಗಿಯೇ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮೌಲ್ಯಗಳು ನೈತಿಕತೆಯನ್ನು ಕಳೆದುಕೊಳ್ಳುತ್ತಿದೆ.

ಕುಟುಂಬಕ್ಕಾಗಿ ಇಡೀ ತಮ್ಮ ಜೀವನವನ್ನೇ ಶ್ರಮಿಸಿದ ಹಿರಿಯರಿಗೆ ಆದ್ಯತೆ ನೀಡಬೇಕು. ಹಿರಿಯ ನಾಗರಿಕ ರಿಗೂ ಸಹ ಮೂಲಭೂತ ಹಕ್ಕುಗಳಿವೆ. ಹಿರಿಯರಿಗೆ ದೊರೆಯುವ ಸೌಲಭ್ಯ, ಸವಲತ್ತುಗಳನ್ನು ಅಧಿಕಾರಿ ಗಳು, ಜನಪ್ರತಿನಿಧಿಗಳು ಜವಾಬ್ದಾರಿಯಿಂದ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದು ತಿಳಿಸಿದರು.

ಹಿರಿಯ ನಾಗರಿಕರು ಸರ್ಕಾರದ ಸೌಲಭ್ಯ, ಹಕ್ಕುಗಳು ಹಾಗೂ ಪರಿಹಾರದ ಬಗ್ಗೆ ಜಾಗೃತಿ ಹೊಂದಬೇಕು. ಹಿರಿಯ ನಾಗರಿಕರಿಗಾಗಿ ಪ್ರಾರಂಭವಾಗಿರುವ ಸಹಾಯವಾಣಿ 14567 ಸೌಲಭ್ಯವನ್ನು ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾನೂನು ಪ್ರಾಧಿಕಾರವು ಹಿರಿಯ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಎಂ. ಶ್ರೀಧರ ತಿಳಿಸಿದರು.

ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸುರೇಶ್‌ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ದಾಸ್‌ ಅವರು ಹಿರಿಯ ನಾಗರಿಕರಿಗೆ ಜಾಗೃತಿ ಮೂಡಿಸುವ ಕುರಿತು ಮತ್ತು ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ಪಾರ್ವತಿ, ಗ್ರೀನ್‌ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ, ನಿರ್ದೇಶಕ ಎಂ.ಪಿ. ಪ್ರಭು, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕಿ ಲತಾ, ಎನ್‌.ವೈ.ಕೆ. ಅಧಿಕಾರಿ ಗುರುರಾಜ್‌ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ಹಿರಿಯ ನಾಗರಿಕರ ನಿಂದನೆ ತಡೆ ಕುರಿತು ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಚಾಲನೆ ನೀಡಿದರು.

ಪೋಷಕರನ್ನು ಕಡೆಗಣಿಸಬೇಡಿ: ನಾಗೇಶ್‌
ನಿವೃತ್ತ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ನಾಗೇಶ್‌ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಸಾಕಿ ಸಲಹಿ ಸಮಾಜದಲ್ಲಿ ಅವರಿಗೆ ಉತ್ತಮ ಭವಿಷ್ಯ ಕಲ್ಪಿಸುವ ಹಿರಿಯರ ಶ್ರಮ ಶ್ಲಾಘನೀಯ. ಬೆಳೆದ ಮಕ್ಕಳು ದುಡಿಯುವ ವಯಸ್ಸಿಗೆ ಬಂದ ಕೂಡಲೇ ತಂದೆ ತಾಯಿಯನ್ನು ಕಡೆಗಣಿಸುತ್ತಿರುವುದು ವಿಪರ್ಯಾಸವಾಗಿದೆ. ಸರ್ಕಾರಗಳು ಕೂಡ ಹಿರಿಯ ನಾಗರಿಕರ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಕ್ರಮ ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರಿಕರನ್ನು ಗೌರವ ಆದರದಿಂದ ನಡೆಸಿಕೊಂಡು ಅನುಕಂಪ, ಮಾನವೀಯತೆಯಿಂದ ಸೇವೆ ನೀಡಬೇಕು ಎಂದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.