ಚಾಮರಾಜನಗರ: ಕೋವಿಡ್ 19 ಸೋಂಕಿಗೆ ಒಂದೇ ದಿನ 2 ಸಾವು ; 1 ಸಾವಿನ ಲೆಕ್ಕ ನೀಡಿದ ಜಿಲ್ಲಾಡಳಿತ!


Team Udayavani, Aug 2, 2020, 8:43 PM IST

ಚಾಮರಾಜನಗರ: ಕೋವಿಡ್ 19 ಸೋಂಕಿಗೆ ಒಂದೇ ದಿನ 2 ಸಾವು ; 1 ಸಾವಿನ ಲೆಕ್ಕ ನೀಡಿದ ಜಿಲ್ಲಾಡಳಿತ!

ಇಂದು ಕೋವಿಡ್‌ನಿಂದ ಮೃತಪಟ್ಟ ಕೊಳ್ಳೇಗಾಲದ 58 ವರ್ಷದ ಮಹಿಳೆಯ ಶವ ಸಂಸ್ಕಾರವನ್ನು ಚಾಮರಾಜನಗರದ ಮುಸ್ಲಿಂ ಸ್ಮಶಾನದಲ್ಲಿ PFI ಕಾರ್ಯಕರ್ತರು ನಡೆಸಿದರು. ಈ ಸಾವಿನ ಮಾಹಿತಿಯನ್ನು ಜಿಲ್ಲಾಡಳಿತ ನೀಡಿಲ್ಲ.

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು ಕೋವಿಡ್ 19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.

ಆದರೆ, ಜಿಲ್ಲಾಡಳಿತ ನೀಡಿರುವ ಕೋವಿಡ್ 19 ಪತ್ರಿಕಾ ಪ್ರಕಟಣೆಯಲ್ಲಿ ಓರ್ವರು ಮಾತ್ರ ಮೃತಪಟ್ಟಿದ್ದಾರೆಂದು ಮಾಹಿತಿಯನ್ನು ನೀಡಲಾಗಿದೆ.

ಅಲ್ಲದೇ ಶನಿವಾರ ಯಳಂದೂರಿನಲ್ಲಿ ಪಾಸಿಟಿವ್ ಆಗಿ ಮೃತಪಟ್ಟ ಪ್ರಕರಣದ ಮಾಹಿತಿಯನ್ನೂ ಸಹ ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಿಲ್ಲ.

ಕೊಳ್ಳೇಗಾಲ ಪಟ್ಟಣದ 58 ವರ್ಷದ ಮಹಿಳೆ ಇಂದು ಕೋವಿಡ್‌ 19 ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅಲ್ಲದೇ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ 55 ವರ್ಷದ ಮಹಿಳೆ ಶನಿವಾರ ಕೋವಿಡ್ 19 ಆಸ್ಪತ್ರೆಗೆ ದಾಖಲಾಗಿ ಇಂದು ಮೃತಪಟ್ಟಿದ್ದಾರೆ.

ಜಿಲ್ಲಾಡಳಿತ ಮಾಧ್ಯಮಗಳಿಗೆ ನೀಡುವ ಮಾಹಿತಿಯಲ್ಲಿ ಇಂದಿನ ಸಾವಿನ ಪ್ರಕರಣವನ್ನು 1 ಎಂದು ನಮೂದಿಸಲಾಗಿದೆ. ಅಲ್ಲದೇ ಷರಾದಲ್ಲಿ ನೀಡುವ ವಿವರಣೆಯಲ್ಲಿ ಗುಂಬಳ್ಳಿ ಮಹಿಳೆಯ ಸಾವಿನ ಬಗ್ಗೆ ಮಾತ್ರ ವಿವರಣೆ ನೀಡಲಾಗಿದೆ. ಆ ಮಹಿಳೆಯ ಶವ ಸಂಸ್ಕಾರವನ್ನು ನಗರದ ಎಡಬೆಟ್ಟದ ತಪ್ಪಲಿನಲ್ಲಿ ಸರ್ಕಾರದ ಕೋವಿಡ್ ಶಿಷ್ಟಾಚಾರದಂತೆ ಬಿಜೆಪಿ ಕಾರ್ಯಕರ್ತರು ನಡೆಸಿದರು.

ಕೊಳ್ಳೇಗಾಲ ಪಟ್ಟಣದ ಮಹಿಳೆಯ ಸಾವಿನ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ ಆ ಮಹಿಳೆಯ ಶವ ಸಂಸ್ಕಾರವನ್ನು ಪಿಎಫ್‌ಐ ಕಾರ್ಯಕರ್ತರು ನಗರದ ಮುಸ್ಲಿಂ ಸ್ಮಶಾನದಲ್ಲಿ ಇಂದು ಬೆಳಿಗ್ಗೆ 11.30ರಲ್ಲಿ ನಡೆಸಿದ್ದಾರೆ.

ಇದಲ್ಲದೇ ಶನಿವಾರ ಯಳಂದೂರಿನಲ್ಲಿ ಸಂಭವಿಸಿದ ಸಾವಿನ ಪ್ರಕರಣವನ್ನೂ ಇಂದು ನಮೂದಿಸಿಲ್ಲ. ಯಳಂದೂರು ಪ್ರಕರಣದಲ್ಲಿ, ಕೋವಿಡ್ 19 ಪಾಸಿಟಿವ್ ಇದ್ದರೂ, ಇನ್ನಿತರ ಕಾಯಿಲೆಗಳ ಕಾರಣದಿಂದ ಮೃತಪಟ್ಟಿದ್ದ 70 ವರ್ಷದ ವ್ಯಕ್ತಿಯ ವಿವರವನ್ನು ಸಹ ಇಂದಿನ ಪ್ರಕಟಣೆಯಲ್ಲಿ ಪ್ರಸ್ತಾಪಿಸಿಲ್ಲ. ಕೋವಿಡೇತರ ಸಾವಿನ ಪ್ರಕರಣ ವಿಭಾಗದಲ್ಲಿಯೂ ಯಳಂದೂರು ಸಾವಿನ ಪ್ರಕರಣವನ್ನು ಸೇರಿಸಿಲ್ಲ.

ಇಂದಿನ ಇಬ್ಬರ ಸಾವಿನ ಪ್ರಕರಣವೂ ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ. ಕೋವಿಡೇತರ ಕಾರಣದಿಂದ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ.

ಜಿಲ್ಲೆಯಲ್ಲಿ ಇಂದು 37 ಮಂದಿಗೆ ಸೋಂಕು: 33 ಮಂದಿ ಗುಣಮುಖ
ಜಿಲ್ಲೆಯಲ್ಲಿ ಇಂದು 37 ಕೋವಿಡ್ 19 ಸೊಂಕು ಪ್ರಕರಣಗಳು ಪತ್ತೆಯಾಗಿವೆ. 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 745 ಕ್ಕೇರಿದ್ದು, 496 ಸೋಂಕಿತರು ಗುಣಮುಖರಾಗಿದ್ದಾರೆ. 239 ಸಕ್ರಿಯ ಪ್ರಕರಣಗಳಿವೆ. ಎಂಟು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 486 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ವರದಿಯಾಗಿರುವ 37 ಪ್ರಕರಣಗಳಲ್ಲಿ ಒಬ್ಬರಿಗೆ ಸೋಂಕು ಇರುವುದು ಮೈಸೂರಿನಲ್ಲಿ ದೃಢಪಟ್ಟಿದೆ. ಚಾಮರಾಜನಗರ ತಾಲೂಕಿನಲ್ಲಿ 15 ಪ್ರಕರಣಗಳು ವರದಿಯಾಗಿವೆ. ಗುಂಡ್ಲುಪೇಟೆ ತಾಲೂಕಿನಲ್ಲಿ 9, ಕೊಳ್ಳೇಗಾಲ ತಾಲೂಕಿನಲ್ಲಿ 8, ಹನೂರು ತಾಲೂಕಿನಲ್ಲಿ 3 ಹಾಗೂ ಯಳಂದೂರು ತಾಲೂಕಿನಲ್ಲಿ 2 ಪ್ರಕರಣಗಳು ವರದಿಯಾಗಿವೆ.

ಗುಣಮುಖರಾಗಿರುವ 33 ಮಂದಿಯಲ್ಲಿ ಚಾಮರಾಜನಗರ 11ಹಾಗೂ ಕೊಳ್ಳೇಗಾಲ ತಾಲೂಕಿನ 11, ಗುಂಡ್ಲುಪೇಟೆ ತಾಲೂಕಿನ 6, ಹನೂರು ತಾಲೂಕಿನ 3, ಯಳಂದೂರು ತಾಲೂಕಿನ 1 ಹಾಗೂ ಹೊರ ಜಿಲ್ಲೆಯ 1 ಪ್ರಕರಣವಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.