ಸದ್ಯದಲ್ಲೇ ನಾಗರಿಕರ ಬಳಕೆಗೆ ಯುಜಿಡಿ


Team Udayavani, Aug 3, 2019, 3:00 AM IST

sadyadale

ಗುಂಡ್ಲುಪೇಟೆ: ಹಲವು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದ ಒಳಚರಂಡಿ ಯೋಜನೆ ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಸಿಗಲಿದೆ. ಪಟ್ಟಣದ ಹೊರವಲಯದ ಹೊಸೂರು ಮತ್ತು ಕಲ್ಯಾಣಿಕೊಳದ ಬಳಿ ನಿರ್ಮಿಸಿರುವ ಮಲೀನ ನೀರು ಶುದ್ಧೀಕರಣ ಘಟಕ ಕಾಮಗಾರಿಯು ಅಂತಿಮಘಟ್ಟಕ್ಕೆ ತಲುಪಿದ್ದು, ಇನ್ನೇನು ಕೆಲವೇ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪಟ್ಟಣದಲ್ಲಿ 2010ರಲ್ಲಿ ಒಳಚರಂಡಿ ಮಂಡಲಿ ವತಿಯಿಂದ ಯುಜಿಡಿ ಕಾಮಗಾರಿ ಪ್ರಾರಂಭಿಸಲಾಗಿತ್ತು. ಕುಂಟುತ್ತಾ ತೆವಳುತ್ತಾ ಸುಮಾರು ಒಂಬತ್ತು ವರ್ಷಗಳ ಕಾಲ ನಡೆದ ಕಾಮಗಾರಿಯಲ್ಲಿ ಪಟ್ಟಣದ 23 ವಾರ್ಡುಗಳ ವ್ಯಾಪ್ತಿಯಲ್ಲಿಯೂ ಯುಜಿಡಿ ಚೇಂಬರ್‌ ಹಾಗೂ ಪೈಪ್‌ ಲೈನ್‌ ಕಾಮಗಾರಿ ಮುಕ್ತಾಯವಾಗಿದೆ.

6.4 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸೂರು ಹಾಗೂ ಕಲ್ಯಾಣಿಕೊಳದ ಸಮೀಪದಲ್ಲಿ 2 ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪನೆ ಕಾರ್ಯ ಪಗ್ರತಿಯಲ್ಲಿದೆ. ಈಗಾಗಲೇ ಹೊಸೂರು ಘಟಕವು ಕಾರ್ಯಾರಂಭ ಮಾಡಿದೆ. ಇದರಿಂದಾಗಿ ಸದ್ಯದಲ್ಲೇ ಯುಜಿಡಿ ನಾಗರಿಕರ ಬಳಕೆಗೆ ದೊರೆಯಲಿದೆ.

ಈಗಾಗಲೇ ಸಿದ್ಧವಿರುವ ಹೊಸೂರು ಮತ್ತು ಪ್ರಗತಿಯಲ್ಲಿರುವ ಕಲ್ಯಾಣಿಕೊಳದ ಸಮೀಪದ ನಿರ್ಮಿಸಿರುವ ಮಲೀನ ನೀರು ಶುದ್ಧೀಕರಣ ಘಟಕವನ್ನು ಹಸ್ತಾತರಿಸಿಕೊಳ್ಳುವಂತೆ ಒಳಚರಂಡಿ ಮಂಡಲಿ ಹೇಳುತ್ತಿದೆ. ಹಲವು ಬಡಾವಣೆಗಳಲ್ಲಿ ಈಗಾಗಲೇ ಸಂಪರ್ಕ ನೀಡಲಾಗಿದೆ. ತಗ್ಗುಪ್ರದೇಶದ ಚೇಂಬರ್‌ಗಳಿಂದ ಮಲೀನ ನೀರು ರಸ್ತೆಗೆ ಹೊರಬರುತ್ತಿದೆ.

ಹೀಗೆ ಹದಗೆಟ್ಟಿರುವ ಒಳಚರಂಡಿ ಪೈಪ್‌ಲೈನ್‌ ಹಾಗೂ ದುರಸ್ತಿಗೊಳಗಾಗಿರುವ ಯುಜಿಡಿ ಚೇಂಬರ್‌ಗಳನ್ನು ಸರಿಪಡಿಸಿಕೊಡುವಂತೆ ಒಳಚರಂಡಿ ಮಂಡಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈಗಾಗಲೇ ಪಟ್ಟಣದ ಮೂಲಸೌಕರ್ಯ ಒದಗಿಸಲು ಶ್ರಮಿಸುತ್ತಿರುವ ಪುರಸಭೆಯು ಹೆಚ್ಚುವರಿ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲು ಮುಂದಾಗಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಕಾರ್ಯನಿರ್ವಹಣೆ ಹೇಗೆ: ಎಲ್ಲಾ ವಾರ್ಡುಗಳಿಂದಲೂ ಘಟಕಕ್ಕೆ ಹರಿದುಬರುವ ನೀರು ನಾಲ್ಕು ಬೃಹತ್‌ ತೊಟ್ಟಿಗಳಲ್ಲಿ ಹಾದುಬರುತ್ತದೆ. ಮೊದಲ ಹಂತದ ಸ್ಕಿÅàನಿಂಗ್‌ ತೊಟ್ಟಿಯಲ್ಲಿ ಪ್ಲಾಸ್ಟಿಕ್‌, ಕಸಕಡ್ಡಿ ಹಾದೂ ಘನತ್ಯಾಜ್ಯವನ್ನು ಬೇರ್ಪಡಿಸಿ ಉಳಿದ ಪ್ರತಿ ತೊಟ್ಟಿಗಳಲ್ಲಿ ಮರಳು ಮಣ್ಣು ಮಿಶ್ರಿತವಾಗಿ ಹರಿಯುವುದರಿಂದ ತ್ಯಾಜ್ಯ ನೀರಿನ ತೀವ್ರತೆಯನ್ನು ದುರ್ಬಲಗೊಳಿಸಿ ನಂತರ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ನಂತರ ಕೃಷಿ ಚಟುವಟಿಕೆಗೆ ಉಪಯೋಗಿಸಲಾಗುವುದು.

ಈಗಾಗಲೇ ಹೊಸೂರು ಬಡಾವಣೆಯ ಘಟಕ ಕಾರ್ಯಾರಂಭ ಮಾಡಿದೆ. ಆದರೆ ಕಲ್ಯಾಣಿಕೊಳದ ಸಮೀಪದಲ್ಲಿರುವ ಘಟಕದ ಕೆಲಸ ಪ್ರಗತಿಯಲ್ಲಿದೆ. ಬೆಳೆಯುತ್ತಿರುವ ಪಟ್ಟಣದ ಜನರಿಗೆ ಅಗತ್ಯ ಸೌಕರ್ಯ ಕಲ್ಪಿಸುವ ಹೊಣೆ ಹೊತ್ತ ಪುರಸಭೆಯು ಈಗಾಗಲೇ ಯುಜಿಡಿ ಬಳಕೆಗೆ ಅವಕಾಶ ಮಾಡಿದೆ. ಆದರೂ ಸಹ ಸಮರ್ಪಕವಾಗಿ ಮಲೀನ ನೀರು ಹರಿದು ಹೋಗುತ್ತಿಲ್ಲ. ಪೈಪ್‌ಲೈನ್‌ಗಳ ದುರಸ್ತಿ ನಡೆಯಬೇಕು ಮತ್ತು ಘಟಕ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ. ಅದಾದ ನಂತರ ಯುಜಿಡಿ ಸೌಲಭ್ಯ ಸಂಪೂರ್ಣವಾಗಿ ಸಿಗಲಿದೆ.
-ಎ.ರಮೇಶ್‌, ಮುಖ್ಯಾಧಿಕಾರಿ, ಪುರಸಭೆ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.