ಶೇ.7 ಮೀಸಲಾತಿ ಸಮಾಜಕ್ಕೆ ದೊಡ್ಡ ಕೊಡುಗೆ


Team Udayavani, Oct 10, 2022, 4:31 PM IST

tdy-11

ಗುಂಡ್ಲುಪೇಟೆ: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ 7ಕ್ಕೆ ಏರಿಕೆ ಮಾಡುವ ಮೂಲಕ ಸಮುದಾಯಕ್ಕೆ ಸರ್ಕಾರ ಬಹುದೊಡ್ಡ ಕೊಡುಗೆ ನೀಡಿದೆ. ಇದರಿಂದ ಭವಿಷ್ಯದಲ್ಲಿ ಸಮುದಾಯದ ಜನರು ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶ ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಮಾಯಣ ದೇಶದ ದೊಡ್ಡ ಪವಿತ್ರ ಗ್ರಂಥವಾಗಿದ್ದು, ಇದರಲ್ಲಿ ಬರುವ ಪಾತ್ರಗಳನ್ನು ವಾಲ್ಮೀಕಿ ಮಹರ್ಷಿ ವಿಭಿನ್ನವಾಗಿ ಚಿತ್ರಿಸಿದ್ದಾರೆ. ಈ ಕಾರಣ ವಾಲ್ಮೀಕಿಯವರನ್ನು ಪ್ರತಿಯೊಬ್ಬರು ಸ್ಮರಣೆ ಮಾಡಬೇಕು ಎಂದರು.

1 ಕೋಟಿ ವಿಶೇಷ ಅನುದಾನ: ಸಮಾಜದಲ್ಲಿ ಒಳ್ಳೆಯವಿಚಾರಗಳಿಗೆ ಕೊನೆ ಇಲ್ಲ ಎಂಬುದಕ್ಕೆ ರಾಮಾಯಣ ಸಾಕ್ಷಿಯಾಗಿದೆ. ಇದೇ ಕಾರಣಕ್ಕೆ ಪ್ರಸ್ತುತದಲ್ಲೂ ಇದ್ದು, ರಾಮ, ಲಕ್ಷ್ಮಣ, ಸೀತೆ ಇತರ ಪಾತ್ರಗಳು ನಮ್ಮ ಕಣ್ಣಿಗೆ ಕಟ್ಟಿದಂತಿವೆ. ದೇಶದ ಐಕ್ಯತೆ ಸಲುವಾಗಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿದೆ. ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ವಾಲ್ಮೀಕಿಯವರ ಹೆಸರಿನಲ್ಲಿ ಭವನಗಳ ನಿರ್ಮಾಣ ಆಗುತ್ತಿವೆ. ಪ್ರಶಸ್ತಿ ಕೊಡಲಾಗುತ್ತಿದೆ. ಜಯಂತಿ ದಿನ ರಜೆ ಘೋಷಣೆ ಆಗಿದೆ. ಪಟ್ಟಣದ ವಾಲ್ಮೀಕಿ ಭವನ ಪೂರ್ಣಗೊಳಿಸಲು 1 ಕೋಟಿ ವಿಶೇಷ ಅನುದಾನ ಕೊಡಿಸುವ ಭರವಸೆ ನೀಡಿದರು.

ಬಿಜೆಪಿ ಸರ್ಕಾರ ಕೊಡುಗೆ: ಪುರಸಭೆ ಅಧ್ಯಕ್ಷ ಪಿ.ಗಿರೀಶ್‌ ಮಾತನಾಡಿ, ಸತತ 35-40 ವರ್ಷದಿಂದ ಮೀಸಲಾತಿ ಹೆಚ್ಚಳಕ್ಕೆ ನಾಯಕ ಸಮುದಾಯ ನಿರಂತವಾಗಿ ಹೋರಾಟ ಮಾಡುತ್ತಲೆ ಬಂದಿದೆ. ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ 246 ದಿನದ ವನವಾಸ ಮಾಡಿದ ಹಿನ್ನಲೆ ಎಸ್ಸಿ, ಎಸ್ಟಿ ಸಮಾಜದ ಮೀಸಲಾತಿ ಹೆಚ್ಚಳದ ಹೋರಾಟದಲ್ಲಿ ಸಫ‌ಲತೆ ಸಿಕ್ಕಿದೆ. 2010ರಂದು ಶ್ರೀರಾಮುಲು ಅವರ ನಿರಂತರ ಒತ್ತಡ ಪರಿಶ್ರಮದ ಮೇಲೆ ಅಂದು ಬಿ.ಎ.ಯಡಿಯೂರಪ್ಪ ವಾಲ್ಮೀಕಿ ಜಯಂತಿ ಸರ್ಕಾರಿ ರಜೆ ಘೋಷಣೆ ಮಾಡಿದರು. ಜೊತೆಗೆ ಬಿಜೆಪಿ ಸರ್ಕಾರ ಪರಿವಾರ- ತಳವಾರ ವನ್ನು ಎಸ್ಟಿಗೆ ಸೇರಿಸುವ ಮೂಲಕ ಕೊಡುಗೆ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಎಸ್‌ಎಸ್‌ ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಮುಖ್ಯ ಭಾಷಣಕಾರ ಚಂದ್ರಶೇಖರ್‌, ಅತ್ಯುತ್ತಮ ಶಿಕ್ಷಕ ಸಿದ್ದರಾಜು ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎನ್‌.ಮಲ್ಲೇಶ್‌, ಕಸಾಪ ಜಿಲ್ಲಾಧ್ಯಕ್ಷ ಎಂ.ಶೈಲಕುಮಾರ್‌, ಪುರಸಭೆ ಸದಸ್ಯ ಎನ್‌.ಕುಮಾರ್‌, ಮುಖ್ಯ ಭಾಷಣಕಾರ ಚಂದ್ರಶೇಖರ್‌ ಮಾತನಾಡಿದರು. ತಹಶೀಲ್ದಾರ್‌ ಸಿ.ಜಿ.ರವಿಶಂಕರ್‌, ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಎಚ್‌. ಎಂ.ಮಹೇಶ್‌, ಸದಸ್ಯರಾದ ಎನ್‌.ಕುಮಾರ್‌, ಅಣ್ಣಯ್ಯಸ್ವಾಮಿ, ಕುಮಾರ್‌, ಶಶಿಧರ್‌ ಪಿ.ದೀಪು, ನಾಗೇಶ್‌, ವೀಣಾ ಮಂಜುನಾಥ, ಕಿರಣ್‌, ಶ್ರೀನಿವಾಸ ನಾಯಕ(ಕಣ್ಣಪ್ಪ), ಸಿದ್ದಯ್ಯ, ಹನುಮಂತಶೆಟ್ಟಿ, ತಾಪಂ ಇಒ ಜಿ.ಶ್ರೀಕಂಠರಾಜೇ ಅರಸ್‌, ಬಿಇಒಎಸ್‌.ಸಿ.ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಪುರಸಭೆ ಸಿಒ ಆರ್‌. ಹೇಮಂತರಾಜು, ಎಸ್ಸಿ ಎಸ್ಟಿ ಹಿತರಕ್ಷಣಾ ಸಮಿತಿ ಬಸವರಾಜು, ಚಿಕ್ಕಾಟಿ ಶಿವಣ್ಣನಾಯಕ, ಗುಂಡ್ಲುಪೇಟೆ ರಾಮು, ಮಾಧು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.