ವಾಲ್ಮೀಕಿ ರಾಮಾಯಣ ವೈಶಿಷ್ಟ್ಯಗಳ ಆಗರ: ಮಾಲಿನಿ


Team Udayavani, Oct 20, 2019, 3:00 AM IST

valmiki-ram

ಗುಂಡ್ಲುಪೇಟೆ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಎಂಬುದು ಹಲವಾರು ವೈಶಿಷ್ಟ್ಯಗಳ ಆಗರ ಎಂದು ಮೈಸೂರು ವಿವಿ ಪ್ರಾಧ್ಯಾಪಕಿ ಡಾ.ಸುತ್ತೂರು ಎಸ್‌.ಮಾಲಿನಿ ಹೇಳಿದರು.

ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣ ಐದು ಸಾವಿರ ವರ್ಷಗಳಾದರೂ ಅದು ತನ್ನ ಮಹತ್ವ ಉಳಿಸಿಕೊಂಡಿದೆ. ವಿಶ್ವದಲ್ಲಿಯೇ ಅತಿ ಹೆಚ್ಚಿನ ಭಾಷೆಗಳಲ್ಲಿ ಭಾಷಾಂತರವಾಗಿ ಸಂಶೋಧನೆಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ಆದರ್ಶಗಳೇ ಕೊಡುಗೆ: ವಾಲ್ಮೀಕಿ ಕೇವಲ ಸಾಹಿತಿಯಲ್ಲ, ಪುಷ್ಪಕ ವಿಮಾನ, ಕ್ಷಿಪಣಿ ಮುಂತಾದ ತಾಂತ್ರಿಕ ಹಾಗೂ ವಿಜ್ಞಾನದ ಆವಿಷ್ಕಾರಗಳ ಮೂಲ ಜ್ಞಾನಿ, ತತ್ವಜ್ಞಾನಿ, ರಾಮರಾಜ್ಯ, ಮರ್ಯಾದಾ ಪುರುಷೋತ್ತಮ, ಏಕಪತ್ನಿ ವತ್ರಸ್ಥ ಮುಂತಾದ ಆದರ್ಶ ಕಲ್ಪನೆಗಳನ್ನು ಕೊಡುಗೆಯಾಗಿ ನೀಡಿದ ಮೇಧಾವಿ ಎಂದರು.

ಸಮುದಾಯಕ್ಕೆ ಸೀಮಿತರಲ್ಲ: ವಾಲ್ಮೀಕಿ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಪ್ರತಿ ದಿನವೂ ಅವರ ಸಿದ್ದಾಂತ ಪಾಲಿಸಿದರೆ ಮಾತ್ರ ಮುಂದುವರಿಯಲು ಸಾಧ್ಯವಾಗಲಿದೆ. ಎಲ್ಲಾ ಸರ್ಕಾರಗಳೂ ರಾಮರಾಜ್ಯ ಪರಿಕಲ್ಪನೆಯಲ್ಲಿಯೇ ಕಾರ್ಯನಿರ್ವಸುತ್ತಿವೆ.

ಆದ್ದರಿಂದ ವಾಲ್ಮೀಕಿ ನಾಯಕ ಸಮುದಾಯವು ತಮ್ಮ ಮಕ್ಕಳಿಗೆ ಸಂಪೂರ್ಣ ಶಿಕ್ಷಣ ಕೊಡುವ ಮೂಲಕ ಮುಂದೆ ಬರಬೇಕೆಂದು ಮನವಿ ಮಾಡಿದರು. ಸಂಸದ ಶ್ರೀನಿವಾಸಪ್ರಸಾದ್‌ ಮಾತನಾಡಿ, ನಾಯಕ ಸಮುದಾಯಕ್ಕೆ ಹೆಚ್ಚಿನ ಮೀಸಲಾತಿ ಕಲ್ಪಿಸಲು ತಾವು ಹಿಂದಿನಿಂದಲೂ ನೆರವಾಗಿದ್ದೇನೆ. ಮುಂಬರುವ ದಿನಗಳಲ್ಲಿ ಈ ಸಮುದಾಯದ ಬೇಡಿಕೆ ಈಡೇರಲಿದೆ ಎಂದರು.

ಮಹತ್ವ ಪಡೆದಿದೆ: ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ ಮಾತನಾಡಿ, ವಾಲ್ಮೀಕಿ ರಾಮಾಯಣ ಮಹಾಗ್ರಂಥ ರಚಿಸದಿದ್ದರೆ ಭಾರತಕ್ಕೆ ಆತ್ಮವೇ ಇಲ್ಲದಂತಾಗುತ್ತಿತ್ತು. ಇಂದು ಅವರು ಜೀವಿಸಿದ್ದರೆ ನೊಬೆಲ್‌ ಪ್ರಶಸ್ತಿ ಪಡೆದುಕೊಳ್ಳುತ್ತಿದ್ದರು. ಐದು ಸಾವಿರ ವರ್ಷ ಕಳೆದರೂ ರಾಮಾಯಣ ತನ್ನದೇ ಆದ ಮಹತ್ವ ಪಡೆದಿದೆ ಎಂದರು.

ಅಭಿವೃದ್ಧಿ ಕಾರ್ಯ: ಶಾಸಕ ನಿರಂಜನಕುಮಾರ್‌ ಮಾತನಾಡಿ, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಎಸ್‌ಸಿ, ಎಸ್‌ಟಿ ಬಡಾವಣೆಗಳಿಗೆ ಚರಂಡಿ, ಕಾಂಕ್ರೀಟ್‌ ರಸ್ತೆ ಕಾಮಗಾರಿಗಳನ್ನು ನಡೆಸುತ್ತಿದ್ದು ಎಲ್ಲಾ ಸಮುದಾಯದ ಹಿತಕಾಪಾಡಲು ಸಿದ್ಧನಿದ್ದೇನೆಂದರು.

ಜಿಪಂ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌, ಸದಸ್ಯ ಬೊಮ್ಮಯ್ಯ, ಚನ್ನಪ್ಪ, ಪುರಸಭೆ ಸದಸ್ಯ ಪಿ.ಗಿರೀಶ್‌, ಪುರಸಭೆ ಮಾಜಿ ಅಧ್ಯಕ್ಷ ಎಂ.ಪುಟ್ಟರಂಗನಾಯಕ್‌, ಬಿಜೆಪಿ ಮಂಡಲಾಧ್ಯಕ್ಷ ಎನ್‌.ಮಲ್ಲೇಶ್‌, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಎಸ್‌ಪಿ ಆನಂದಕುಮಾರ್‌, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಜ್ಯೂ.ಶ್ರೀರಾಮುಲು ಸುರೇಶ್‌, ಸುರೇಶ್‌ ನಾಯಕ್‌ ಮತ್ತಿತರರಿದ್ದರು.

ಇದೇ ವೇಳೆ ನಾಯಕ ಸಮುದಾಯದ ಪ್ರತಿಭಾವಂತರಿಗೆ ಗಣ್ಯರು ಸನ್ಮಾನ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿಸಿ ಪಟ್ಟಣ ಪ್ರಮುಖ ಬೀದಿಗಳಲ್ಲಿ ಬ್ಯಾಂಡ್‌, ಮಂಗಳ ವಾದ್ಯ, ಗೊರವರ ಕುಣಿತ, ಕರಗ ಮುಂತಾದ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.