ರಾಜಕಾರಣದಲ್ಲಿ ಮೌಲ್ಯ ಕುಸಿತ: ಕೃಷ್ಣ


Team Udayavani, Aug 11, 2019, 3:00 AM IST

rajakaranadalli

ಚಾಮರಾಜನಗರ: ಇಂದಿನ ರಾಜಕಾರಣದಲ್ಲಿ ಮೌಲ್ಯಗಳು ಹಾಳಾಗಿದ್ದು ಯಾವುದೇ ರಾಜಕಾರಣಿ ತಪ್ಪು ಮಾಡಿದರೆ ಅವರವರ ಜಾತಿಯವರು ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಆರ್‌.ಪೇಟೆ ಕೃಷ್ಣ ವಿಷಾದಿಸಿದರು. ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಬಿ. ರಾಚಯ್ಯ ಪ್ರತಿಷ್ಠಾನದಿಂದ ಶನಿವಾರ ನಡೆದ ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ 97ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಬಿ.ಎಸ್‌.ಯಡಿಯೂರಪ್ಪ ಹೊಸದಾಗಿ ಯೋಜನೆ ಜಾರಿಗೊಳಿಸಿದರೆ, ಯಾರೂ ಮಾಡದೇ ಇರುವುದನ್ನು ಯಡಿಯೂರಪ್ಪ ಮಾಡಿದ್ದಾರೆ ಬಿಡಿ ಎಂದು ಲಿಂಗಾಯತರು ಸಮರ್ಥಿಸಿಕೊಳ್ಳುತ್ತಾರೆ. ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿ ತಪ್ಪು ಮಾಡಿದರೆ ಅದು ಸಣ್ಣ ತಪ್ಪು ಬಿಡಿ ಸ್ವಾಮಿ, ಯಾರೂ ಮಾಡದಿರುವುದನ್ನು ಮಾಡಿದ್ದಾರಾ ಎಂದು ಒಕ್ಕಲಿಗರು ಸಮರ್ಥಿಸಿಕೊಳ್ಳುತ್ತಾರೆ. ಒಟ್ಟಾರೆ ಜಾತಿ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಛಿದ್ರ ಛಿದ್ರ ಮಾಡುತ್ತಿದ್ದಾರೆಂದು ಟೀಕಿಸಿದರು.

ಯಾವುದೇ ಸರ್ಕಾರ ಬಂದರೂ ಭ್ರಷ್ಟಾಚಾರ ತಗ್ಗಿಲ್ಲ. ಕುಮಾರಸ್ವಾಮಿಯೇ ಬರಲಿ, ಯಡಿಯೂರಪ್ಪನವರೇ ಬರಲಿ, ತಾಲೂಕು ಕಚೇರಿ, ಲೋಕೋಪಯೋಗಿ ಇಲಾಖೆ ಮತ್ತಿತರ ಸರ್ಕಾರಿ ಕಚೇರಿಗಳಲ್ಲಿ ಮಾಮೂಲಿ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರಾ. ತಪ್ಪು ಮಾಡಿದವರನ್ನು ಶಿಕ್ಷಿಸದೇ ಇದ್ದ ಮೇಲೆ ಅದೆಂತ ಸರ್ಕಾರ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಸಂದರ್ಭಗಳಲ್ಲಿ ಬಿ.ರಾಚಯ್ಯನವರು ನೆನಪಾಗುತ್ತಾರೆ. ರಾಚಯ್ಯನವರು ಸೌಮ್ಯ ಸ್ವಭಾವದವರಾದರೂ ಹಿಡಿದ ಕೆಲಸ ಸಾಧಿಸಬೇಕೆಂಬ ಹಠವಾದಿಗಳಾಗಿದ್ದರು. ಎಂದಿಗೂ ಸಹ ತಮ್ಮವರನ್ನು ಹತ್ತಿರಕ್ಕೆ ಸೇರಿಸಿಕೊಂಡವರಲ್ಲ. ಇತ್ತೀಚಿನ ರಾಜಕಾರಣಿಗಳಲ್ಲಿ ಎಲ್ಲಾ ವಿಚಾರಗಳಿಗೂ ಶಿಫಾರಸು ಮಾಡುವುದು ರೂಢಿ ಎಂದರು.

ನಾವೆಲ್ಲರೂ ರಾಜಕಾರಣದಲ್ಲಿ ಬಿ.ರಾಚಯ್ಯ ಅವರನ್ನು ನೋಡಿ ಅವರ ಕಾರ್ಯ ವೈಖರಿ ಕಣ್ಣಾರೆ ಕಂಡು ಬೆಳೆದವರು. ತಾನೂ ಯುವಕನಾಗಿದ್ದಾಗ ಶಾಸಕನಾಗಿ, ಸಚಿವನಾಗಿದ್ದೆ. ಆ ವೇಳೆ ರಾಚಯ್ಯ ಅವರು ನಮ್ಮ ಜೊತೆಗೆ ಸಂಪುಟದಲ್ಲಿದ್ದರು. ಎಂದೂ ಅವರು ಇಂತಹ ಕಾರ್ಯವಾಗಬೇಕು ಎಂದು ಶಿಫಾರಸು ಮಾಡಿದವರಲ್ಲ ಎಂದರು.

ಪ್ರಾದೇಶಿಕ ಪಕ್ಷಗಳು ಕುಟುಂಬದ ಪಕ್ಷವಾಗಿವೆ. ಯಾವುದೇ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ರಚನೆಗೊಂಡರೆ ಅದು ಆ ಕುಟುಂಬದ ಪಕ್ಷವಾಗಿ ಬಿಡುತ್ತದೆ. ಕರ್ನಾಟಕದಲ್ಲಿರುವ ದೇವೇಗೌಡರ ಪಕ್ಷದ ಬಗ್ಗೆ ತಾನು ಮಾತನಾಡುತ್ತಿಲ್ಲ. ಇತರೇ ರಾಜ್ಯಗಳಿರುವ ಪ್ರಾದೇಶಿಕ ಪಕ್ಷಗಳ ಕತೆ ನೋಡಿ.

ಹೀಗಾಗಿ ಚುನಾವಣಾ ಆಯೋಗ ಇಂತಹ ಪ್ರಾದೇಶಿಕ ಪಕ್ಷಗಳಿಗೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ಕಾಯ್ದೆ ರೂಪಿಸಬೇಕು. ನಮ್ಮ ದೇಶಕ್ಕೆ ಪ್ರಜಾಪ್ರಭುತ್ವಕ್ಕಿಂತ ಅಧ್ಯಕ್ಷೀಯ ಮಾದರಿ ಚುನಾವಣೆ ಅಗತ್ಯ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಚುನಾವಣೆ ಗಮನಿಸಿದರೆ, ನಾವು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದೇವೆಯೇ ಎಂಬ ಭಯ ಕಾಡುತ್ತಿದೆ. ಇದರ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕು ಎಂದು ತಿಳಿಸಿದರು.

ಅರಣ್ಯ-ಪರಿಸರ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್‌, ರಾಚಯ್ಯನವರು ಮೇರು ವ್ಯಕ್ತಿತ್ವವುಳ್ಳವರು. ಅರಣ್ಯ ಖಾತೆ ನಿರ್ವಹಿಸುತ್ತಿದ್ದರೂ ಇತರೇ ಇಲಾಖೆ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರಿಂದ ಆಗಬೇಕಾಗಿರುವ ಕೆಲಸ ಕಾರ್ಯ ಮಾಡಿಸಿಕೊಳ್ಳುವ ಜಾಣ್ಮೆ ಅವರಿಗಿತ್ತು. ಅವರು ಸಚಿವರಾಗಿದ್ಧಾಗ ಚಾಮರಾಜನಗರಕ್ಕೆ ಎಲ್ಲ ಮಂತ್ರಿಗಳನ್ನು ಪ್ರತಿ 2 ತಿಂಗಳಿಗೊಮ್ಮೆ ಕರೆಸುತ್ತಿದ್ದರು. ಈ ಭಾಗದಲ್ಲಿ ಬಹಳಷ್ಟು ಜನರಿಗೆ ಜಮೀನು ಮನೆ ನೀಡಿ ಅವರನ್ನು ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮವಹಿಸಿದ್ದಾರೆ ಎಂದರು.

ಲೇಖಕ, ರಂಗಕರ್ಮಿ ಕೆ.ವೆಂಕಟರಾಜು, ಬಿ.ರಾಚಯ್ಯ, ಎಂ.ಸಿ.ಬಸಪ್ಪ, ಎಸ್‌.ಪುಟ್ಟಸ್ವಾಮಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ ಜಿಲ್ಲೆಯ ರಾಜಕಾರಣಿಗಳು. ಆದರೆ ಬಸಪ್ಪ ಹಾಗೂ ಪುಟ್ಟಸ್ವಾಮಿ ಅವರನ್ನು ಸ್ಮರಿಸಿಕೊಳ್ಳುವ ಯಾವುದೇ ಕಾರ್ಯಕ್ರಮ ನಡೆಯದಿರುವುದು ವಿಷಾದನೀಯ ಎಂದರು. ಬರಹಗಾರ ಎಸ್‌.ಲಕ್ಷಿನರಸಿಂಹ ಅವರನ್ನು ಸನ್ಮಾನಿಸಲಾಯಿತು. ಕೊಳ್ಳೇಗಾಲದ ಬೌದ್ಧ ವಿಹಾರದ ಜೇತವನದ ಮನೋರಖೀತ ಬಂತೇಜಿ ಸಾನ್ನಿಧ್ಯ ವಹಿಸಿದ್ದರು.

ಮೈಮುಲ್‌ ಮಾಜಿ ಅಧ್ಯಕ್ಷ ಸಿದ್ದಮಲ್ಲಯ್ಯ, ಜಿಪಂ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌, ಬಿ.ರಾಚಯ್ಯ ಪ್ರತಿಷ್ಠಾನದ ಅಧ್ಯಕ್ಷ ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿ, ಜಿಪಂ ಸದಸ್ಯ ಆರ್‌.ಬಾಲರಾಜು, ಮುಖಂಡ ಕೂಡೂÉರು ಹನುಮಂತಶೆಟ್ಟಿ ಇದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.