ಮನೆ ಬಾಗಿಲಿಗೆ ವಿವಿಧ ಪಿಂಚಣಿ ಸೌಲಭ್ಯ


Team Udayavani, Mar 19, 2020, 3:00 AM IST

mane-bagi

ಚಾಮರಾಜನಗರ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿವಿಧ ಪಿಂಚಣಿ ಸೌಲಭ್ಯ ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಮನೆ ಬಾಗಿಲಿಗೆ ಸೇವೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ಸೇವಾ ಮಿತ್ರ ಯೋಜನೆ, ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸುತ್ತಿದೆ.

ಅನುಷ್ಠಾನಗೊಂಡ ಕೆಲ ದಿನಗಳಲ್ಲೇ ನಾಗರಿಕರ ಮನವಿಗೆ ಕೂಡಲೇ ಸ್ಪಂದಿಸುವ ಮುಖೇನ ಅನೇಕರು, ತಮ್ಮ ಸೌಲಭ್ಯವನ್ನು ತ್ವರಿತವಾಗಿ ಪಡೆಯಲು ಸಹಾಯಕವಾಗಿದೆ. ಸೇವಾ ಮಿತ್ರ ಯೋಜನೆಯಡಿ ಸದ್ಯ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ಯೋಜನೆ, ಮನಸ್ವಿನಿ ಯೋಜನೆ ಹಾಗೂ ಮೈತ್ರಿ ಯೋಜನೆಗಳ ಪಿಂಚಣಿಯ ಅರ್ಹ ಫ‌ಲಾನುಭವಿಗಳಿಗೆ ಸೇವೆ ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಹೇಗೆ ಕಾರ್ಯನಿರ್ವಹಿಸುತ್ತಿದೆ?: ಪಿಂಚಣಿ ಸೌಲಭ್ಯಕ್ಕಾಗಿ ಆಯಾ ತಾಲೂಕಿನ ಕಂಟ್ರೋಲ್‌ ರೂಂಗೆ ಬಂದ ಮನವಿಗಳನ್ನು ಕೂಡಲೇ ಸ್ವೀಕರಿಸಿ, ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು (ಸೇವಾ ಮಿತ್ರ) ಫ‌ಲಾನುಭವಿಗಳ ಮನೆಗೆ ತೆರಳಿ ಅಗತ್ಯ ದಾಖಲಾತಿಗಳನ್ನು ಪಡೆಯುತ್ತಿದ್ದಾರೆ. ನಂತರ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ಕಚೇರಿಯಲ್ಲಿ ಪರಿಶೀಲಿಸಿ, ಅರ್ಹರಿಗೆ ಪಿಂಚಣಿ ಮಂಜೂರು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಮನೆಗೆ ಭೇಟಿ ನೀಡಿ ಮಂಜೂರಾತಿ ಆದೇಶ ಪತ್ರವನ್ನೂ ನೀಡಲಾಗುತ್ತಿದೆ.

ಅದರಂತೆ ಈವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕಂಟ್ರೋಲ್‌ ರೂಂಗಳಿಂದ ಒಟ್ಟು 370 ಕರೆಗಳು ಸ್ವೀಕೃತವಾಗಿದೆ. ಸೇವಾ ಮಿತ್ರ ಜಾರಿಗೆ ಬಂದ 15 ದಿನಗಳಲ್ಲಿ 63 ಅರ್ಹ ಫ‌ಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡಿ, ಮಂಜೂರಾತಿ ಪತ್ರವನ್ನೂ ಸಹ ನೀಡಲಾಗಿದೆ. ಉಳಿದ ಪ್ರಕರಣಗಳು ಕಾರ್ಯರೂಪದ ಹಂತದಲ್ಲಿದ್ದು, ಶೀಘ್ರವಾಗಿ ಸೇವೆ ದೊರೆಯುವಂತೆ ಮಾಡುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.

ಕರೆ ಮಾಡಿ, ಸೇವೆ ಪಡೆಯಿರಿ: ಸೇವಾ ಮಿತ್ರಕ್ಕಾಗಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ದಿನಗಳ ಕಚೇರಿ ಸಮಯದಲ್ಲಿ ಅಂದರೆ ಬೆಳಗ್ಗೆ 10ರಿಂದ ಸಂಜೆ 5.30 ಗಂಟೆಯವರೆಗೆ ಆಯಾ ತಾಲೂಕು ಕಂಟ್ರೋಲ್‌ ರೂಂಗೆ ಕರೆ ಮಾಡಿ ಮನವಿ ಸಲ್ಲಿಸಬಹುದು. ಚಾಮರಾಜನಗರ- ದೂ.ಸಂ: 08226-222046, ಕೊಳ್ಳೇಗಾಲ- ದೂ.ಸಂ: 08224-252042, ಗುಂಡ್ಲುಪೇಟೆ- ದೂ.ಸಂ:08229-222225, ಯಳಂದೂರು- ದೂ.ಸಂ: 08226-240029 ಹಾಗೂ ಹನೂರು- ದೂ.ಸಂ: 08224-268032 ಅನ್ನು ಸಂಪರ್ಕಿಸಿ ಸೌಲಭ್ಯ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿ ಸೇವಾ ಮಿತ್ರ ಯೋಜನೆಯಡಿ ಈಗಾಗಲೇ ಸಾಕಷ್ಟು ಮನವಿ ಸಲ್ಲಿಕೆಯಾಗಿದ್ದು, ಆ ಎಲ್ಲಾ ಮನವಿಗಳಿಗೆ ಕೂಡಲೇ ಸ್ಪಂದಿಸಿ, ಮನೆ ಬಾಗಿಲಿಗೆ ಸೇವೆ ಒದಗಿಸಲಾಗುತ್ತಿದೆ. ಯೋಜನೆ ಜಾರಿಗೆ ಬಂದ 15 ದಿನಗಳಲ್ಲೇ ಅನೇಕ ಮಂದಿ ಪ್ರಯೋಜನ ಪಡೆದಿದ್ದಾರೆ.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.