ಕಲುಷಿತ ನೀರನ್ನೇ ಕುಡಿಯುತ್ತಿರುವ ಗ್ರಾಮಸ್ಥರು

ಹೊನ್ನೂರು ಗ್ರಾಮದಲ್ಲಿ ಪೈಪ್‌ ಒಡೆದು ನಾಲ್ಕೈದು ತಿಂಗಳಾದರೂ ಕ್ರಮ ಇಲ್ಲ

Team Udayavani, Jan 3, 2021, 1:40 PM IST

ಕಲುಷಿತ ನೀರನ್ನೇ ಕುಡಿಯುತ್ತಿರುವ ಗ್ರಾಮಸ್ಥರು

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಓವರ್‌ಹೆಡ್‌ ಹಾಗೂ ಮಿನಿ ವಾಟರ್‌ ಟ್ಯಾಂಕಿಗೆ ಸಂಪರ್ಕ ಕಲ್ಪಿಸುವ ಪೈಪ್‌ ಒಡೆದು,ಕಲುಷಿತ ನೀರು ನಲ್ಲಿಗಳಿಗೆ ಪೂರೈಕೆಯಾಗುತ್ತಿದೆ.ಈ ನೀರನ್ನೇ ಗ್ರಾಮದ ಜನರು ಕುಡಿಯುವ ಪರಿಸ್ಥಿತಿ ಇದೆ.

ಗ್ರಾಮದ ಭೀಮ್‌ರಾವ್‌ ರಾಮ್‌ಜಿ ಪ್ರೌಢಶಾಲೆ ಮುಂಭಾಗದಲ್ಲಿ ಪೈಪ್‌ ಒಡೆದು ನಾಲ್ಕೈದುತಿಂಗಳಾಗಿವೆ. ಆದರೂ ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳು ಹಾಗೂಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೊಳವೆ ಬಾವಿಯಿಂದ ಓವರ್‌ಹೆಡ್‌ ಹಾಗೂ ಮಿನಿ ವಾಟರ್‌ ಟ್ಯಾಂಕಿಗೆ ನೀರನ್ನು ಪ್ರತಿದಿನತುಂಬಿಸಲಾಗುತ್ತಿದೆ. ಈ ಭಾಗದಲ್ಲಿಪೈಪ್‌ ಒಡೆದುಹೋಗಿದೆ. ನಿತ್ಯ ಇಲ್ಲಿಂದ ಸಾವಿರಾರು ಲೀ. ನೀರುರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿದೆ. ಅಲ್ಲದಹಲವು ತಿಂಗಳಾಗಿರುವುದರಿಂದ ಇಲ್ಲಿ ದೊಡ್ಡಹಳ್ಳವಾಗಿ ಮಾರ್ಪಟ್ಟಿದೆ. ಇದರೊಳಗೆ ನೀರುಶೇಖರಣೆಯಾಗುತ್ತದೆ. ಜಾನುವಾರುಗಳು ಕೂಡ ಈ ನೀರನ್ನೇ ಕುಡಿಯುತ್ತವೆ. ರಾತ್ರಿ ವೇಳೆ ಬಹಿರ್ದೆಸೆಗೆ ಹೋಗುವವರೂ ಈ ನೀರನ್ನೇ ಬಳಸುತ್ತಾರೆ. ಇಲ್ಲಿ ಕಲುಷಿತ ನೀರುಶೇಖರಣೆಗೊಳ್ಳುತ್ತದೆ. ನೀರು ನಿಲ್ಲಿಸಿದಸಂದರ್ಭದಲ್ಲಿ ಈ ಕಲುಷಿತಗೊಂಡಿರುವ ನೀರೆಒಡೆದ ಪೈಪ್‌ಗ್ಳಿಂದ ವಾಪಸ್ಸಾಗಿ ನಲ್ಲಿಗಳಲ್ಲಿ ಬರುತ್ತದೆ. ಈ ನೀರನ್ನೇ ಜನರು ಕುಡಿಯಲುಬಳಸುತ್ತಿದ್ದಾರೆ. ಇದರಿಂದ ಗ್ರಾಮದಲ್ಲಸಾಂಕ್ರಾಮಿಕ ರೋಗಗಳು ಹರಡುವ ಅಪಾಯ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ನಿರ್ಲಕ್ಷ್ಯ:ಈ ಅವ್ಯವಸ್ಥೆ ಬಗ್ಗೆ ಖುದ್ದು ಗ್ರಾಮ ಪಂಚಾಯಿತಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಅವರು ಗಮನ ಹರಿಸಿಲ್ಲ.ಕೋವಿಡ್‌ ನ‌ಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಕ್ರಾಮಿಕ ರೋಗಗಳು ನೀರಿನಿಂದ ಬಂದರೆ ಇದಕ್ಕೆ ಸಂಪೂರ್ಣ ಗ್ರಾಮ ಪಂಚಾಯಿತಿಯೇಜವಾಬ್ದಾರಿಯಾಗುತ್ತದೆ. ಈಗಲಾದರೂ ಸಂಬಂಧಪಟ್ಟವರು ಪೈಪ್‌ ಬದಲಿಸಿ ನೀರು ಸೋರಿಕೆಯಾಗುವುದನ್ನು ತಡೆಗಟ್ಟಿಲಿ. ಇಲ್ಲವಾದಲ್ಲಿ ಪಂಚಾಯಿತಿ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಎಚ್ಚರಿಕೆ ನೀಡಿದ್ದಾರೆ.

ಹೊನ್ನೂರು ಗ್ರಾಮದಲ್ಲಿ ಪೈಪ್‌ ಒಡೆದು ಹೋಗಿದ್ದು, ಈಗಾಗಲೇ ಇದರ ದುರಸ್ತಿಗೆ ಕ್ರಮ ವಹಿಸಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರದೊರಕಲಿದೆ. ಸುನೀತಾ, ಗ್ರಾಪಂ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.