ಬಿಗಿ ಭದ್ರತೆಯ ಸ್ಟ್ರಾಂಗ್‌ ರೂಂನಲ್ಲಿ ಮತಯಂತ್ರಗಳು


Team Udayavani, Apr 20, 2019, 3:00 AM IST

bigi-badr

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ, ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ದಾಖಲಾಗಿದೆ.

ವಿದ್ಯುನ್ಮಾನ ಮತಯಂತ್ರಗಳನ್ನು ನಗರದ ಸಮೀಪವಿರುವ ಬೇಡರಪುರದ‌ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ.

ಎರಡು ಲಾಕ್‌ ಸಿಸ್ಟಂನಲ್ಲಿ ಸೀಲ್‌: ಗುರುವಾರ ಮತದಾನ ಮುಕ್ತಾಯವಾದ ನಂತರ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಡೀಮಸ್ಟರಿಂಗ್‌ ಕಾರ್ಯ ನಡೆಸಲಾಯಿತು. ಮತದಾನವಾದ ವಿದ್ಯುನ್ಮಾನ ಮತಯಂತ್ರಗಳನ್ನು ( ಬ್ಯಾಲೆಟ್‌ ಯೂನಿಟ್‌, ಕಂಟ್ರೋಲ್‌ ಯೂನಿಟ್‌ ಮತ್ತು ವಿವಿಪ್ಯಾಟ್‌)

ಜಿಪಿಎಸ್‌ ಅಳವಡಿಸಲಾಗಿರುವ ಕಂಟೈನರ್‌ ವಾಹನದ ಮೂಲಕ ಸೂಕ್ತ ಪೊಲೀಸ್‌ ಭದ್ರತೆಯೊಡನೆ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ತರಲಾಯಿತು. ಬಳಿಕ ವಿಧಾನಸಭಾ ಕ್ಷೇತ್ರವಾರು ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಪ್ರತ್ಯೇಕವಾಗಿ ಎರಡು ಲಾಕ್‌ ಸಿಸ್ಟಂನಲ್ಲಿ ಸೀಲ್‌ ಮಾಡಿ, ಸುರಕ್ಷಿತವಾಗಿ ಇಡಲಾಗಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಒಟ್ಟು 2005 ಮತಗಟ್ಟೆಗಳಿವೆ. ಒಟ್ಟು ಮತದಾನವಾದ 2018 ಬ್ಯಾಲೆಟ್‌ ಯೂನಿಟ್‌, 2018 ಕಂಟ್ರೋಲ್‌ ಯೂನಿಟ್‌ ಮತ್ತು 2070 ವಿವಿಪ್ಯಾಟ್‌ಗಳನ್ನು ಇಡಲಾಗಿದೆ.

103 ಅಧಿಕಾರಿಗಳ ನಿಯೋಜನೆ: ವಿದ್ಯುನ್ಮಾನ ಮತಯಂತ್ರಗಳನ್ನು ಇಡಲಾಗಿರುವ ಭದ್ರತಾ ಕೊಠಡಿಗೆ 3 ಬಗೆಯ ಬಿಗಿ ಭದ್ರತೆ ಒದಗಿಸಲಾಗಿದೆ. ಸೆಂಟ್ರಲ್‌ ಆಮ್ಡ್ì ಪೊಲೀಸ್‌ ಫೋರ್ಸ್‌(ಸಿಎಪಿಎಫ್), ಸ್ಟೇಟ್‌ ಆಮ್ಡ್ì ಪೊಲೀಸ್‌ ಮತ್ತು ಜಿಲ್ಲಾ ಪೊಲೀಸ್‌ ಸೇರಿದಂತೆ ಸುಮಾರು 200 ರಕ್ಷಣಾ ಸಿಬ್ಬಂದಿ ವರ್ಗದವರಿಂದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಎಲ್ಲಾ ಭದ್ರತಾ ಕೊಠಡಿಗಳ ಹೊರಭಾಗದಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಭದ್ರತಾ ಕೊಠಡಿ ಸುರಕ್ಷತಾ ವ್ಯವಸ್ಥೆಯನ್ನು ವೀಕ್ಷಿಸಲು ಮತ ಎಣಿಕೆ ದಿನವಾದ ಮೇ 23 ರವರೆಗೆ ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲು ಮೂರು ಪಾಳಿಯಲ್ಲಿ 103 ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಸುತ್ತಲೂ ಸಿ.ಸಿ.ಕ್ಯಾಮೆರಾ: ಭದ್ರತಾ ಕೊಠಡಿಗೆ ಭದ್ರತೆ ಒದಗಿಸಿರುವುದನ್ನು ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗುತ್ತಿರುವುದನ್ನು ಹತ್ತಿರದಿಂದ ನೋಡಲು ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅವರ ಪ್ರತಿನಿಧಿಗಳನ್ನು ನೇಮಕ ಮಾಡಲು ತಿಳಿಸಲಾಗಿದೆ. ಅಭ್ಯರ್ಥಿಯು ನೇಮಕ ಮಾಡುವ ಪ್ರತಿನಿಧಿಗೆ ಭದ್ರತಾ ಕೊಠಡಿ ಹೊರಭಾಗದಲ್ಲಿ ಮಳೆಯಿಂದ ರಕ್ಷಿತವಾಗುವಂತೆ ಟೆಂಟ್‌ ಸ್ಥಾಪಿಸಿಕೊಡಲಾಗುತ್ತದೆ. ಟೆಂಟ್‌ ಒಳಭಾಗದಲ್ಲಿ ಅಳವಡಿಸಲಾಗಿರುವ ಟಿ.ವಿ. ಪರದೆಯಲ್ಲಿ ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗುವ ಭದ್ರತಾ ಕೊಠಡಿಯ ಪ್ರವೇಶದ್ವಾರದ ಬಾಗಿಲನ್ನು ವೀಕ್ಷಿಸಬಹುದಾಗಿದೆ.

ಮೇ 23ಕ್ಕೆ ಮತ ಏಣಿಕೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಪ್ರಾರಂಭಿಸಲಾಗುತ್ತದೆ. ಅಲ್ಲಿಯವರೆಗೂ ಭದ್ರತೆಯನ್ನು ಮುಂದುವರೆಸಲಾಗುತ್ತದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೇಟಿ
ಚಾಮರಾಜನಗರ: ಮತಯಂತ್ರಗಳನ್ನು ಇರಿಸಲಾಗಿರುವ ಬೇಡರಪುರದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಟ್ಟಡಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್‌ ಮೀನಾ ಭೇಟಿ ನೀಡಿ ಪರಿಶೀಲಿಸಿದರು.

ಮತ ಗಟ್ಟೆಗಳಿಂದ ಬಂದ ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಡಿಮಸ್ಟರಿಂಗ್‌ ನಡೆಸಲಾಯಿತು. ಎಂಟು ವಿಧಾನಸಭಾ ಕ್ಷೇತ್ರಗಳಿಂದ ಡಿಮಸ್ಟರಿಂಗ್‌ ನಡೆದು ಮತಯಂತ್ರಗಳು ನಗರದ ಇಂಜಿನಿಯರಿಂಗ್‌ ಕಾಲೇಜು ತಲುಪಿದಾಗ ಶುಕ್ರವಾರ ಬೆಳಗಿನ ಜಾವ 4.30 ಆಗಿತ್ತು.

ಅಲ್ಲಿಂದ ಬಂದ ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ಭದ್ರತಾ ಕೊಠಡಿಗಳಲ್ಲಿ ಇರಿಸಿ, ಬೀಗ ಹಾಕಿ ಸೀಲ್‌ ಮಾಡಿದಾಗ ಶುಕ್ರವಾರ 9 ಗಂಟೆಯಾಯಿತು. ಬಳಿಕ ಸೆಂಟ್ರಲ್‌ ಆಮ್ಡ್ ಪೊಲೀಸ್‌ ಫೋರ್ಸ್‌ ಭದ್ರತೆಗೆ ಒಳಪಡಿಸಲಾಯಿತು. ಈ ಎಲ್ಲ ಪ್ರಕ್ರಿಯೆಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದವು.

ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ವೀಕ್ಷಕರು ಹಾಗೂ ಚುನಾವಣಾಧಿಕಾರಿಗಳ ಸಭೆ ನಡೆಯಿತು. ಸಭೆಯ ನಂತರ ಮತಯಂತ್ರಗಳನ್ನು ಇರಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಟ್ಟಡಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.