ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ


Team Udayavani, Oct 23, 2021, 9:19 AM IST

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಹನೂರು: ಗುಡುಗು ಸಿಡಿಲಿನ ಸಹಿತ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದಿರುವ ಘಟನೆ ತಾಲೂಕಿನ ತೋಮಿಯರ್‍ಪಾಳ್ಯ ಸಮೀಪದ ಲಾಸರ್‍ದೊಡ್ಡಿ ಗ್ರಾಮದಲ್ಲಿ ಜರುಗಿದೆ.

ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಮಿಯರ್‍ಪಾಳ್ಯ ಸಮೀಪದ ಲಾಸರ್‍ದೊಡ್ಡಿ ಗ್ರಾಮದಲ್ಲಿ ಶನಿವಾರ ಮುಂಜಾನೆ ವೇಳೆ ಗುಡಗು ಸಿಡಿಲಿನ ಸಮೇತ ಧಾರಾಕಾರ ಮಳೆಯಾಗಿದೆ. ಈ ವೇಳೆ ಗುಡುಗು ಸಿಡಿಲಿನ ಆರ್ಭಟಕ್ಕೆ ರಾಮಸ್ವಾಮಿ ಕುಪ್ಪಮ್ಮ ದಂಪತಿ ವಾಸವಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಶೀಟುಗಳು, ಮನೆಯ ಒಂದು ಬದಿಯ ಗೋಡೆ, ಮನೆಯ ಗೋಡೆಗೆ ಅಳವಡಿಸಿರುವ ವಿದ್ಯುತ್ ತಂತಿಗಳ ಮಾರ್ಗವರುವ ಕಡೆ ಗೋಡೆಗಳು ಬಿರುಕು ಬಿಟ್ಟಿದೆ. ಅಲ್ಲದೆ ಮನೆಯ ಒಳಗಿದ್ದ ದಿನಬಳಕೆಯ ಬೀರು, ಟಿವಿ, ಫ್ಯಾನ್ ಸೇರಿದಂತೆ ಗೃಹಬಳಕೆ ಉಪಕರಣಗಳಿಗೂ ಹಾನಿಯುಂಟಾಗಿದೆ.

ಇದನ್ನೂ ಓದಿ:ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ: ಈ ದುರ್ಘಟನೆ ನಡೆದಾಗ ರಾಮಸ್ವಾಮಿ ಮತ್ತು ಆಕೆಯ ಪತ್ನಿ ಕುಪ್ಪಮ್ಮ ಮನೆಯಲ್ಲಿಯೇ ಇದ್ದರು. ಕುಪ್ಪಮ್ಮನ ಮನೆಯ ಒಳಗಡೆ ನಿದ್ರೆಗೆ ಜಾರಿದ್ದರೆ, ರಾಮಸ್ವಾಮಿ ಮನೆಯ ಹೊರಗಡೆ ಮಲಗಿದ್ದರು. ಈ ವೇಳೆ ಮನೆಯ ಮೇಲ್ಛಾವಣಿ ಹಾರಿಗೋಗುತ್ತಿರುವ ಸದ್ದಿಗೆ ಎಚ್ಚರಗೊಂಡ ರಾಮಸ್ವಾಮಿ ಕೂಡಲೇ ಮನೆಯ ಒಳಗಡೆ ಹೋಗಿ ಕುಪ್ಪಮ್ಮ ಅವರನ್ನು ಕರೆತಂದಿದ್ದಾರೆ. ಕುಪ್ಪಮ್ಮನನ್ನು ಹೊರ ಕರೆತರುತ್ತಿದ್ದಂತೆ ಒಂದು ಬದಿಯ ಗೋಡೆ ಕುಸಿದಿದ್ದು, ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.

ಸೂಕ್ತ ಪರಿಹಾರಕ್ಕೆ ಆಗ್ರಹ: ಘಟನೆಯಿಂದಾಗಿ ಅಂದಾಜು 3.5 ಲಕ್ಷದಿಂದ 4 ಲಕ್ಷದವರೆಗೆ ನಷ್ಟ ಸಂಭವಿಸಿದೆ. ಮನೆಯ ಗೋಡೆಯು ಅಲ್ಲಲ್ಲಿ ಬಿರುಕು ಬಿಟ್ಟರುವುದರಿಂದ ಮನೆಯನ್ನು ಸಂಪೂರ್ಣ ಕೆಡವಿ ನಿರ್ಮಾಣ ಮಾಡಬೇಕಿದೆ. ಇದಲ್ಲದೆ ಗೃಹ ಬಳಕೆಯ ವಸ್ತುಗಳೂ ಸಂಪೂರ್ಣವಾಗಿ ಹಾಳಾಗಿವೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಪರಿಹಾರ ಕಲ್ಪಿಸಿ ಕೊಡಬೇಕು ಎಂದು ಮನೆಯ ಮಾಲೀಕ ರಾಮಸ್ವಾಮಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.