ಆನೆಮಡುವಿನ ಕೆರೆಗೆ ಹರಿಯಲಿದೆ ನೀರು


Team Udayavani, Dec 21, 2019, 3:00 AM IST

aanemadu

ಚಾಮರಾಜನಗರ: ಜಿಲ್ಲೆಯ ಕೆರೆಗಳಿಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆಯಡಿ ಒಂದೊಂದೇ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇತ್ತೀಚಿಗೆ ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ನೀರು ಹರಿಸಲಾಗಿತ್ತು. ಈಗ ಚಾಮರಾಜನಗರ ತಾಲೂಕಿನ ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಕೆರೆಗೆ ನೀರು ಹರಿಯಲಿದೆ.

ಆನೆಮಡುವಿನ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಶೇ.90ರಷ್ಟು ಕಾಮಗಾರಿ ಮುಗಿದ್ದು, ಕೇವಲ ಶೇ.10ರಷ್ಟು ಕಾಮಗಾರಿ ಬಾಕಿಯಿದೆ. ಈ ಕಾಮಗಾರಿ ಸಹ ಇನ್ನು 15 ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

2 ಕಿ.ಮೀ ಉದ್ದದ ಪೈಪ್‌ಲೈನ್‌ ಅಳವಡಿಕೆ: ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಜಮೀನೊಂದರ ಮೂಲಕ ತಮ್ಮಡಹಳ್ಳಿಯಿಂದ ಹುತ್ತೂರು ಕೆರೆಗೆ ನೀರು ತುಂಬಿಸುವ ಪೈಪ್‌ಲೈನ್‌ ಹಾದು ಹೋಗಿದೆ. ಈ ಜಮೀನಿನ ಪೈಪ್‌ಲೈನ್‌ನಲ್ಲಿರುವ ಫ್ಲೀಡರ್‌ ಪಾಯಿಂಟ್‌ನಿಂದ ಆನೆ ಮಡುವಿನ ಕೆರೆ ತುಂಬಿಸಲು ನೀರಿನ ಸಂಪರ್ಕ ಪಡೆಯಲಾಗಿದೆ.

ಫ್ಲೀಡರ್‌ ಪಾಯಿಂಟ್‌ನಿಂದ ದೇವಲಾಪುರ ರಸ್ತೆ ಮಾರ್ಗವಾಗಿ ತೆರಕಣಾಂಬಿ- ಚಾಮರಾಜನಗರ ಮುಖ್ಯ ರಸ್ತೆ ತನಕ ಒಟ್ಟು 2 ಕಿ.ಮೀ. ಉದ್ದದ ಪೈಪ್‌ಲೈನ್‌ ಅಳವಡಿಸುವುದು. ಮುಖ್ಯರಸ್ತೆ ಬದಿಯಿಂದ 7 ಕಿ.ಮೀ. ಫೀಡರ್‌ (ಮಳೆ ನೀರು) ಕಾಲುವೆಗಳ ಮೂಲಕ ಆನೆಮಡುವಿನ ಕೆರೆಗೆ ಕಬಿನಿ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಕಾಲುವೆಗಳಲ್ಲಿ ಸ್ವಚ್ಛತೆ: ಈಗಾಗಲೇ ಫೀಡರ್‌ ಕಾಲುವೆಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆದಿದೆ. ಫ್ಲೀಡರ್‌ ಪಾಯಿಂಟ್‌ನಿಂದ ತೆರಕಣಾಂಬಿ- ಚಾಮರಾಜನಗರ ಮುಖ್ಯ ರಸ್ತೆ ತನಕ ಒಂದೂವರೆ ಕಿ.ಮೀ. ಉದ್ದದ ಸಿಮೆಂಟ್‌ ಪೈಪ್‌ಲೈನ್‌ ಕಾರ್ಯ ಮುಗಿದಿದೆ. ಇನ್ನು ಅರ್ಧ ಕಿ.ಮೀ. ಉದ್ದದ ಸಿಮೆಂಟ್‌ ಪೈಪ್‌ಲೈನ್‌ ಕಾಮಗಾರಿ ಬಾಕಿಯಿದ್ದು, ಸದ್ಯವೇ ಮುಗಿಯಲಿದೆ.

ಕಾತುರದಿಂದ ಕಾಯುತ್ತಿದ್ದಾರೆ ಜನರು: ಎರಡು ಕಿ.ಮೀ. ಪೈಪ್‌ಲೈನ್‌ ಮೂಲಕ ಹರಿದು ಬರುವ ಕಬಿನಿ ನೀರು ಸುಮಾರು 7 ಕಿ.ಮೀ. ದೂರ ಉಡಿಗಾಲ ಗ್ರಾಮದ ಜಮೀನುಗಳ ಮಧ್ಯದ ಮಳೆ ಕಾಲುವೆಗಳ ನಡುವೆ ಸಾಗಲಿದೆ. ಫೀಡರ್‌ ಕಾಲುವೆಯ ಹಳ್ಳ, ಚೆಕ್‌ಡ್ಯಾಂಗಳನ್ನು ಹಾದು ಕೆರೆಯ ಅಂಗಳ ತುಂಬಿಕೊಳ್ಳಲಿದೆ. ಇದಕ್ಕಾಗಿ ಉಡಿಗಾಲ, ವೀರನಪುರ ಗ್ರಾಮಗಳ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಮೇಲುಸ್ತುವಾರಿಯಲ್ಲಿ 1.20 ಕೋಟಿ ರೂ. ಅಂದಾಜಿನ ಈ ಕಾಮಗಾರಿಯನ್ನು ಏಪ್ರಿಲ್‌ನಲ್ಲಿ ಗುತ್ತಿಗೆದಾರ ಹುಣಸೂರಿನ ಬಸವರಾಜು ಆರಂಭಿಸಿದ್ದರು. ಇದನ್ನು ಮುಗಿಸಲು 9 ತಿಂಗಳು ಕಾಲಾವಕಾಶ ನೀಡಲಾಗಿತ್ತು.

ಮೊದಲ ಹಂತದಲ್ಲಿ ಸೇರಿತ್ತು?: 2009ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಜಿಲ್ಲೆಯ 22 ಕೆರೆ ತುಂಬಿಸುವ ಮೊದಲ ಹಂತದ ಆಲಂಬೂರು ಏತ ಯೋಜನೆ ಮಂಜೂರು ಮಾಡಿದ್ದರು. ಆನೆ ಮಡುವಿನ ಕೆರೆಯೂ ಸೇರಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಸ್‌.ಮಹದೇವಪ್ರಸಾದ್‌ ಶ್ರಮದಿಂದ ಈ ಯೋಜನೆ ಕಾರ್ಯಗತಗೊಂಡು 20 ಕೆರೆಗಳನ್ನು ತುಂಬಿಸಲು ಮಾತ್ರ ಅವಕಾಶವಾಯಿತು. ಆನೆ ಮಡುವಿನ ಕೆರೆ ಕೈಬಿಟ್ಟು ಹೋಯಿತು.

ಇದರಿಂದ ಅಸಮಾಧಾನಗೊಂಡ ಉಡಿಗಾಲ ಗ್ರಾಮಸ್ಥರು, ರೈತಸಂಘದ ಮುಖಂಡರು ಆನೆಮಡುವಿನ ಕೆರೆ ತುಂಬಿಸಬೇಕೆಂದು ಹೋರಾಟ ನಡೆಸಿದರು. ಹಲವು ಕಾರಣಗಳಿಂದ ಸಾಧ್ಯವಾಗಲಿಲ್ಲ. ಹಿಂದಿನ ಕಾಂಗ್ರೆಸ್‌ ಸರ್ಕಾರದಿಂದ ಸಂಸದ ಆರ್‌.ಧ್ರುವನಾರಾಯಣ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು 1.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಲೋಕಸಭಾ ಚುನಾವಣೆಗೂ ಮೊದಲು ಚಾಲನೆ ಕೊಡಿಸಿದ್ದರು.

ಆನೆಮಡುವಿನ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಕೇವಲ ಒಂದುವರೆ ಕಿ.ಮೀ ಪೈಪ್‌ಲೈನ್‌ ಕಾಮಗಾರಿ ಬಾಕಿಯಿದೆ. ಅದು 15 ದಿನಗಳಲ್ಲಿ ಪೂರ್ಣಗೊಂಡು ಕೆರೆಗೆ ಕಬಿನಿ ನೀರು ಹರಿದು ಬರಲಿದೆ.
-ರಾಜಶೇಖರ್‌, ಸಣ್ಣ ನೀರಾವರಿ ಇಲಾಖೆ ಸಹಾಯಕ, ಎಂಜಿನಿಯರ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.