ಹೂಳೆತ್ತುವುದರಿಂದ ನೀರು ಸಂಗ್ರಹ
Team Udayavani, May 15, 2020, 6:03 AM IST
ಕೊಳ್ಳೇಗಾಲ: ತಾಲೂಕಿನ ಸಿದ್ದಯ್ಯನಪುರ ಮತ್ತು ತಿಮ್ಮರಾಜೀಪುರ ಗ್ರಾಮಗಳ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಶಾಸಕ ಮಹೇಶ್ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಲಾಕ್ಡೌನ್ನಲ್ಲಿರುವ ಗ್ರಾಮಸ್ಥರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ. ಸಿದ್ದಯ್ಯನಪುರ ಗ್ರಾ ಪಂ ವ್ಯಾಪ್ತಿಯ ಕೆರೆಯ ಹೂಳೆತ್ತುವ ಕೆಲಸದಲ್ಲಿ 75 ಜನರು, ತಿಮ್ಮರಾಜೀಪುರ ಕೆರೆ ಹೂಳೆತ್ತುವ ಕಾಮಗಾರಿಗೆ 255 ಜನರು ಕೆಲಸ ಮಾಡುತ್ತಿದ್ದು, ಇಂತಹ ಸಂದಿಗ್ಧ ಸಮಯದಲ್ಲಿ ನರೇಗಾದಡಿ ಗ್ರಾಮಸ್ಥರಿಗೆ ಕೆಲಸ ನೀಡಲಾಗುತ್ತಿದೆ ಎಂದು ಹೇಳಿದರು.
ಮಳೆಗಾಲ ಸಮೀಪಿಸುತ್ತಿದ್ದು, ಕೆರೆಗಳ ಹೂಳೆ ತ್ತಿರುವುದರಿಂದ ನೀರು ಶೇಖರಣೆಯಾಗಿ ಅಂತರ್ಜಲ ಹೆಚ್ಚಲಿದೆ. ಕ್ಷೇತ್ರದ ವ್ಯಾಪ್ತಿ ಹೂಳೆತ್ತುವ ಕಾಮಗಾರಿಗಳಿಂದ ಅಭಿವೃದಿ ಕೆಲಸಗಳು ನಡೆ ಯುತ್ತಿವೆ ಎಂದು ಹೇಳಿದರು. ಈ ವೇಳೆ ಸಿದ್ದ ಯ್ಯನಪುರ ಗ್ರಾಪಂ ಅಧ್ಯಕ್ಷೆ ಶಶಿಕುಮಾರಿ, ಉಪಾ ದ್ಯಕ್ಷ ಗುಣಶೇಖರ್, ತಿಮ್ಮರಾಜೀಪುರ ಗ್ರಾಪಂ ಅಧ್ಯಕ್ಷೆ ಅಶ್ವಿನಿ, ತಾಪಂ ಇಒ ಪ್ರಕಾಶ್, ಪಿಡಿಒ ಭಾಗ್ಯಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…