ಗುಂಡ್ಲುಪೇಟೆ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
Team Udayavani, Jul 9, 2022, 5:43 PM IST
ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಅಳವಡಿಕೆ ಮಾಡಿದ್ದ ವಿದ್ಯುತ್ ತಂತಿ ತಗುಲಿ 25 ವರ್ಷದ ಗಂಡಾನೆಯೊಂದು ಮೃತ ಪಟ್ಟಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಮೊಳೆಯೂರು ವಲಯದ ವ್ಯಾಪ್ತಿಯ ಮೊಳೆಯೂರು ಶಾಖೆಯ ಹೀರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಿನಿಂದ ಆಹಾರ ಅರಸಿಬಂದ ಕಾಡಾನೆ ಹೀರೆಹಳ್ಳಿ ಗ್ರಾಮದ ಎಚ್.ವಿ.ನಾಗರಾಜಪ್ಪ, ರಾಜಪ್ಪ ಎಂಬುವವವರು ಬೆಳೆದಿದ್ದ ಮುಸುಕಿನ ಜೋಳದ ಜಮೀನಿನ ಮೇಲೆ ಹಾದು ಹೋಗುವ ಸಮಯದಲ್ಲಿ ಬೆಳೆ ರಕ್ಷಣೆಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಗೆ ಕಾಡಾನೆಗೆ ತಗುಲಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆ ಕುರಿತು ವಿಷಯ ತಿಳಿದ ಹಿನ್ನೆಲೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶಕುಮಾರ್, ಹೆಡಿಯಾಲ ಉಪ-ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಸೆಸ್ಕ್ ಎಇಇ ಕಿರಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಮೀನು ಮಾಲೀಕರ ವಿರುದ್ಧ ಅರಣ್ಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಬಳಿಕ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿ, ಸ್ಥಳದಲ್ಲಿಯೇ ಮೃತ ಆನೆಯ ಕಳೆಬರವನ್ನು ಜೆ.ಸಿ.ಬಿ ಸಹಾಯದಿಂದ ಗುಂಡಿ ತೆಗೆದು ಹೂಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ