ತೆಂಗಿನಕೆರೆ ಹತ್ತಿರ ಬೀಡು ಬಿಟ್ಟ ಕಾಡಾನೆ: ಗ್ರಾಮಸ್ಥರಲ್ಲಿ ಆತಂಕ
Team Udayavani, Jun 25, 2022, 3:03 PM IST
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಮಾರುಕಟ್ಟೆ ಸಮೀಪವಿರುವ ತೆಂಗಿನಕೆರೆ ಹತ್ತಿರ ಒಂಟಿ ಸಲಗವೊಂದು ಶುಕ್ರವಾರ ಕಾಣಿಸಿಕೊಂಡಿದ್ದು, ಇದು ಜನರ ಆತಂಕಕ್ಕೆ ಕಾರಣವಾಗಿದೆ.
ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದಿದ್ದ ಕಾಡಾನೆಯು ಕಳೆದ ಎರಡು ದಿನದಿಂದ ದಾರಿತಪ್ಪಿ ಚಾಮರಾಜ ನಗರದ ಬೂದಿತಿಟ್ಟು ಹಾಗೂ ಯಡಬೆಟ್ಟದ ಬಳಿಯ ಎಣ್ಣೆಹೊಳೆ ಬಳಿ ಕಾಣಿಸಿಕೊಂಡಿತ್ತು. ಕಾಡಾನೆ ಗುರುವಾರ ರಾತ್ರೋರಾತ್ರಿ ಸಂಚರಿಸಿ ತೆರಕಣಾಂಬಿಯ ತೆಂಗಿನಕೆರೆ ಸಮೀಪಕ್ಕೆ ಶುಕ್ರವಾರ ಬಂದು ತಲುಪಿದೆ.
ಪಶ್ಚಿಮದ ಕೆರೆಯಂಗಳದಲ್ಲಿ ನೀರಿನಿಂದ ಆಚೆ ಆನೆ ಬೀಡು ಬಿಟ್ಟಿದ್ದು, ಮೇವು-ನೀರಿನ ಲಭ್ಯತೆ ಜತೆಗೆ ಜನರ ಗಲಾಟೆ ಹಿನ್ನೆಲೆಯಲ್ಲಿ ಸಲಗ ಅಲ್ಲಲ್ಲೇ ಓಡಾಡಿಕೊಂಡಿತ್ತು. ಬಳ್ಳಾರಿ ಜಾಲಿ ನಡುವೆ ಸಣ್ಣ ಕಾಲು ದಾರಿಯಲ್ಲಿ ಕೆರೆಯ ಪಶ್ಚಿಮ ಭಾಗಕ್ಕೆ ಹೋಗಲು ಮಾತ್ರ ಸ್ಥಳವಕಾಶ ಇತ್ತು. ಅಲ್ಲದೇ ಕೆರೆಯ ಸುತ್ತಲೂ ಬೆಳಗಿನಿಂದ ಸಂಜೆ ತನಕ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದ ಕಾರಣ ಆನೆಯನ್ನು ಕಾಡಿಗಟ್ಟುವ ಕಾರ್ಯ ಸಾಧ್ಯವಾಗಲಿಲ್ಲ.
ಕೆರೆಯಲ್ಲಿ ಕಾಡಾನೆ ಇರುವುದನ್ನು ನೋಡಿ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ಜನರು ನೂರಾರು ಸಂಖ್ಯೆಯಲ್ಲಿ ಗುಂಪು ಗೂಡಿದ್ದರು. ಮಾಹಿತಿ ಅರಿತ ಗುಂಡ್ಲುಪೇಟೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್, ಎನ್.ಪಿ.ನವೀನ್ಕುಮಾರ್ ಇತರೆ ಅಧಿಕಾರಿಗಳು, ನೌಕರರು, ವಿಶೇಷ ಹುಲಿ ಸಂರಕ್ಷಣಾ ದಳದ 80ರಷ್ಟು ಮಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಎಪಿಎಂಸಿ ವಹಿವಾಟು ಸ್ಥಳಾಂತರ: ತೆರಕಣಾಂಬಿ ಮಾರುಕಟ್ಟೆ ಸಮೀಪವಿರುವ ತೆಂಗಿನಕೆರೆ ಹತ್ತಿರ ಒಂಟಿ ಸಲಗ ಬೀಟು ಬಿಟ್ಟಿರುವ ಹಿನ್ನೆಲೆ ಹಳೇ ಸಂತೇಮಾಳದಲ್ಲಿ ನಡೆಯುತ್ತಿದ್ದ ತರಕಾರಿ ವಹಿವಾಟನ್ನು ಸ್ಥಳಾಂತರಿಸಿ, ಗ್ರಾಮದ ವೆಂಕಟೇಶ್ವರ ಕಲ್ಯಾಣ ಮಂಟಪ ಮುಂದೆ, ಸಮುದಾಯ ಭವನದ ಬಳಿ ವಹಿವಾಟು ನಡೆಸಲಾಯಿತು.
ವೆಂಕಟರಮಣಸ್ವಾಮಿ ದೇವಾಲಯ ಸಂರಕ್ಷಿತ ಅರಣ್ಯದ ಮೂಲಕ ಹತ್ತಿರವಿರುವ ಕುಂದಕೆರೆ ಅರಣ್ಯ ವಲಯಕ್ಕೆ ಕಾಡಾನೆ ಹೋಗುವಂತೆ ಮಾಡಲು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. – ಡಾ.ಲೋಕೇಶ್, ಆರ್ಎಫ್ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು