ಕಾಮಗಾರಿ ತರಾತುರಿ, ಗುಣಮಟ್ಟದಲ್ಲಿ ಕಿರಿಕಿರಿ


Team Udayavani, Mar 17, 2020, 3:00 AM IST

kamagari

ಯಳಂದೂರು: ಮಾರ್ಚ್‌ ಅಂತ್ಯದಲ್ಲಿ ತಾಲೂಕು ಪಂಚಾಯ್ತಿ ವತಿಯಿಂದ ನಡೆಯುತ್ತಿರುವ ಕಾಮಗಾರಿಯನ್ನು ಬಿಲ್‌ ಮಾಡಿಕೊಳ್ಳುವ ಧಾವಂತದಲ್ಲಿ ತರಾತುರಿಯಲ್ಲಿ ಮಾಡಲಾಗುತ್ತಿದೆ. ಇದರಲ್ಲಿ ಗುಣಮಟ್ಟದ ಮಾನದಂಡಗಳು ಮಾಯವಾಗಿದೆ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿಬರುತ್ತಿವೆ.

114 ಕಾಮಗಾರಿಗೆ ಅನುಮೋದನೆ: ತಾಲೂಕು ಪಂಚಾಯ್ತಿ ವತಿಯಿಂದ 2019-2020ನೇ ಸಾಲಿನ ವಿವಿಧ ಸಂಯುಕ್ತ ಅನುದಾನ, ಟಿಎಸ್‌ಪಿ ಸೇರಿದಂತೆ ಯೋಜನೆಗಳಲ್ಲಿ ಬಿಡುಗಡೆಗೊಂಡಿರುವ 2.36 ಕೋಟಿ ರೂ. ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ರಸ್ತೆ, ಚರಂಡಿ, ಕುಡಿಯುವ ನೀರು, ಅಂಗನವಾಡಿಗಳ ದುರಸ್ತಿ, ಸುಣ್ಣಬಣ್ಣ ಸೇರಿದಂತೆ ಒಟ್ಟು 114 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನವೆಂಬರ್‌ನಲ್ಲಿ ತಾಪಂ ಸಭೆಯಲ್ಲಿ ಅನುಮೋದಿಸಲಾಗಿದೆ.

ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ: ಈಗ ಕಾಮಗಾರಿಗಳು ಆರ್ಥಿಕ ವರ್ಷ ಮುಗಿಯುತ್ತ ಬರುತ್ತಿದ್ದರೂ ವೇಗ ಪಡೆದುಕೊಂಡಿಲ್ಲ. ಇದರಲ್ಲಿ ಬಹುತೇಕ ಕಾಮಗಾರಿಗಳು ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳಲ್ಲಿ ಪ್ರಾರಂಭವಾಗಿ ಈಗ ವೇಗ ಪಡೆದುಕೊಂಡು ತರಾತುರಿಯಲ್ಲಿ ನಡೆಯುತ್ತಿದೆ. ಇನ್ನೂ ಕೆಲವು ಕಾಮಗಾರಿಗಳ ಇನ್ನೂ ಆರಂಭಗೊಂಡಿಲ್ಲ. ನಡೆಯುತ್ತಿರುವ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ನಿಧಾನವಾಗಿ ಆರಂಭಿಸಿ, ಬೇಗ ಮುಗಿಸುವ ಧಾವಂತದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಅಧಿಕಾರಿಗಳು, ಗುತ್ತಿಗೆದಾರರಿಗೂ ನೋಟಿಸ್‌: ತಾಲೂಕು ಪಂಚಾಯ್ತಿಯ ವಿವಿಧ ಯೋಜನೆಗಳ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ನೋಟಿಸ್‌ ನೀಡಿ, ಕಾಮಗಾರಿಯನ್ನು ಅದಷ್ಟು ಬೇಗ ಮುಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದ್ದಾರೆ. ಆದರೂ ಸಂಬಂಧಪಟ್ಟ ಜಿಲ್ಲಾ ಪಂಚಾಯ್ತಿ ಎಇಇ ಹಾಗೂ ಜೆಇಗಳು ಕಾಮಗಾರಿಗಳನ್ನು ಸಂಬಂಧಪಟ್ಟ ಗುತ್ತಿಗೆದಾರರಿಂದ ಕೆಲಸಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ರಜೆಯಲ್ಲೂ ಕೆಲಸ ಮಾಡಲು ಸೂಚನೆ: ತಾಲೂಕಿನ ಕಾಮಗಾರಿಯನ್ನು ಮಾರ್ಚ್‌ ತಿಂಗಳಲ್ಲಿ ಪೂರ್ಣಗೊಳ್ಳಿಸುವ ನಿಟ್ಟಿನಲ್ಲಿ ರಜೆಯಲ್ಲೂ ಸಿಬ್ಬಂದಿಗಳು ಕೆಲಸವನ್ನು ಮಾಡಬೇಕು ಎಂದು ಸೂಚನೆ ನೀಡಲಾಗಿದೆ. 22 ಕಾಮಗಾರಿಗಳು ವಿಳಂಬವಾಗಿದೆ. ಇದರಲ್ಲಿ 10 ಕಾಮಗಾರಿಗಳಿಗೆ ನೋಟಿಸ್‌ ನೀಡಲಾಗಿದೆ. ಈಗ ಕಾಮಗಾರಿಗಳಿಗೆ ಚುರುಕು ಮುಟ್ಟಿದೆ ಎಂದು ಜಿ.ಪಂ ಎಇಇ ಹರೀಶ್‌ ತಿಳಿಸಿದ್ದಾರೆ.

ಗುಣಮಟ್ಟದಲ್ಲಿ ರಾಜಿ ಸಾಧ್ಯವಿಲ್ಲ: ಗುಣಮಟ್ಟದಲ್ಲಿ ಯಾವುದೇ ರಾಜಿಗೆ ಸಾಧ್ಯವಿಲ್ಲ. ಆದಷ್ಟು ಬೇಗ ಕಾಮಗಾರಿ ಮುಗಿಸುವಲ್ಲಿ ಆ ನಿಟ್ಟಿನಲ್ಲಿ ಸ್ಥಳಕ್ಕೆ ಸಂಬಂಧಪಟ್ಟ ಜೆಇಗಳು ಭೇಟಿ ನೀಡಿ ಪರಿಶೀಲಿಸಿ, ಕೆಲಸವನ್ನು ಮಾಡಿಸಲು ಸೂಚನೆ ನೀಡಲಾಗಿದೆ. ಈಗ ಕೆಲಸಗಳೆಲ್ಲಾ ಚುರುಕು ಪಡೆದುಕೊಂಡು ಆದಷ್ಟು ಬೇಗ ಕೆಲಸ ಪೂರ್ಣಗೊಳಿಸಲಾಗುವುದು. ಜಿಪಿಎಸ್‌ ಹಾಗೂ ಕೆ2 ಮೂಲಕವೇ ಕಾಮಗಾರಿ ನಡೆಯಬೇಕಿರುವುದರಿಂದ ಅಲ್ಪ ವಿಳಂಬವಾಗಿದೆ ಎಂದು ಹೇಳಿದ್ದಾರೆ.

ತಾಲೂಕಿನ ನಡೆಯುತ್ತಿರುವ ಕಾಮಗಾರಿಗಳಲ್ಲಿ 44 ಕಾಮಗಾರಿಗಳೂ ಕೈಗೊಂಡಿಲ್ಲ. ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಪಂಚಾಯ್ತಿ ಎಇಇ ಅಧಿಕಾರಿಗಳಿಗೆ ನೋಟಿಸ್‌ ನೀಡಿ, ಅದಷ್ಟು ಬೇಗ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
-ಬಿ.ಎಸ್‌. ರಾಜು, ಕಾರ್ಯನಿರ್ವಾಹಕ ಅಧಿಕಾರಿ, ಯಳಂದೂರು

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.