ಕಾಮಗಾರಿ ತರಾತುರಿ, ಗುಣಮಟ್ಟದಲ್ಲಿ ಕಿರಿಕಿರಿ


Team Udayavani, Mar 17, 2020, 3:00 AM IST

kamagari

ಯಳಂದೂರು: ಮಾರ್ಚ್‌ ಅಂತ್ಯದಲ್ಲಿ ತಾಲೂಕು ಪಂಚಾಯ್ತಿ ವತಿಯಿಂದ ನಡೆಯುತ್ತಿರುವ ಕಾಮಗಾರಿಯನ್ನು ಬಿಲ್‌ ಮಾಡಿಕೊಳ್ಳುವ ಧಾವಂತದಲ್ಲಿ ತರಾತುರಿಯಲ್ಲಿ ಮಾಡಲಾಗುತ್ತಿದೆ. ಇದರಲ್ಲಿ ಗುಣಮಟ್ಟದ ಮಾನದಂಡಗಳು ಮಾಯವಾಗಿದೆ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿಬರುತ್ತಿವೆ.

114 ಕಾಮಗಾರಿಗೆ ಅನುಮೋದನೆ: ತಾಲೂಕು ಪಂಚಾಯ್ತಿ ವತಿಯಿಂದ 2019-2020ನೇ ಸಾಲಿನ ವಿವಿಧ ಸಂಯುಕ್ತ ಅನುದಾನ, ಟಿಎಸ್‌ಪಿ ಸೇರಿದಂತೆ ಯೋಜನೆಗಳಲ್ಲಿ ಬಿಡುಗಡೆಗೊಂಡಿರುವ 2.36 ಕೋಟಿ ರೂ. ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ರಸ್ತೆ, ಚರಂಡಿ, ಕುಡಿಯುವ ನೀರು, ಅಂಗನವಾಡಿಗಳ ದುರಸ್ತಿ, ಸುಣ್ಣಬಣ್ಣ ಸೇರಿದಂತೆ ಒಟ್ಟು 114 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನವೆಂಬರ್‌ನಲ್ಲಿ ತಾಪಂ ಸಭೆಯಲ್ಲಿ ಅನುಮೋದಿಸಲಾಗಿದೆ.

ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ: ಈಗ ಕಾಮಗಾರಿಗಳು ಆರ್ಥಿಕ ವರ್ಷ ಮುಗಿಯುತ್ತ ಬರುತ್ತಿದ್ದರೂ ವೇಗ ಪಡೆದುಕೊಂಡಿಲ್ಲ. ಇದರಲ್ಲಿ ಬಹುತೇಕ ಕಾಮಗಾರಿಗಳು ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳಲ್ಲಿ ಪ್ರಾರಂಭವಾಗಿ ಈಗ ವೇಗ ಪಡೆದುಕೊಂಡು ತರಾತುರಿಯಲ್ಲಿ ನಡೆಯುತ್ತಿದೆ. ಇನ್ನೂ ಕೆಲವು ಕಾಮಗಾರಿಗಳ ಇನ್ನೂ ಆರಂಭಗೊಂಡಿಲ್ಲ. ನಡೆಯುತ್ತಿರುವ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ನಿಧಾನವಾಗಿ ಆರಂಭಿಸಿ, ಬೇಗ ಮುಗಿಸುವ ಧಾವಂತದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಅಧಿಕಾರಿಗಳು, ಗುತ್ತಿಗೆದಾರರಿಗೂ ನೋಟಿಸ್‌: ತಾಲೂಕು ಪಂಚಾಯ್ತಿಯ ವಿವಿಧ ಯೋಜನೆಗಳ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ನೋಟಿಸ್‌ ನೀಡಿ, ಕಾಮಗಾರಿಯನ್ನು ಅದಷ್ಟು ಬೇಗ ಮುಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದ್ದಾರೆ. ಆದರೂ ಸಂಬಂಧಪಟ್ಟ ಜಿಲ್ಲಾ ಪಂಚಾಯ್ತಿ ಎಇಇ ಹಾಗೂ ಜೆಇಗಳು ಕಾಮಗಾರಿಗಳನ್ನು ಸಂಬಂಧಪಟ್ಟ ಗುತ್ತಿಗೆದಾರರಿಂದ ಕೆಲಸಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ರಜೆಯಲ್ಲೂ ಕೆಲಸ ಮಾಡಲು ಸೂಚನೆ: ತಾಲೂಕಿನ ಕಾಮಗಾರಿಯನ್ನು ಮಾರ್ಚ್‌ ತಿಂಗಳಲ್ಲಿ ಪೂರ್ಣಗೊಳ್ಳಿಸುವ ನಿಟ್ಟಿನಲ್ಲಿ ರಜೆಯಲ್ಲೂ ಸಿಬ್ಬಂದಿಗಳು ಕೆಲಸವನ್ನು ಮಾಡಬೇಕು ಎಂದು ಸೂಚನೆ ನೀಡಲಾಗಿದೆ. 22 ಕಾಮಗಾರಿಗಳು ವಿಳಂಬವಾಗಿದೆ. ಇದರಲ್ಲಿ 10 ಕಾಮಗಾರಿಗಳಿಗೆ ನೋಟಿಸ್‌ ನೀಡಲಾಗಿದೆ. ಈಗ ಕಾಮಗಾರಿಗಳಿಗೆ ಚುರುಕು ಮುಟ್ಟಿದೆ ಎಂದು ಜಿ.ಪಂ ಎಇಇ ಹರೀಶ್‌ ತಿಳಿಸಿದ್ದಾರೆ.

ಗುಣಮಟ್ಟದಲ್ಲಿ ರಾಜಿ ಸಾಧ್ಯವಿಲ್ಲ: ಗುಣಮಟ್ಟದಲ್ಲಿ ಯಾವುದೇ ರಾಜಿಗೆ ಸಾಧ್ಯವಿಲ್ಲ. ಆದಷ್ಟು ಬೇಗ ಕಾಮಗಾರಿ ಮುಗಿಸುವಲ್ಲಿ ಆ ನಿಟ್ಟಿನಲ್ಲಿ ಸ್ಥಳಕ್ಕೆ ಸಂಬಂಧಪಟ್ಟ ಜೆಇಗಳು ಭೇಟಿ ನೀಡಿ ಪರಿಶೀಲಿಸಿ, ಕೆಲಸವನ್ನು ಮಾಡಿಸಲು ಸೂಚನೆ ನೀಡಲಾಗಿದೆ. ಈಗ ಕೆಲಸಗಳೆಲ್ಲಾ ಚುರುಕು ಪಡೆದುಕೊಂಡು ಆದಷ್ಟು ಬೇಗ ಕೆಲಸ ಪೂರ್ಣಗೊಳಿಸಲಾಗುವುದು. ಜಿಪಿಎಸ್‌ ಹಾಗೂ ಕೆ2 ಮೂಲಕವೇ ಕಾಮಗಾರಿ ನಡೆಯಬೇಕಿರುವುದರಿಂದ ಅಲ್ಪ ವಿಳಂಬವಾಗಿದೆ ಎಂದು ಹೇಳಿದ್ದಾರೆ.

ತಾಲೂಕಿನ ನಡೆಯುತ್ತಿರುವ ಕಾಮಗಾರಿಗಳಲ್ಲಿ 44 ಕಾಮಗಾರಿಗಳೂ ಕೈಗೊಂಡಿಲ್ಲ. ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಪಂಚಾಯ್ತಿ ಎಇಇ ಅಧಿಕಾರಿಗಳಿಗೆ ನೋಟಿಸ್‌ ನೀಡಿ, ಅದಷ್ಟು ಬೇಗ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
-ಬಿ.ಎಸ್‌. ರಾಜು, ಕಾರ್ಯನಿರ್ವಾಹಕ ಅಧಿಕಾರಿ, ಯಳಂದೂರು

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.