ನೆನೆಗುದಿಗೆ ಬಿದ್ದ ಸರ್ಕಟನ್‌ ನಾಲೆ ಕಾಮಗಾರಿ


Team Udayavani, Apr 22, 2019, 3:00 AM IST

nenegudi

ಕೊಳ್ಳೇಗಾಲ: ಕಾವೇರಿ ಮತ್ತು ಕಬಿನಿ ನೀರಾವರಿ ನಿಗಮಕ್ಕೆ ಸೇರಿದ ನಗರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಸರ್ಕಟನ್‌ ನಾಲೆಯಲ್ಲಿ ಕೊಳಕಿನ ಪದಾರ್ಥಗಳು ಕೊಳೆತು ಗಬ್ಬು ನಾರುತ್ತಿದ್ದು, ನಾಲೆ ಪಕ್ಕದಲ್ಲೇ ಇರುವ ರಸ್ತೆಗಳಲ್ಲಿ ಒಡಾಡುವ ಸಾರ್ವಜನಿಕರು ಮೂಗು ಹಿಡಿದು ತಿರುಗಾಡುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಸರ್ಕಟನ್‌ ನಾಲೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಕಿರಿಕಿರಿಯನ್ನು ತಪ್ಪಿಸಲು ಆರಂಭಿಸಿದ್ದ ಕಾಮಗಾರಿ ಸ್ಥಗಿತಗೊಂಡಿದೆ.

ಕಳೆದ ಬಾರಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿದ್ದ ಶಾಸಕ ಎಸ್‌.ಜಯಣ್ಣ ನಾಲೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ನಿವಾರಣೆ ಮಾಡಲು ಸುಮಾರು 23 ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದರು. ಸುಮಾರು ಕಾಮಗಾರಿಗಳಿಗೆ ಹಣ ಮಂಜೂರು ಮಾಡಿಸಿದ್ದ ಶಾಸಕರು ಎಲ್ಲಾ ಕಾಮಗಾರಿಗಳಿಗೆ ವಿಧಾನಸಭಾ ಚುನಾವಣಾ ಸಮೀಪದ ವೇಳೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಶೀಲಾನ್ಯಾಸ ನೆರವೇರಿಸಲಾಗಿತ್ತು.

ಕಾಮಗಾರಿ ಸಂಪೂರ್ಣ ಸ್ಥಗಿತ: ಕಾಮಗಾರಿಯು ನಗರದ ಹೃದಯ ಭಾಗದಿಂದ ಆರಂಭವಾಗಬೇಕಾಗಿದ್ದ ಕಾಮಗಾರಿ ನಗರದ ಹೊರ ವಲಯದಲ್ಲಿರುವ ಕುಪ್ಪಂ ಕಾಲುವೆ, ಶಂಕನಪುರ ಬಡಾವಣೆಗಳಲ್ಲಿ ನಾಲೆಯ ಕಾಮಗಾರಿ ಆರಂಭಗೊಂಡಿತ್ತು. ಆದರೆ ಹೊರ ವಲಯದಲ್ಲಿ ಕಾಮಗಾರಿ ಮುಗಿಯುತ್ತಿದ್ದು, ಹೃದಯಭಾಗದಲ್ಲಿರುವ ನಾಲೆಗೆ ಕೈ ಹಾಕದೆ ಗುತ್ತಿಗೆದಾರರು ಸಂಪೂರ್ಣ ನೆನೆಗುದಿಗೆ ಬಿದ್ದಿದೆ.

ಅಕ್ರಮ ಒತ್ತುವರಿ: ಕಬಿನಿ ನಾಲಾ ವಿಭಾಗಕ್ಕೆ ಸೇರಿದ ಕಾಮಗಾರಿಯ ನಾಲೆಯ ಮುಗ್ಗುಲಲ್ಲೇ ಹಲವಾರು ಸಾರ್ವಜನಿಕರು ಅಕ್ರಮ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ನಗರಸಭೆಯ ಅಧಿಕಾರಿಗಳು ಅಕ್ರಮ ಒತ್ತುವರಿ ಸ್ಥಳಗಳನ್ನು ತೆರವು ಮಾಡಿಕೊಟ್ಟ ಪಕ್ಷದಲ್ಲಿ ಕಾಮಗಾರಿ ಸುಸಲಿತವಾಗಿ ನಡೆಯಲು ಸಾದ್ಯವಾಗುತ್ತಿತ್ತು. ಆದರೆ ಇತ್ತ ತೆರವು ಕಾರ್ಯವು ಆಗಿಲ್ಲ, ಕಾಮಗಾರಿಯು ಆಗದೆ ಸಂಪೂರ್ಣ ನೆಲಕಚ್ಚಿದೆ.

ನಾಲೆ ಉದ್ದಕ್ಕೂ ಗಿಡ ಗಂಟಿಗಳು: ನಾಲೆಯು ಸುಮಾರು ಎರಡು ಕಿ.ಮೀ. ಉದ್ದದ ನಾಲೆಯಾಗಿದ್ದು, ನಾಲೆಯ ಉದ್ದಕ್ಕೂ ಗಿಡಗಂಟಿಗಳು ಅಣಬೆಯಂತೆ ಬೆಳೆದು ನಿಂತಿದ್ದು, ನಾಲೆಯಲ್ಲಿ ಹೂಳು ಅಪಾರವಾಗಿ ಶೇಖರಣೆಯಾಗಿದೆ. ಇದರಿಂದ ನಾಲೆಯ ನೀರು ಸರಾಗವಾಗಿ ಹರಿದು ಹೋಗದೆ ನಿಂತಲ್ಲಿ ನಿಲ್ಲುವುದರಿಂದ ಗಬ್ಬು ವಾಸನೆಯೊಂದಿಗೆ ಕ್ರಿಮಿಕೀಟಗಳ ಬಾಧೆ ಭರಾಟೆಯಾಗಿದೆ.

ಗಬ್ಬುನಾರುವ ನಾಲೆ: ನಾಲೆಯ ಆಜುಬಾಜಿನಲ್ಲಿ ಇರುವ ಮೀನು, ಮಾಂಸ, ಕೋಳಿಯ ಅಂಗಡಿಯ ಮಾಲೀಕರು ಪ್ರಾಣಿಗಳ ಕಸವನ್ನು ಇದೇ ನಾಲೆಗೆ ಬೀಸಾಡುತ್ತಾರೆ. ಮತ್ತೂಂದು ನಾಲೆಯ ಬದಿಯಲ್ಲಿರುವ ಬಾರಿನ ಮಾಲೀಕರು ಬಾರಿನಲ್ಲಿ ಸಂಗ್ರಹವಾದ ಎಲ್ಲಾ ತರಹದ ಕಸ ಮತ್ತು ಕೊಳಕನ್ನು ಇದೇ ನಾಲೆಗೆ ಬಿಸಾಡುವುದರಿಂದ ನಾಲೆಯಲ್ಲಿ ಗಬ್ಬು ನಾರುತ್ತಿದೆ. ಇದರಿಂದ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ವಾಸನೆಗೆ ಮೂಗು ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರ ಗೋಳು ಯಾವಾಗ ತಪ್ಪುತ್ತದೆ ಎಂದು ಜನರ ಪ್ರಶ್ನೆಯಾಗಿದೆ.

ಕಾಮಗಾರಿ: ನಾಲೆಯ ಕಾಮಗಾರಿಯನ್ನು ಹೃದಯಭಾಗದಿಂದ ಆರಂಭಿಸಬೇಕಾದ ಅಧಿಕಾರಿಗಳು ನಗರದ ಹೊರ ವಲಯದಲ್ಲಿ ಕಾಮಗಾರಿ ಆರಂಭಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿಯನ್ನು ಹೃದಯಭಾಗದಿಂದಲೇ ಆರಂಭಿಸಿದ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಗಬ್ಬುನಾರುತ್ತಿರುವ ವಾಸನೆಯಿಂದ ಮುಕ್ತಿ ಸಿಕ್ಕಿದಂತೆ ಆಗುತ್ತಿತ್ತು. ಆದರೆ ಹೊರ ವಲಯದಿಂದ ಕಾಮಗಾರಿ ಆರಂಭವಾಗಿರುವುದು ಗಬ್ಬು ವಾಸನೆಗೆ ಮುಕ್ತಿ ಯಾವಾಗ ಎಂಬುದು ಯಕ್ಷಪ್ರಶ್ನೆಯಾಗಿದೆ.

ಇಂದು ಮೈಸೂರಿನಲ್ಲಿ ಸಭೆ: ಏ.22ರಂದು ಮೈಸೂರಿನ ಕಬಿನಿ ನಾಲಾ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್‌ ಅವರು ಸಭೆಯೊಂದನ್ನು ಕರೆಯಲಾಗಿದ್ದು, ನಗರದ ಸರ್ಕಟನ್‌ ನಾಲೆಯ ಕಾಮಗಾರಿ ಮಿಷನ್‌ಗಳ ಕೊರತೆ ಯಿಂದಾಗಿ ನಿಲುಗಡೆಯಾಗಿರುವ ಬಗ್ಗೆ ಚರ್ಚೆಯಾಗಲಿದ್ದು, ಕಾಮಗಾರಿ ಪೂರ್ಣಗೊಳ್ಳಲು ಸಭೆಯಲ್ಲಿ ನಿರ್ಣಯ ವಾಗಲಿದೆ ಎಂದು ಕಾವೇರಿ ಮತ್ತು ಕಬಿನಿ ಉಪ ವಿಭಾಗದ ನಿಗಮದ ಕಾರ್ಯಪಾಲಕ ಅಭಿಯಂತರರಾದ ರಘು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರಿಂದ ಸರ್ಕಟನ್‌ ನಾಲಾ ಕಾಮಗಾರಿ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಈಗ ಚುನಾವಣೆ ಮುಗಿದಿದ್ದು, ಅಧಿಕಾರಿಗಳ ಗಮನ ಸೆಳೆದು ಸ್ಥಗಿತಗೊಂಡಿರುವ ಕಾಮಗಾರಿಗೆ ಕೂಡಲೇ ಚಾಲನೆ ನೀಡಲಾಗುವುದು.
-ಎನ್‌.ಮಹೇಶ್‌, ಶಾಸಕ

* ಡಿ.ನಟರಾಜು

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.