ಆತ್ಮವಿಶ್ವಾಸದಿಂದ ಜನಗಣತಿ ಕಾರ್ಯನಿರ್ವಹಿಸಿ


Team Udayavani, Mar 12, 2020, 3:00 AM IST

atmavishvasa

ಚಾಮರಾಜನಗರ: ಜನಗಣತಿ ದೇಶದ ಅಭಿವೃದ್ಧಿಯ ನೀಲನಕ್ಷೆಯಾಗಿದೆ. ಇದರ ಕಾರ್ಯವನ್ನು ನಿಖರ, ಆತ್ಮವಿಶ್ವಾಸ ಹಾಗೂ ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯದಿಂದ ಭಾರತದ ಜನಗಣತಿ – 2021ರ ಕುರಿತು ಕ್ಷೇತ್ರ ತರಬೇತುದಾರರಿಗೆ ಆಯೋಜಿಸಲಾಗಿರುವ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಹಿತಿ ನಿಖರವಾಗಿರಲಿ: ಜನಗಣತಿಯನ್ನು ರಾಷ್ಟ್ರದ ಪ್ರಗತಿಯ ಸೂಚಕವಾಗಿ ಪರಿಗಣಿಸಲಾಗುತ್ತದೆ. ಈ ಅಂಕಿ ಅಂಶದ ಆಧಾರದಲ್ಲೇ ಯೋಜನೆಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಈ ಮಾಹಿತಿಯು ನಿಖರವಾಗಿರಬೇಕು. ಇದಕ್ಕಾಗಿ ಈ ಪ್ರಕ್ರಿಯೆಯ ಮಹತ್ವ ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ತರಬೇತುದಾರರು ಮುಂದೆ ಗಣತಿದಾರರಿಗೆ ಜನಗಣತಿ ಪ್ರಕ್ರಿಯೆ ಕುರಿತು ತರಬೇತಿ ನೀಡುವುದರಿಂದ, ಈ ಕಾರ್ಯಾಗಾರದಲ್ಲಿ ಎಲ್ಲಾ ಪ್ರಶ್ನೆ ಹಾಗೂ ಸಮಸ್ಯೆಗಳಿಗೆ ಉತ್ತರ ಪಡೆದುಕೊಳ್ಳಬೇಕು. ಜನಗಣತಿಯ ಬಗ್ಗೆ ಸಂಪೂರ್ಣ ಮಾಹಿತಿ ಅರಿಯಬೇಕು. ಗಣತಿಯ ಬಗೆಗೆ ಜ್ಞಾನ ಮತ್ತು ಪರಿಜ್ಞಾನ ಎರಡನ್ನೂ ಹೊಂದಿರಬೇಕು. ಆಗ ಮಾತ್ರ ಉತ್ತಮ ಫ‌ಲಿತಾಂಶ ಸಾಧಿಸಲು ಸಾಧ್ಯ ಎಂದರು.

ಆಲೋಚನಾ ಶಕ್ತಿ, ತಾಳ್ಮೆ ಇರಲಿ: ಕ್ಷೇತ್ರ ತರಬೇತುದಾರರು ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸೂಪರೆಸರ್‌, ಗಣತಿದಾರರಿಗೆ ತರಬೇತಿ ನೀಡುವುದರಿಂದ, ಅವರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುವಂತ ಆಲೋಚನಾ ಶಕ್ತಿ ಹಾಗೂ ತಾಳ್ಮೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಕ್ಷೇತ್ರ ತರಬೇತಿದಾರರು ತರಬೇತಿ ಅವಧಿಯಲ್ಲಿ ಜನಗಣತಿ ಕಾರ್ಯ ಕುರಿತು ಮನವರಿಕೆ ಮಾಡಿಕೊಂಡು ಆತ್ಮವಿಶ್ವಾಸ ಪಡೆದುಕೊಂಡರೆ ಗಣತಿದಾರರನ್ನು ಸಹ ಜನಗಣತಿ ಕಾರ್ಯಕ್ಕೆ ಸಜ್ಜುಗೊಳಿಸಬಹುದು ಎಂದು ಸಲಹೆ ಮಾಡಿದರು.

ಗಣತಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣ: ಗಣತಿ ಪ್ರಕ್ರಿಯೆ ಈಗ ಸಂಪೂರ್ಣ ಡಿಜಿಟಲೀಕರಣಗೊಂಡಿದ್ದು, ಗಣತಿ ಕಾರ್ಯವನ್ನು ಸುಲಭಗೊಳಿಸಿದೆ. ಮೊಬೈಲ್‌ ಆ್ಯಪ್‌ ಮೂಲಕ ಗಣತಿ ಕಾರ್ಯವನ್ನು ನಿರ್ವಹಿಸಬೇಕಿದೆ. ಎಲ್ಲವನ್ನೂ ಅರ್ಥೈಸಿಕೊಂಡು, ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ದೋಷ ರಹಿತವಾಗಿ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಬೇಕು. ಗುಣಮಟ್ಟದ ಗಣತಿಯನ್ನು ಸಾಧಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ತಿಳಿಸಿದರು.

ರೇಷ್ಮೆ ಇಲಾಖೆಯ ಉಪನಿರ್ದೇಶಕ ಹಾಗೂ ಮಾಸ್ಟರ್‌ ಟ್ರೆçನರ್‌ ವೃಷಬೇಂದ್ರ ಕುಮಾರ್‌ ಮತ್ತು ಉಪನ್ಯಾಸಕರು ಹಾಗೂ ಮಾಸ್ಟರ್‌ ಟ್ರೆçನರ್‌ ಪೊ›.ಗಣೇಶ್‌ ಕ್ಷೇತ್ರ ತರಬೇತುದಾರರಿಗೆ ಜನಗಣತಿ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಜನಗಣತಿಯ ಜಿಲ್ಲಾ ನೋಡಲ್‌ ಅಧಿಕಾರಿ ಜಗದೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.