“ಈಶ್ವರಪ್ಪ ಮನಸ್ಸಲ್ಲಿ ಬಿಜೆಪಿ ಸೋಲಿನ ಬಯಕೆ’
Team Udayavani, Apr 4, 2017, 12:04 AM IST
ಚಾಮರಾಜನಗರ: “ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ನಡುವೆ ವೈಮನಸ್ಯವಿದೆ. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಸೋಲಬೇಕು ಎಂಬುದು ಈಶ್ವರಪ್ಪನ ಮನಸ್ಸಿನಲ್ಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಲಿ ಮಾಡಿದರು.
ಕ್ಷೇತ್ರ ವ್ಯಾಪ್ತಿಯ ಚಿಕ್ಕಾಟಿ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿ, ಪ್ರಚಾರ ಭಾಷಣ ಮಾಡಿದ ಸಂದರ್ಭದಲ್ಲಿ ಕಾರ್ಯಕರ್ತನೊಬ್ಬ ಈಶ್ವರಪ್ಪ ಹೆಸರು ಹೇಳಿದಾಗ, ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಈಶ್ವರಪ್ಪನಿಗೆ ಮೆದುಳಿಲ್ಲ. ಆತನ ಬಗ್ಗೆ ಮಾತನಾಡಲ್ಲ’ ಎಂದರು.
ಮತ್ತೆ ಮಾತು ಮುಂದುವರಿಸಿದ ಅವರು, ಈಶ್ವರಪ್ಪ-ಯಡಿಯೂರಪ್ಪ ಪರಸ್ಪರ ಆಗದ ಕಾರಣ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲುವ ಬಯಕೆ ಈಶ್ವರಪ್ಪನಿಗಿದೆ. ಸಿಎಂ ಆಗಿದ್ದಾಗ ಜಿಲ್ಲಾ ಕೇಂದ್ರಕ್ಕೆ ಬಾರದ ಬಿಎಸ್ವೈಗೆ ಇದೀಗ ವೋಟು ಕೇಳಲು ನಾಚಿಗೆಯಾಗಬೇಕು ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಪರೇಷನ್ ಕಮಲದ ಮೂಲಕ ಚುನಾವಣಾ ವ್ಯವಸ್ಥೆ ಭ್ರಷ್ಟಗೊಳಿಸಿದವರೇ ಬಿಜೆಪಿಯವರು ಎಂದು ಕಿಡಿಕಾರಿದರು.
ಬಿಜೆಪಿ ಅಭ್ಯರ್ಥಿ ನಿರಂಜನ್ ಪತ್ನಿ ಕಣ್ಣೀರು
ಗುಂಡ್ಲುಪೇಟೆ: ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಮಾತನಾಡುತ್ತಾ, ಇದು ನನ್ನ ಬದುಕಿನ ಪ್ರಶ್ನೆ. ಚುನಾವಣೆಯಲ್ಲಿ ನಿರಂತರವಾಗಿ ಸೋಲು ಕಂಡು ಬದುಕನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದೇನೆ ಎಂದರು. ಈ ವೇಳೆ ನಿರಂಜನ್ ಪಕ್ಕದಲ್ಲೇ ನಿಂತಿದ್ದ ಸವಿತಾ ಕಣ್ಣೀರು ಒರೆಸಿಕೊಂಡ ದೃಶ್ಯ ಸಾರ್ವಜನಿಕರನ್ನು ಕ್ಷಣಕಾಲ ಭಾವುಕರನ್ನಾಗಿಸಿತು.
ಸಿಪಿಐನಿಂದ ಕಾಂಗ್ರೆಸ್ಗೆ ಬೆಂಬಲ
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ಸಿಪಿಐ ನಿರ್ಧರಿಸಿದೆ. ಮಾರ್ಚ್ 30ರಂದು ಹಾಸನದಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು, ಕೋಮುವಾದದ ಜತೆಗೆ ಅರೆ ಫ್ಯಾಸಿಸ್ಟ್ ಮನೋಭಾವ ಹೊಂದಿರುವ ಬಿಜೆಪಿಯನ್ನು ಸೋಲಿಸುವ ದೃಷ್ಠಿಯಿಂದ ಕಾಂಗ್ರೆಸ್ಗೆ ಸ್ವಯಂಪ್ರೇರಣೆಯಿಂದ ಬೆಂಬಲ ನೀಡುತ್ತಿರುವುದಾಗಿ ತಿಳಿಸಿದೆ. ಕೇಂದ್ರದ ಬಿಜೆಪಿ ಸರ್ಕಾರ ಮಹದಾಯಿ, ಕಾವೇರಿ ವಿವಾದದಲ್ಲಿ ರಾಜ್ಯದ ಜನತೆಗೆ ಅನ್ಯಾಯ ಮಾಡಿರುವುದು, ಕಸ್ತೂರಿ ರಂಗನ್ ವರದಿ ಜಾರಿ, ರೈತರ ಸಾಲಮನ್ನಾ ಮಾಡಲು ವಿಫಲವಾಗಿರುದನ್ನು ವಿರೋಧಿಸಿ, ಕಾಂಗ್ರೆಸ್ಗೆ ಬೆಂಬಲ ಸೂಚಿಸಲು ತೀರ್ಮಾನಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ