ಯೋಗದಿಂದ ರೋಗ ಮುಕ್ತ ಜೀವನ


Team Udayavani, Jun 22, 2019, 3:00 AM IST

yog-chama

ಚಾಮರಾಜನಗರ: ಅನೇಕ ಅಂತಾರಾಷ್ಟ್ರೀಯ ದಿನಗಳನ್ನು ಭಾರತೀಯರು ಆಚರಿಸುತ್ತೇವೆ. ಹಾಗೆಯೇ ಭಾರತ ದೇಶವು ವಿಶ್ವಕ್ಕೆ ನೀಡಿರುವ ಯೋಗ ದಿನವನ್ನು ಭಾರತೀಯರೆಲ್ಲ ಆಚರಿಸಿದರೆ ದೇಶಕ್ಕೆ ಗೌರವ ಸಲ್ಲಿಸಿದಂತೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಆಯುಷ್‌ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಎಸ್‌ಪಿವೈಎಸ್‌ಎಸ್‌ ಮತ್ತು ನೆಹರು ಯುವಕೇಂದ್ರದ ಸಂಯುಕ್ತಾಶ್ರಯದಲ್ಲಿ ನಡೆದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯೋಗದಿಂದ ಉತ್ತಮ ಆರೋಗ್ಯ: 2013-14ರಿಂದ ಇಡೀ ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದ್ದು, ಆಯುಷ್‌ ಇಲಾಖೆ ಹೇಳುವಂತೆ ಕೆಲವೇ ಕೆಲವು ಯೋಗಾಸನಗಳನ್ನು ಪ್ರತಿ ದಿನ ಒಂದು ಗಂಟೆ ಕಾಲ ಮಾಡಿದರೆ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತ ರಾಗಿರಬಹುದು ಎಂದರು.

ಯೋಗ ದಿನ ಆಚರಿಸುವುದು ಹೆಮ್ಮೆ: ಇಡೀ ವಿಶ್ವಕ್ಕೆ ಭಾರತ ದೇಶದಿಂದ ಕೊಡುಗೆಯಾಗಿ ನೀಡಿರುವ ಏಕೈಕ ದಿನಾಚರಣೆ ಎಂದರೆ ಅದು ಯೋಗ ದಿನವಾಗಿದ್ದು, ದೇಶದ ಪ್ರತಿಯೊಬ್ಬರೂ ಯೋಗ ದಿನವನ್ನು ಆಚರಿಸುವಂತಾಗಬೇಕು. ಯೋಗ ದಿನವನ್ನು ಆಚರಿಸುವುದು ಭಾರತೀಯರೆಲ್ಲರ ಹೆಮ್ಮೆಯಾಗಿದೆ ಎಂದರು.

ಯೋಗ ಜೀವನದ ಒಂದು ಭಾಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾ ಕುಮಾರಿ ಮಾತನಾಡಿ, ಭಾರತೀಯರ ಯೋಗ ಮಹತ್ವದ ಘಟ್ಟವನ್ನು ಮುಟ್ಟುವ ಮೂಲಕ ಸಾಧನೆ ಮಾಡಿದೆ. ಯೋಗ ವ್ಯಾಯಾಮ ಅಷ್ಟೇ ಅಲ್ಲ. ಜೀವನದ ಭಾಗ ಹಾಗೂ ಜೀವನದ ವಿಧಾನವೂ ಆಗಿದೆ ಎಂದರು.

ಪ್ರತಿಯೊಬ್ಬರಿಗೂ ಯೋಗ ಅವಶ್ಯಕ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ ಕುಮಾರ್‌ ಮಾತನಾಡಿ, ಪ್ರತಿಯೊಬ್ಬರ ಜೀವನಕ್ಕೂ ಯೋಗ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ದೃಢವಾಗಿರಲು ಯೋಗ ಸಹಕಾರಿಯಾಗಿದೆ. ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕಬೇಕು ಎಂಬುದು ಯೋಗದ ಚಿಂತನೆಯಾಗಿದೆ ಎಂದರು.

ದೈಹಿಕ ಸಾಮರ್ಥ್ಯ ಹೆಚ್ಚಳ: ಯೋಗ ಅಭ್ಯಾಸ ಮತ್ತು ಕ್ರೀಡೆ ಪಠ್ಯದ ಜೊತೆಗೆ ವಿದ್ಯಾರ್ಥಿಗಳು ಕಲಿಯಬೇಕು. ಯೋಗ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸಾಮರ್ಥಯವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗಿದೆ ಎಂದರು.

ಎಎಸ್ಪಿ ಅನಿತಾ, ಜಿಪಂ ಉಪಕಾರ್ಯದರ್ಶಿ ಹನುಮನರಸಯ್ಯ, ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಆರ್‌. ರಾಚಯ್ಯ, ಪ್ರಭಾರ ಡಿಡಿಪಿಐ ಮಂಜುನಾಥ್‌, ಡಾ. ಮಲ್ಲಣ್ಣ ತೋಟದಪ್ಪ , ಮೈಸೂರಿನ ಡಾ.ನಟರಾಜ್‌, ಶ್ರೀನಿವಾಸ ಕೊತಬಾಳ್‌, ಎಸ್‌ಪಿವೈಎಸ್‌ಎಸ್‌ ನ ಯೋಗಗುರು ಬಿ.ಪಿ. ಪ್ರಕಾಶ್‌ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಪ್ರಕೃತಿ ಮತ್ತು ಯೋಗ ಕೇಂದ್ರದ ವೈದ್ಯೆ ಡಾ. ಎಲ್‌. ಮಾನಸಾ ಯೋಗಾಭ್ಯಾಸಗಳ ನಿರ್ದೇಶನ ನೀಡಿದರು.

ವಿವಿಧ ಆಸನಗಳು: ಬೆಳಗ್ಗೆ 6.45 ರಿಂದ 8 ಗಂಟೆಯವರೆಗೂ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಶಿಥಲೀಕರಣ ವ್ಯಾಯಾಮ, ತಾಡಾಸನ, ವೃಕ್ಷಾಸನ, ಅರ್ಧಚಕ್ರಾಸನ, ಪಾದಹಸ್ತಾಸನ, ತ್ರಿಕೋನಾಸನ, ಸಮದಂಡಾಸನ, ವಜ್ರಾಸನ, ಭದ್ರಾಸನ, ಮಂಡೂಕಾಸನ, ವಕ್ರಾಸನ,

ಉಸಿರಾಟ ಶಶಾಂಕಾಸನ, ಭುಜಂಗಾಸನ, ಶಲಭಾಸನ, ಅರ್ಧ ಹಲಾಸನ, ಉತ್ತಿತ ಪಾದಾಸನ, ಸೇತುಬಂಧಾಸನ, ಪವನಮುಕ್ತಾಸನಗಳ ಅಭ್ಯಾಸ ನಡೆಯಿತು.ಬಳಿಕ ಕಪಾಲಬಾತಿ, ನಾಡಿಶೋಧನ, ಶೀತಲೀ, ಭ್ರಮರೀ ಪ್ರಾಣಾಯಾಮ ಮಾಡಿಸಲಾಯಿತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.