ಆಸ್ಪತ್ರೆಯಲ್ಲಿ ಸಮರ್ಪಕ ಸೇವೆ ಸಿಗದೆ ಯುವಕ ಸಾವು: ಆರೋಪ
Team Udayavani, Sep 19, 2022, 7:45 PM IST
ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಆ್ಯಂಬುಲೆನ್ಸ್ ನಲ್ಲಿ ಸಮರ್ಪಕ ಸೇವೆ ಸಿಗದೆ ಯುವಕನೊಬ್ಬ ಮೃತಪಟ್ಟಿರುವ ಆರೋಪ ಕೇಳಿಬಂದಿದೆ.
ಚಿತ್ರದುರ್ಗ ಮೂಲಕ ಅನಿಲ್ (32) ಮೃತಪಟ್ಟ ಯುವಕ. ಇವರು ಕುಟುಂಬ ಸಮೇತವಾಗಿ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಮಿಸಿ ದರ್ಶನ ಮುಗಿಸಿ ವಾಪಸ್ ಬರುವಾಗ ಉಸಿರಾಟದ ಸಮಸ್ಯೆ ಉಂಟಾಗಿದೆ. ತಕ್ಷಣ ಆ್ಯಂಬುಲೆನ್ಸ್ ನಲ್ಲಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆತಲಾಯಿತು. ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಖಾಸಗಿ ಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾಗಲೇ ಮೃತಟ್ಟಿದ್ದರು ಎಂದು ಮೃತರ ಸಂಬಂಧಿಗಳು ಆರೋಪಿಸಿದರು.
ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗುತ್ತದೆ. ಜೀವ ಉಳಿಯುತ್ತದೆ ಎಂಬ ಆಸೆಯೊಂದಿಗೆ ಬಂದರೆ ಇಲ್ಲೆ ಜೀವ ಹೋಯಿತು. ಏಕೆ ಆಸ್ಪತ್ರೆಗೆ ಬರಬೇಕು ಎಂದು ಪತ್ನಿ ಲಕ್ಷ್ಮೀ ಹಾಗೂ ಕುಟುಂಬಸ್ಥರು ರೋಧಿಸಿದರು.
ಈ ಕುರಿತು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಂಜುನಾಥ್ ಪ್ರತಿಕ್ರಿಯೆ ನೀಡಿ, ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಆಗಿಲ್ಲ. ಮೃತ ಯುವಕರಿಗೆ ಕಾರ್ಡಿಯಕಾರೆಸ್ಟ್ ಆಗಿದೆ. ಆಕ್ಸಿಜನ್ ಕೊಟ್ಟು ಮೈಸೂರಿಗೆ ಕಳುಹಿಸುವ ಸಂದರ್ಭದಲ್ಲಿ ಆಯಿತು. ಮತ್ತೆ ಒಳಗೆ ಕರೆದು ಚಿಕಿತ್ಸೆ ನೀಡಿದರೂ ಪ್ರಯೋಜನ ಆಗಲಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?