ಅನುದಾನವಿಲ್ಲದೆ ಅರ್ಧಕ್ಕೆ ನಿಂತ ಹಾಸ್ಟೆಲ್ ಕಾಮಗಾರಿ
ವಿವಿಯ 40 ಲಕ್ಷ ರೂ.ಗಳಲ್ಲಿ ನಡೆದಿತ್ತು ಕಾಮಗಾರಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು 2.60 ಕೋಟಿ ರೂ. ಪ್ರಸ್ತಾವನೆ
Team Udayavani, Oct 10, 2019, 11:23 AM IST
ಶಶೀಂದ್ರ ಸಿ.ಎಸ್. ಮೇಕೆರ್
ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತ್ತಕೋತ್ತರ ಕೇಂದ್ರದ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ದಾವಣಗೆರೆ ವಿಶ್ವವಿದ್ಯಾಲಯ ಅನುದಾನದಲ್ಲಿ ನಿರ್ಮಿಸುತ್ತಿರುವ ಮಹಿಳಾ ಪಿಜಿ ಹಾಸ್ಟೆಲ್ ಕಟ್ಟಡ ಕಾಮಗಾರಿ ಸರ್ಕಾರದ ಅನುದಾನ ದೊರೆಯದೇ ಅರ್ಧದಲ್ಲೇ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಚನ್ನಗಿರಿಯ ಸ್ನಾತಕೋತ್ತರ ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 2015ರಲ್ಲಿ ಯುಜಿಸಿಗೆ ಪತ್ರ ಬರೆದು ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿ ಪಡೆಯಲಾಯಿತು. ದಾವಣಗೆರೆ ವಿವಿಯ ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಲಾಯಿತು. ಮೊದಲ ಹಂತದಲ್ಲಿ ದಾವಣಗೆರೆ ವಿವಿ 40 ಲಕ್ಷ ರೂ. ಅನುದಾನ ಮಂಜೂರು ಮಾಡಿತು. ಉಳಿದ 2.60 ಕೋಟಿ ವೆಚ್ಚದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು.
ಕಟ್ಟಡ ಕಾಮಗಾರಿ ಹೊಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಆದರೆ ಸರ್ಕಾರದಿಂದ ಈವರೆಗೂ ಯಾವುದೇ ಅನುದಾನ ಬಂದಿಲ್ಲ. ಪ್ರಾರಂಭದಲ್ಲಿ ಹಾಸ್ಟೆಲ್ ಕಟ್ಟಡ ಕಾಮಗಾರಿ ಚೆನ್ನಾಗಿಯೇ ನಡೆಯಿತು. 40 ಲಕ್ಷ ರೂ. ಮುಗಿದ ನಂತರ ಹಣದ ಕೊರತೆಯಿಂದ ಸಂಬಂಧಪಟ್ಟವರು ಕೈಕಟ್ಟಿ ಕುಳಿತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯವರು ಅನುದಾನಕ್ಕಾಗಿ ಕಳೆದ 4 ವರ್ಷಗಳಿಂದ ಕಾಯುತ್ತಿದ್ದಾರೆ. ಕಟ್ಟಡ ಪೂರ್ಣಗೊಳ್ಳದೆ ಪಾಳು ಬೀಳುವ ಸ್ಥಿತಿಗೆ ತಲುಪಿದೆ. ಸುತ್ತಲೂ ಗಿಡಗಂಟಿ ಬೆಳೆದು ಕಟ್ಟಡವನ್ನೆಲ್ಲ ಆವರಿಸಿವೆ.
ಖಾಸಗಿ ರೂಂಗಳ ಮೊರೆ: ಹೊರಗಿನಿಂದ ಬರುವ ವಿದ್ಯಾರ್ಥಿಗಳು ಅನಿವಾರ್ಯವಾಗಿ ದುಬಾರಿ ಖಾಸಗಿ ರೂಂಗಳು ಹಾಗೂ ಮೆಸ್ ಮೊರೆ ಹೋಗಬೇಕಿದೆ. ಇದರಿಂದ ಉನ್ನತ ಶಿಕ್ಷಣ ಪಡೆಯುವುದು ಹೊರೆಯಾಗಿದ್ದು, ಬಡ ವಿದ್ಯಾರ್ಥಿಗಳ ಸಮಸ್ಯೆ ಕೇಳ್ಳೋರಿಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024