ಕಳಪೆ ಆಹಾರ ವಿತರಣೆಗೆ ಆಕ್ರೋಶ

ಅಂಗನವಾಡಿಯಲ್ಲಿ ಹಂಚಿಕೆ•ಹುಳು ಹಿಡಿದ ಧಾನ್ಯ ಪ್ರದರ್ಶಿಸಿದ ಸದಸ್ಯ

Team Udayavani, Aug 24, 2019, 10:38 AM IST

24-April-7

ಚನ್ನಗಿರಿ: ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾಗುತ್ತಿರುವ ಕಳಪೆ ಆಹಾರವನ್ನು ತಾಪಂ ಸದಸ್ಯ ಹಾಲೇಶ್‌ ನಾಯ್ಕ ಸಾಮಾನ್ಯ ಸಭೆಯಲ್ಲಿ ಪ್ರದರ್ಶಿಸಿದರು.

ಚನ್ನಗಿರಿ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಹಾಗೂ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುತ್ತಿದೆ ಎಂದು ಆರೋಪಿಸಿ ತಾಪಂ ಸದಸ್ಯ ಹಾಲೇಶ್‌ ನಾಯ್ಕ ಹುಳುಗಳಿದ್ದ ಬೆಲ್ಲ, ಗೋಧಿ, ಹೆಸರುಕಾಳು ತಾಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ಮುಂದೆ ಪ್ರದರ್ಶಿಸಿದ ಘಟನೆ ನಡೆಯಿತು.

ಶುಕ್ರವಾರ ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಬಿ.ಆರ್‌. ರೂಪ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಇಲಾಖೆಗೆ ಕೋಟಿಗಟ್ಟಲೆ ಹಣ ನೀಡುವುದು ಕಚೇರಿಯಲ್ಲಿ ಕುಳಿತು ಹೋಗುವುದಕ್ಕೆ ಅಲ್ಲ, ಕಾಶಿಪುರ ಕ್ಯಾಂಪ್‌ನ ಅಂಗನವಾಡಿ ಕೇಂದ್ರದಲ್ಲಿ ಆಹಾರ ಧಾನ್ಯಗಳೆಲ್ಲ ಹುಳುಗಳಿಂದ ಕೂಡಿವೆ. ಇಂತಹ ಪದಾರ್ಥ ತಿಂದರೆ ಸಾವು ಕಟ್ಟಿಟ್ಟ ಬುತ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸದಸ್ಯ ಶ್ರೀಕಾಂತ್‌ ಇದಕ್ಕೆ ದನಿಗೂಡಿಸಿ, ಅಧಿಕಾರಿಗಳಿಗೆ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ ಎನ್ನುವಂತಾಗಿದೆ. ಶಾಲಾ ಮಕ್ಕಳ ಶೂ ಕಳಪೆ ಎಂದು ಸಾಬೀತಾದರೂ ಕ್ರಮ ಕೈಗೊಂಡ ಮಾಹಿತಿ ಇಲ್ಲ. ಕಳಪೆ ಆಹಾರ ಪೂರೈಕೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಪಂ ಇಒ ಮಾತನಾಡಿ, ಏಕೆ ಅಂಗನವಾಡಿಗಳ ಪರಿಶೀಲನೆ ನಡೆಸಿಲ್ಲ ಎಂಬುದಕ್ಕೆ ಉತ್ತರ ನೀಡಬೇಕು. ಸಮೀಕ್ಷೆ ನಡೆಸಿ ಇಂತಹ ಆಹಾರ ಬಳಸುವ ಅಂಗನವಾಡಿಗಳ ವಿವರ ನೀಡಬೇಕು ಎಂದು ಅಧಿಕಾರಿಗೆ ಸೂಚಿಸಿದರು.

ತಾಪಂ ಸದಸ್ಯೆ ಗಾಯಿತ್ರಿ, ಹಾಲೇಶ್‌ ನಾಯ್ಕ, ಪುಷ್ಪಾವತಿ ಮಾತನಾಡಿ, ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡವರ್ಗದ ಜನರ ಸುಲಿಗೆ ನಡೆದಿದೆ. ಔಷಧಿ ಹೊರಗಡೆಯಿಂದ ತರಿಸುತ್ತಾರೆ. ಕೆಲವು ವೈದ್ಯರು ಖಾಸಗಿ ಕ್ಲಿನಿಕ್‌ ಮಾಡಿದ್ದಾರೆ ಎಂದು ಆರೋಪಿಸಿದರು.

ಡಾ| ಗಿರಿ ಉತ್ತರಿಸಿ, ಆಸ್ಪತ್ರೆಯಲ್ಲಿ ಎಲ್ಲ ಔಷಧಿಗಳಿದ್ದು, ಹೊರಗಡೆಯಿಂದ ಔಷಧಿ ತರಿಸುತ್ತಿಲ್ಲ ಎಂದು ಉತ್ತರಿಸಿದರು.

ತಾಪಂ ಸದಸ್ಯೆ ಪುಷ್ಪಾವತಿ ಮಾತನಾಡಿ, ತೋಟಗಾರಿಕೆ ಇಲಾಖೆ ನೀಡಿದ ತರಕಾರಿ ಕಿಟ್ ಕಳಪೆ ಇದ್ದು, ಬಿತ್ತನೆ ಮಾಡಿದ ರೈತನಿಗೆ ಸಂಪೂರ್ಣ ನಷ್ಟವಾಗಿದೆ ಎಂದು ಸಭೆಗೆ ತಿಳಿಸಿದರು. ಈ ಕುರಿತು ಪರೀಶಿಲನೆ ನಡೆಸುವುದಾಗಿ ತೋಟಗಾರಿಕೆ ಅಧಿಕಾರಿ ತಿಳಿಸಿದರು.

ತಾಪಂ ಸದಸ್ಯೆ ಕವಿತಾ ಮಾತನಾಡಿ, ನವೀಲೆಹಾಳ್‌ ಸರ್ಕಾರಿ ಶಾಲೆ ಕಟ್ಟಡ ಶಿಥಿಲವಾಗಿದ್ದು, ಒಂದೇ ದಿನಕ್ಕೆ 20 ಮಕ್ಕಳು ಟಿಸಿ ಪಡೆದು ಖಾಸಗಿ ಶಾಲೆಗಳಿಗೆ ಹೋಗಿದ್ದಾರೆ. ಶಿಕ್ಷಣ ಇಲಾಖೆ ತಕ್ಷಣ ಶಾಲೆಯ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದರು.

ತಾಪಂ ಅಧ್ಯಕ್ಷೆ ರೂಪ, ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ ರವಿ, ಇಒ ಎಂ.ಆರ್‌. ಪ್ರಕಾಶ್‌ ಇದ್ದರು.

ಬಾಲಕರ ಹಾಸ್ಟೆಲ್ ಕಾಮಗಾರಿ ಕಳಪೆ
ಪಟ್ಟಣದ ಸಂತೆ ಮೈದಾನ ಸಮೀಪದ ಕಾಲೇಜ್‌ ಬಾಲಕರ ಹಾಸ್ಟೆಲ್ ನವೀಕರಣಕ್ಕೆ 56 ಲಕ್ಷ ಹಣ ಮಂಜೂರು ಆಗಿದೆ, ಈಗಾಗಲೇ ಶೇ. 70 ಹಣವನ್ನು ಬಿಡುಗಡೆ ಮಾಡಿಕೊಂಡಿದ್ದಾರೆ. ಅದರೆ ಕೆಲಸ ಮಾತ್ರ ಕಳಪೆ ಆಗಿದೆ. ಹಾಸ್ಟೆಲ್ ನವೀಕರಣ ಕುರಿತು ತನಿಖೆ ಆಗಬೇಕು ಎಂದು ತಾಪಂ ಸದಸ್ಯರು ಆಗ್ರಹಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.